ಕಲಬುರಗಿ: ಇಲ್ಲಿನ ನಂದಿ ಎನಿಮಲ್ ವೆಲ್ಫೇರ್ ಸೊಸೈಟಿ ಆಫ್ ಗುಲ್ಬರ್ಗ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹುಣಚಿರಾಯ (ಕೇಶವ) ಮೋಟಗಿ ಅವರನ್ನು ಭಾರತ ಸರ್ಕಾರದ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಡೈರಿ ಸಚಿವಾಲಯದ ಪ್ರಾಣಿ ಕಲ್ಯಾಣ ಮಂಡಳಿಗೆ ರಾಜ್ಯ ಗೌರವ ಪ್ರಾಣಿ ಕಲ್ಯಾಣಾಧಿಕಾರಿಯಾಗಿ ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಮಂಡಳಿ ಕಾರ್ಯದರ್ಶಿ ಎಸ್.ಕೆ.ದತ್ತಾ ತಿಳಿಸಿದ್ದಾರೆ.