ಜಾನಪದ ಉತ್ಸವ ಜಾನಪದ ಕಲೆ ಉಳಿಸಿ ಕಲಾವಿದರನ್ನು ಬೆಳಸಿ

ಕಲಬುರಗಿ: ನಗರದ ಕಲಾಮಂಡಲದಲ್ಲಿ ಸರಸ್ವತಿ ಸಾಂಸ್ಕøತಿಕ ಕಲಾ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ನಡೆದ ಜಾನಪದ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕನ್ನಡ ಜಾನಪದ ಪರಿಷತ್ ಅಧ್ಯಕ್ಷರಾದ ಎಂ ಬಿ ನಿಂಗಪ್ಪ ಮುರುಡಿ ಉದ್ಘಾಟಿಸಿ ಮಾತನಾಡಿ ಜಾನಪದ ಕಲೆ ಈ ನಾಡಿನ ಸಂಪತ್ತು ಅದನ್ನು ನಾವು ಉಳಿಸಿ ಬೆಳೆಸಬೇಕು ಇದಕ್ಕೆ ಸಂಘ ಸಂಸ್ಥೆಗಳ ಪಾತ್ರ ಬಹಳ ಮುಖ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಘನ ಅಧ್ಯಕ್ಷತೆ ವಹಿಸಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬಾಬುರಾವ್ ಕೋಬಾಳ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಜನರು ಪಾಶ್ಚಾತ್ಯ ಸಂಗೀತಕ್ಕೆ ಹೆಚ್ಚಿನ ಮೊರೆ ಹೋಗುತ್ತಿದ್ದು ನಮ್ಮ ಸಾಂಪ್ರದಾಯಿಕ ಜಾನಪದ ಗೀತೆಗಳು ತತ್ವಪದಗಳ್ ಕಡೆಗೆ ಗಮನ ಕಡಿಮೆಯಾಗುತ್ತಿದ್ದು ಇಂತಹ ಸಾಂಪ್ರದಾಯಿಕ ಗೀತೆಗಳನ್ನ ಸಾಂಪ್ರದಾಯಿಕ ಸಂಗೀತ ಶೈಲಿಯನ್ನು ಬೆಳೆಸುವದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾದ ಆಕಾಶವಾಣಿ ಕಲಾವಿದ ಸೂರ್ಯಕಾಂತ್ ಡುಮ್ಮ, ಸಮಾಜ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಸಂಘದ ಉಪಾಧ್ಯಕ್ಷ ಶಿವಶಂಕರ್ ನಂದರಗಿ, ಗುಲ್ಬರ್ಗ ವಿಶ್ವವಿದ್ಯಾಲಯ ಮಾಜಿ ಸಿಂಡಿಕೇಟ್ ಸದಸ್ಯ ಡಾ. ಸುನಿಲಕುಮಾರ ಒಂಟಿ, ಉದ್ದೀಮೆದಾರ ಸಂತೋಷ್ ದೇವಣಿ, ಶ್ರೀದೇವಿ ಸಂಗೀತ ಸಾಹಿತ್ಯ ಛಾಯಾಚಿತ್ರ ಸಂಸ್ಥೆಯ ಕಾರ್ಯದರ್ಶಿ ಬಸವರಾಜ ತೋಟದ, ಪರ್ತಕರ್ತ ಸಂಜುಕುಮಾರ ಕಾಂಬಳೆ ಇದ್ದರು. ಟ್ರಸ್ಟ್ ಕಾರ್ಯದರ್ಶಿಯಾದ ಮಹೇಶ್ ಸಿ ದೇವಣಿ ಪ್ರಾಸ್ತಾವಿಕ ನುಡಿ ನುಡಿದರು. ನಿರುಪಣೆ ವಿಶ್ವನಾಥ ತೋಟ್ನಳ್ಳಿ ನಡೆಸಿಕೋಟ್ಟರು,

ಗಾಯನದಲ್ಲಿ : ಸುಗಮ ಸಂಗೀತ: ದತ್ತುಕುಮಾರ ದೇವಣಿ ಮತ್ತು ತಂಡ, ಜನಪದ ಗೀತೆ: ಗಂಗುಬಾಯಿ ತೋಟದ್ ಮತ್ತು ತಂಡ, ವಚನ ಗಾಯನ: ದೀಪಾ ಕಲಬುರಗಿ ಮತ್ತು ತಂಡ, ತತ್ವಪದ: ಶ್ರೀಮತಿ ಮಹಾದೇವಿ ಮುರಡಿ ಕಲಬುರಗಿ ಮತ್ತು ತಂಡ, ಜೋಗುಳ ಪದ: ಅಶ್ವಿನಿ ಕಲಬುರಗಿ ಮತ್ತು ತಂಡ ಪ್ರಸ್ತುತಪಡಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಗಮನ ಸೆಳೆದವು.

ವಿವಿಧ ಕ್ಷೇತ್ರದಲ್ಲಿ, ಸೇವೆಗೈದ ಗಣ್ಯರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು, ಪ್ರಶಸ್ತಿ ಪುರಸ್ಕೃತರಾದ, ಮಾಧ್ಯಮ ಸೇವ ರತ್ನ ಪ್ರಶಸ್ತಿ ಮಂಜುನಾಥ್ ಜಮಾದಾರ, ಆರೋಗ್ಯ ಸೇವ ರತ್ನ ಪ್ರಶಸ್ತಿ ಮಡಿವಾಳ ದೊಡ್ಮನಿ, ಜಾನಪದ ಸೇವ ರತ್ನ ಪ್ರಶಸ್ತಿ ಮಲ್ಲಪ್ಪ ದೊಡ್ಡಿ, ಶಿಕ್ಷಣ ಸೇವ ರತ್ನ ಪ್ರಶಸ್ತಿ ಅರುಂಧತಿ ದೇವಣಿ, ಕಾಯಕ ಸೇವ ರತ್ನ ಪ್ರಶಸ್ತಿ ಲಕ್ಷ್ಮಿಕಾಂತ್ ಮಕಾಶಿ , ಛಾಯಾ ಸೇವ ರತ್ನ ಪ್ರಶಸ್ತಿ ರಮೇಶ್ ಲಾಲ್ ಬುಂದ್ರೆ, ನೃತ್ಯ ಸೇವಾ ರತ್ನ ಪ್ರಶಸ್ತಿ ಕು.ಜ್ಯೋತಿ ಯನಗುಂಟಿ, ಸಮಾಜ ಸೇವಾ ರತ್ನ ಪ್ರಶಸ್ತಿ ಶರಣಗೌಡ ಪಡಶೆಟ್ಟಿ, ಸಮಾಜ ಸೇವಾ ರತ್ನ ಪ್ರಶಸ್ತಿ ಕವಿತಾ ಪವಾರ್, ಧರ್ಮ ಪ್ರಚಾರ ಸೇವಾ ರತ್ನ ಪ್ರಶಸ್ತಿ ನಾಗೇಂದ್ರ ನಿಂಬರಗಿ ರವರನ್ನು ಸನ್ಮಾನಿಸಲಾಯಿತು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

10 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

13 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

13 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

13 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

13 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420