ತತ್ವಪದಗಳಿಂದ ಅಸ್ಮಿತೆಯ ಅರಿವು: ಸತ್ಯಂಪೇಟೆ

ಕಲಬುರಗಿ: ತತ್ವಪದಗಳು ನಮ್ಮ ಅಂತರಂಗವನ್ನು ದರ್ಶಿಸುವ ಮೂಲಕ ಅಸ್ಮಿತೆಯ ಅರಿವನ್ನು ಮೂಡಿಸುತ್ತವೆ. ಸಂಗೀತವು ಜೀವನ ಸಾರ್ಥಕ ಮಾಡಿಕೊಳ್ಳುವ ಸಾಧನಾಮಾರ್ಗ ಎಂದು ಪತ್ರಕರ್ತ-ಲೇಖಕ ಡಾ. ಶಿವರಂಜನ ಸತ್ಯಂಪೇಟೆ ಅಭಿಪ್ರಾಯಪಟ್ಟರು.

ಶ್ರೀ ಸದ್ಗುರು ಕಲಾ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕತಿ ಇಲಾಖೆ ಆಶ್ರಯದಲ್ಲಿ ನಗರದ ಗಂಜ್ ಕಾಲೋನಿಯ ಅಂಬಾ ಭವಾನಿ ದೇವಸ್ಥಾನದಲ್ಲಿ ಸೋಮವಾರ ಸಂಜೆ ಜರುಗಿದ ತತ್ವಪದ ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ತಾತ್ವಿಕ ದೃಷ್ಟಿಯಿಂದಲೇ ಜೀವನದ ರಹಸ್ಯವನ್ನು ಭೇದಿಸಲುತತ್ವಪದ ಹಾಗೂ ಸಂಗೀತ ಪ್ರೇರೇಪಿಸುತ್ತವೆ ಎಂದು ತಿಳಿಸಿದರು.

ಭಾರತೀಯ ಸಾಹಿತ್ಯ ಪರಂಪರೆಯಲ್ಲಿ ತತ್ವಪದಗಳ ಹಾಗೂ ತತ್ವಪದಕಾರರ ಬಹು ದೊಡ್ಡ ಪರಂಪರೆಯಿದ್ದು, ತತ್ವಪದಗಳನ್ನು ಅರಿತುಕೊಳ್ಳುವುದೆಂದರೆ ನಮ್ಮನ್ನು ನಾವು ಕಂಡುಕೊಳ್ಳುವ, ನಾವು ಯಾರು ಎಂದು ಹುಡುಕುವ ಹುಡುಕಾಟದ ಪ್ರಕ್ರಿಯೆಯಾಗಿದೆ. ಕೈವಾರ ನಾರಾಯಣಪ್ಪ, ಶಿಶುನಾಳ ಶರೀಫ, ಖೈನೂರು ಕೃಷ್ಣಪ್ಪ, ನಿಜಗುಣ ಶಿವಯೋಗಿ, ಕಡಕೋಳ ಮಡಿವಾಳಪ್ಪ ಇತರರ ತತ್ವಪದಗಳು ಬದುಕಿಗೆ ದಾರಿದೀಪವಾಗಿವೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಬಾಬುರಾವ ಕೋಬಾಳ ಮಾತನಾಡಿ, ಕಲೆಗಳಲ್ಲಿ ಶ್ರೇಷ್ಠ ಕಲೆ ಸಂಗೀತ. ಸಂಗೀತದ ಮೂಲಕ ಜೀವನದಲ್ಲಿ ಸ್ಫೂರ್ತಿ ಪಡೆಯಬಹುದು. ಸಂಗೀತಕ್ಕೆ ಜಾತಿ, ಧರ್ಮದ ಸೀಮಿತ ಹಂಗು ಇಲ್ಲ. ತತ್ವ ಹೀನ ಬದುಕಿಗಿಂತ ತತ್ವಬದ್ಧ ಬದುಕು ನಮ್ಮದಾಗಬೇಕು ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಶಿವರಾಜ ಕನಕಟ್ಟಾ, ಛಾಯಾ ಚಕ್ಕಿ, ಅಂಬಿಕಾ ಜಗನ್ನಾಥ ಮಾಲಿ ಪಾಟೀಲ, ಮಲ್ಲಿಕಾರ್ಜುನ ಬಾಳಿ ವೇದಿಕೆಯಲ್ಲಿದ್ದರು. ಅಂಬಾಭವಾನಿ ದೇವಸ್ಥಾನದ ಅರ್ಚಕ ಮಲ್ಲಯ್ಯ ಸ್ವಾಮಿ ನೇತೃತ್ವ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಶಿವಲಿಂಗಪ್ಪ ಕೆಂಗನಾಳ ನಿರೂಪಿಸಿದರು. ವಿಜಯಲಕ್ಷ್ಮಿ ಕೆಂಗನಾಳ ಸ್ವಾಗತಿಸಿದರು.

ನಂತರ ಬಸವಕುಮಾರ ಎಸ್.ಕೆ., ಶರಣಕುಮಾರ ಕರಿಬಾವಿ, ಜ್ಯೋತಿ ಎಸ್, ಲಕ್ಷ್ಮೀ ಎಂ. ಚಿಂಚೋಳಿ, ಬಸವರಾಜ ಸ್ಥಾವರಮಠ, ಅಣ್ಣಾರಾಯ ಶೆಳ್ಳಗಿ ಇತರರಿಂದ ತತ್ವಪದ ಸಂಗೀತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

13 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

13 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

13 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

13 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

13 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420