ಕಾಳಗಿ: ತಾಲೂಕಿನ ಇಂಧನಕಲ್ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಟೆಂಗಳಿ ವಲಯ ಘಟಕದಿಂದ ಟೆನ್ನಿಸ್ ಬಾಲ್ ಟೂರ್ನಮೆಂಟ್ ಸೀಸನ್ -3 ನ್ನು ಚಿಂತನ್ ಎಸ್. ರಾಠೋಡ್ ಅವರು ರಿಬ್ಬನ್ ಕಟ್ ಮಾಡುವುದರ ಮೂಲಕ ಉದ್ಘಾಟಿಸಿ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಪ್ರತಿಯೊಬ್ಬ ಕ್ರೀಡಾಪಟು ಕ್ರೀಡಾ ಮನೋಭಾವದಿಂದ ಆಡುವ ಮೂಲಕ ಕ್ರೀಡೆಯೊಂದಿಗೆ ಎಲ್ಲರ ಮನಸ್ಸನ್ನು ಗೆಲುವುದರೊಂದಿಗೆ, ಉತ್ತಮ ಆಟಗಾರರಾಗಿ ಭಾರತೀಯ ಕ್ರಿಕೆಟ್ ತಂಡದಲ್ಲಿ ಆಡುವ ಅವಕಾಶ ಪಡೆದುಕೊಳುವಂತಾಗಲಿ ಎಂದು ಹೇಳಿದರು.
ವೀರೆಂದ್ರ ವಾಲಿ ಭೀಮೇಶ್ವರ ದೇವಸ್ಥಾನ ಅಧ್ಯಕ್ಷರು ಟೆಂಗಳಿಯವರು ತಮ್ಮವತಿಯಿಂದ ಎಲ್ಲಾ ಕ್ರಿಕೆಟ್ ತಂಡಗಳಿಗೆ ಟಿ -ಶರ್ಟ್ ವಿತರಿಸಿದರು. 10 ಕು ಹೆಚ್ಚು ಕ್ರಿಕೆಟ್ ಟೀಮ್ ಗಳು ಟೂರ್ನಮೆಂಟ್ ನಲ್ಲಿ ಭಾಗವಹಿಸಿದರು.
ಈ ಸಂಧರ್ಭದಲಿ ಟೆಂಗಳಿ ವಲಯದ ಕರವೇ ಮುಖ್ಯಸ್ಥರಾದ ರಉಫ್ ಅಫ್ಖಾನ್,ಅರ್ಜುನ್ ರಾಠೋಡ್ ಬಿಜೆಪಿ ಮುಖಂಡರು ಟೆಂಗಳಿ, ಹಣಮಂತರಾಯ್ ಗ್ರಾಮ ಪಂಚಾಯತ್ ಸದಸ್ಯರು ಡೋಣುರ್, ಮಹಮ್ಮದ್ ಮುಸ್ತಫಾ ಗ್ರಾಮ ಪಂಚಾಯತ್ ಸದಸ್ಯರು ಟೆಂಗಳಿ, ಮಹಮ್ಮದ್ ಹನೀಫ್ ಸಾಬ್ ಅಫಖಾನ್ ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ, ಹನುಮಂತರಾಯ ಬಳ್ಲದೆ ಬಿಜೆಪಿ ಯುವ ಮುಖಂಡರು ಟೆಂಗಳಿ, ರೂಸ್ತುಮ್ ಕರವೇ ಜಿಲ್ಲಾ ಸಮಿತಿ ಸದಸ್ಯರು ಕಲಬುರಗಿ, ಲಿಂಗಬಸವ ಕರವೇ ತಾಲೂಕ ಯುವ ಘಟಕ ಅಧ್ಯಕ್ಷ ಕಾಳಗಿ, ಮುಸ್ತಾನ್ ಸಾಬ್ ಕೊರವಿ, ಕಾಂಗ್ರೇಸ್ ಮುಖಂಡರು ಕಲಗುರ್ತಿ, ಸುರೇಶ ಹೊಸಮನಿ ಕರವೇ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಅನೇಕ ಕ್ರಿಕೆಟ್ ಅಭಿಮಾನಿಗಳು ಉಪಸ್ಥಿತರಿದ್ದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…