ಕಲಬುರಗಿ: ಕನ್ನಡ ಚಲನ ಚಿತ್ರದ ಮೇರು ನಟ ವಿಷ್ಣುವರ್ಧನ್ ಪುಣ್ಯ ಸ್ಮರಣೆ ಅಂಗವಾಗಿ ಸಂಗೀತ ತರಂಗಿಣಿ ಸಾಂಸ್ಕøತಿಕ ಹಾಗು ಸಾಮಾಜಿಕ ಸೇವಾ ಸಂಘ ಡಿಸೆಂಬರ್ 30 ರಂದು ಗಾನ ನಮನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ.
ಇದೇ ವೇಳೆ ಪತ್ರಕರ್ತ ಗೋಪಾಲ ಕುಲಕರ್ಣಿ ಸೇರಿದಂತೆ ವಿವಿಧ ಕ್ಷೇತ್ರದ 6 ಮಹನೀಯರಿಗೆ ಸಾಹಸಸಿಂಹ ಪ್ರಶಸ್ತಿ ನೀಡಿ ಗೌರವಿಸಲಿದೆ. ನಗರದ ಕನ್ನಡ ಭವನದಲ್ಲಿರುವ ಸುವರ್ಣ ಭವನದಲ್ಲಿ 30 ರಂದು ಸಂಜೆ 6 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾದ ಭವಾನಿ ಸಿಂಗ್ ಠಾಕೂರ್ ವಹಿಸಲಿದ್ದಾರೆ..ಮುಖ್ಯ ಅತಿಥಿಗಳಾಗಿ ಕಾಂಗ್ರೆಸ್ ಮುಖಂಡ ನೀಲಕಂಠರಾವ್ ಮುಲಗೆ ಹಾಗು ಕಸಾಪ ಅಧ್ಯಕ್ಷ ವಿಜಯಕುಮಾರ್ ತೇಗಲತಿಪ್ಪಿ ಆಗಮಿಸಲಿದ್ದಾರೆ. ಇನ್ನು ಅತಿಥಿಗಳಾಗಿ ಪತ್ರಕರ್ತ ಗೋಪಾಲ ಕುಲಕರ್ಣಿ ಎಸ್ ಜಿವಿಕೆ ಸಂಘದ ಗೌರವಾಧ್ಯಜ್ಞ ಎಂಜಿ ಘನಾತೆ ಮತ್ತು ಸಂಗೀತ ತರಂಗಿಣಿ ಸಂಘದ ಅಧ್ಯಕ್ಷೆ ಚಂದನಾ ಜವಳಗಿ ಉಪಸ್ತಿತರಿರಲಿದ್ದಾರೆ.
ಡಾ.ಸಂತೋಷ ಮಂಗಶೆಟ್ಟಿ ಖ್ಯಾತ ನರರೋಗ ತಜ್ಞರು, ಹಣಮಂತ ಕಟ್ಟಿ ಸಹಾಯಕ ಆರಕ್ಷಕ ನಿರೀಕ್ಷಕರು, ಸುನೀಲ್ ಕುಮಾರ್ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ಶರಣಪ್ಪ ಬಿರಾದಾರ್ ಮಾಜಿ ಸೈನಿಕರು, ತಿಪ್ಪಯ್ಯ ಆಲಮೇಲಕರ್ ನ್ಯಾಯವಾದಿಗಳು, ಗೋಪಾಲ ಕುಲಕರ್ಣಿ ಪತ್ರಕರ್ತರು-ಗಾಯಕರು ಇವರನ್ನು ಸಾಹಸಸಿಂಹ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…