ಸುರಪುರ: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಕಲೆ ಸಾಹಿತ್ಯ ಮತ್ತು ಸಂಗೀತದ ಆಸಕ್ತಿ ಮೂಡಿಸುವುದು ಅವಶ್ಯವಾಗಿದೆ.ಇದರಿಂದ ವಿದ್ಯಾರ್ಥಿಗಳಲ್ಲಿ ಕಲಾಸಕ್ತಿ ಬೆಳೆದು ಸಮಾಜಕ್ಕೆ ಮಾದರಿ ವ್ಯಕ್ತಿಗಳಾಗಲು ಸಾಧ್ಯವಿದೆ ಎಂದು ಮಾಜಿ ಸಚಿವ ಹಾಗು ಸ್ಕೌಟ್ಸ್ ಮತ್ತಯ ಗೈಡ್ಸ್ ಯಾದಗಿರಿ ಜಿಲ್ಲಾ ಸಮಿತಿ ಅಧ್ಯಕ್ಷ ರಾಜಾ ಮದನಗೋಪಾಲ ನಾಯಕ ಮಾತನಾಡಿದರು.
ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸುರಪುರ ತಾಲ್ಲುಕು ಸಮಿತಿಯಿಂದ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗಾಗಿ ತಾಲ್ಲೂಕು ಮಟ್ಟದ ಗೀತಗಾಯನ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ,ಸಂಗೀತ ಮತ್ತು ಕಲೆಗೆ ಯಾವುದೆ ವಯಸ್ಸಿನ ಮತ್ತು ಜಾತಿ ಧರ್ಮಗಳ ಹಂಗಿಲ್ಲ.ಸಂಗೀತ ಮತ್ತು ಸಾಹಿತ್ಯವನ್ನು ರೂಢಿಸಿಕೊಂಡ ಮಕ್ಕಳು ಆಟ ಪಾಠಗಳಲ್ಲೂ ಹೆಚ್ಚಿನ ಶ್ರದ್ಧೆ ಹೊಂದಲಿದ್ದಾರೆ.ಆದ್ದರಿಂದ ಶಿಕ್ಷಕರು ಮಕ್ಕಳಿಗೆ ಕಲೆ,ಸಂಗೀತ ಮತ್ತು ನೃತ್ಯ ಹಾಗು ಸಾಹಿತ್ಯದ ಅಭಿರುಚಿ ಮೂಡಿಸುವಂತೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನ್ಯಾಯವಾದಿ ಜಯಲಲಿತ ಪಾಟೀಲ ಮಾತನಾಡಿ,ಈ ರೀತಿಯ ಗೀತಗಾಯನ ಸ್ಪರ್ಧೆಗಳು ಮಕ್ಕಳಲ್ಲಿ ಕೌಶಲ್ಯಾಭೀವೃಧ್ಧಿ ಮುಡಿಸಲಿದೆ,ಜೊತೆಗೆ ಮಕ್ಕಳಲ್ಲಿ ಕಲೆ ಸಂಗೀತ ಮತ್ತು ಸಾಹಿತ್ಯದ ಬಗ್ಗೆ ಹೆಚ್ಚಿನ ಒಲವು ಮೂಡಲಿದೆ.ಆ ನಿಟ್ಟಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕಾರ್ಯ ಶ್ಲಾಘನಿಯವಾಗಿದೆ ಎಂದರು.
ವೇದಿಕೆ ಮೇಲೆ ಶಿಕ್ಷಣ ಪ್ರೇಮಿ ಬಸವರಾಜ ಜಮದ್ರಖಾನಿ,ಅಜೀಂ ಪ್ರೇಮಜಿ ಪೌಂಡೇಶನ್ನಿನ ಸಂಪನ್ಮೂಲ ವ್ಯಕ್ತಿ ಅನ್ವರ ಜಮಾದಾರ ಇದ್ದರು.ಗೀತ ಗಾಯನ ಸ್ಪರ್ಧೆಯ ನಿರ್ಣಾಯಕರಾಗಿ ನರಸಿಂಹ ಕುಲಕರ್ಣಿ ಬಾಡಿಯಾಳ, ಶ್ರೀಪಾದ ಗಡ್ಡದ ಭಾಗವಹಿಸಿದ್ದರು.ತಾಲ್ಲುಕಿನ ವಿವಿಧ ಶಾಲೆಗಳ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.ಸ್ಪರ್ಧೆಯಲ್ಲಿ ಪ್ರೇರಣಾ ಪ್ರೌಢಶಾಲೆ ಮಕ್ಕಳು ಪ್ರಥಮ,ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲ್ದಾಳ ಗ್ರಾಮದ ಮಕ್ಕಳು ದ್ವಿತೀಯ ಹಾಗು ಶ್ರೀಮತಿ ರಾಣಿ ಜಾನಕಿದೇವಿ ಪ್ರೌಢಶಾಲೆ ಹಾಗು ಡಾ:ಬಿ.ಆರ್.ಅಂಬೇಡ್ಕರ ಪ್ರೌಢಶಾಲೆ ಮಕ್ಕಳು ದ್ವಿತೀಯ ಸ್ಥಾನ ಪಡೆದರು.ಗೀತಾರಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು,ಶಿಕ್ಷಕ ರಾಜಶೇಖರ ದೇಸಾಯಿ ನಿರೂಪಸಿ ವಂದಿಸಿದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…