ತೊಗರಿ ಬೆಳೆ ಹಾನಿ: 500 ಕೋಟಿ ವಿಶೇಷ ಪ್ಯಾಕೇಜ್ ನೀಡುವಂತೆ ಸಿಎಂಗೆ ಪ್ರಿಯಾಂಕ್ ಖರ್ಗೆ ಪತ್ರ

ಕಲಬುರಗಿ: ಸರ್ಕಾರ ನೆಟೆರೋಗದಿಂದ ಹಾನಿಗೊಳಗಾದ ತೊಗರಿ ಬೆಳೆಗಾರರಿಗೆ 500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸುವ ಮೂಲಕ ಪ್ರತಿ ಎಕರೆ ಪ್ರದೇಶಕ್ಕೆ  25,000 ನಷ್ಟ ಪರಿಹಾರ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಶಾಸಕರಾದ ಪ್ರಿಯಾಂಕ್ ಖರ್ಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಇಡೀ ಏಷ್ಯಾ ಖಂಡದಲ್ಲೇ ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಬೆಳೆಯನ್ನು ಹೆಚ್ಚಾಗಿ ಬೆಳೆಯುತ್ತಿರುವುದರಿಂದ ಈ ಜಿಲ್ಲೆಗೆ ತೊಗರಿಯ ಕಣಜ ಎಂದೇ ಕರೆಯಲಾಗುತ್ತಿದೆ. ಈ ಭಾಗದ ರೈತರ ಪ್ರಮುಖ ಬೆಳೆಯಾದ ತೊಗರಿ ಇಲ್ಲಿನ ಜಮೀನಿಗಳಲ್ಲಿ ಹೆಚ್ಚಾಗಿ ಬಿತ್ತನೆ ಮಾಡಲಾಗುತ್ತಿದ್ದು, ಕಲಬುರಗಿ ಜಿಲ್ಲೆಯ ತೊಗರಿ ದೇಶದ ನಾನಾ ಭಾಗಗಳಿಗೆ ರವಾನೆ ಮಾಡಲಾಗುತ್ತಿದೆ. ಆದರೆ ಇತ್ತೀಚೆಗೆ ಎರಡು ವರ್ಷಗಳಿಂದ ಮಳೆ ಹೆಚ್ಚಿನ ಪ್ರಮಾಣದಲ್ಲಿ ಬೀಳುತ್ತಿರುವುದರಿಂದಾಗಿ ನಿರೀಕ್ಷಿತ ಪ್ರಮಾಣದಲ್ಲಿ ತೊಗರಿ ಫಸಲು ಬರುತ್ತಿಲ್ಲ ಎನ್ನುವುದು ಈ ಭಾಗದ ರೈತರ ಅಳಲಾಗಿದೆ.

ಈ ನಡುವೆ 2022-23 ರ ಸಾಲಿನಲ್ಲಿ 5.50 ಲಕ್ಷ ಹೆಕ್ಟೇ‌ರ್ ಪ್ರದೇಶದಲ್ಲಿ, ತೊಗರಿ ಬಿತ್ತನೆ ಗುರಿ ಹೊಂದಲಾಗಿತ್ತು. ಅದರಲ್ಲಿ 4.78 ಲಕ್ಷ ಹೆಕ್ಟೇರ್ ಬಿತ್ತನೆ ಮಾಡಲಾಗಿದೆ. ಆದರೆ, ಜಿಲ್ಲೆಯಲ್ಲಿ ಸುರಿದ ಅನಿಯಮಿತ ಮಳೆಯಿಂದಾಗಿ ಸುಮಾರು 1.30 ಲಕ್ಷ ಹೆಕ್ಟೇರ್ ಬಿತ್ತನೆ ಪ್ರದೇಶ ಸಂಪೂರ್ಣ ಹಾಳಾಗಿದೆ. ಎಡೆಬಿಡದೆ ಸುರಿದ ಮಳೆಯ ಪರಿಣಾಮ ಅತಿವೃಷ್ಟಿ ಸೃಷ್ಟಿಯಾಗಿ ತೊಗರಿ ಗಿಡಗಳು ಒಣಗ ತೊಡಗಿದ್ದು, ಆದರೂ ಕೂಡಾ ಅಷ್ಟೋ ಇಷ್ಟೋ ಫಸಲಿನ ನಿರೀಕ್ಷೆಯಲ್ಲಿದ್ದ ರೈತರು ಇದೀಗ ತೊಗರಿ ಬೆಳೆಗೆ ನೆಟೆ ರೋಗ ಕಾಣಿಸಿಕೊಂಡ ನಂತರ ತೀವ್ರ ಕಂಗಾಲಾಗಿದ್ದಾರೆ.

ತೊಗರಿ ಬೆಳೆಯ ಅದ್ಭುತ ಫಸಲಿನ ಕನಸು ಕಂಡಿದ್ದ ರೈತರಿಗೆ ಮೊದಲು ಅತಿವೃಷ್ಟಿ ಹೊಡೆತ ಕೊಟ್ಟರೆ, ಈಗ ನೆಟೆರೋಗ, ಭಾರೀ ಹೊಡೆತ ಕೊಟ್ಟಿದ್ದು ರೈತಾಪಿವರ್ಗ ತೀವ್ರ ಸಂಕಷ್ಟಕ್ಕೆ ಗುರಿಯಾಗಿದೆ. ಒಂದು ಅಂದಾಜಿನ ಪ್ರಕಾರ ಬಿತ್ತನೆಯಾದ 4,78 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 1.30 ಲಕ್ಷ ಹೆಕ್ಟೇರ್, ಅತಿವೃಷ್ಟಿಯಿಂದ ಹಾಳಾದರೆ, ಉಳಿದುದರಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಹೆಕ್ಟೇರ್ ಪ್ರದೇಶ  ನೆಟೆರೋಗದಿಂದ ಸಂಪೂರ್ಣ ಹಾಳಾಗಿದೆ. ಅಲ್ಲಿಗೆ ಅತಿವೃಷ್ಟಿ ಹಾಗೂ ನೆಟೆ ರೋಗದಿಂದ ಹಾಳಾದ ಬೆಳೆಯ ಪ್ರಮಾಣ ಶೇ 80% ರಿಂದ 90% ಅಂದಾಜಿಸಲಾಗಿದೆ. ಈ ನಷ್ಟವನ್ನು ಅಳಿದುಳಿದ ಬೆಳೆಯಿಂದ ತುಂಬಿಸಿಕೊಳ್ಳುವುದು ಹೇಗೆ ಎನ್ನುವ ಚಿಂತೆ ರೈತರನ್ನು ಮತ್ತಷ್ಟು ಹೈರಾಣಾಗಿಸಿದೆ.

ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಬೆಳೆಗಳು ಹಾನಿಯಾದಾಗ ವಿಶೇಷ ಪ್ಯಾಕೇಜ್ ನೀಡುವಂತೆ, ಈಗ ನೆಟೆ ರೋಗದಿಂದ ಹಾನಿಗೊಳಗಾದ ರಾಜ್ಯದ ತೊಗರಿ ಬೆಳೆಗಾರರಿಗೆ 500 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ರೈತರ ನೋವಿಗೆ ಸ್ಪಂದಿಸಿ ಜೊತೆಗೆ ಪ್ರತಿ ಎಕರೆ ಪ್ರದೇಶಕ್ಕೆ 25,000 ನಷ್ಟ ಪರಿಹಾರ ಬಿಡುಗಡೆ ಮಾಡಬೇಕು ಎಂದು ಅವರು ಪತ್ರ ಬರೆದು ಆಗ್ರಹಿಸಿದ್ದಾರೆ.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

9 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

9 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

9 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

9 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

9 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420