ಸುರಪುರ:ನಗರದ ಹಸನಾಪುರದಲ್ಲಿನ ಸರ್ವೇ ನಂಬರ್ 44/4 ಜಮೀನು ಸರ್ವೇ ಮಾಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಮುಖಂಡರು ನಗರದ ತಹಸೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗ ಹಸನಾಪುರ ಮಾತನಾಡಿ,ಹಸನಾಪುರದ ಸರ್ವೇ ನಂಬರ್ 44/4ರ ಜಮೀನಲ್ಲಿನ 15 ಗುಂಟೆ ಜಮೀನು ಮುಜಾಫರ್ ಅಹ್ಮದ್ ಎನ್ನುವವರಿಗೆ ಸೇರಿದ್ದಾಗಿದ್ದು,ಇದನ್ನು ಸರ್ವೇ ಮಾಡಿಕೊಡುವಂತೆ ಮನವಿ ಸಲ್ಲಿಸಿದರು ಇದುವರೆಗೆ ಅಧಿಕಾರಿಗಳು ಮುಜಾಫರ್ ಅಹ್ಮದ್ ಅವರ ಎದುರಾಳಿಗಳಿಂದ ಲಂಚ ಪಡೆದು ಸರ್ವೇ ಮಾಡಿಕೊಡುತ್ತಿಲ್ಲವೆಂದು ಆರೋಪಿಸಿ ಸರ್ವೇ ಇಲಾಖೆಯ ಎ.ಡಿ ಮತ್ತು ಇತರೆ ಸಂಬಂಧಿಸಿದ ಅಧಿಕಾರಿಗಳನ್ನು ಮಾನತ್ತುಗೊಳಿಸಬೇಕು ಎಂದು ಆಗ್ರಹಿಸಿದರು.
ನಂತರ ಧರಣಿ ಸ್ಥಳಕ್ಕೆ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಆಗಮಿಸಿ ಮನವಿಯನ್ನು ಆಲಿಸಿ ಈ ಪ್ರಕರಣ ಭೂ ಮಾಪನ ಇಲಾಖೆಗೆ ಬರಲಿದ್ದು ತಮ್ಮ ಮನವಿಯನ್ನು ಜಿಲ್ಲಾಧಿಕಾರಿಗಳು ಮೂಲಕ ಭೂ ಮಾಪನ ಇಲಾಖೆ ಕಮಿಷನರ್ ಅವರಿಗೆ ರವಾನಿಸಲಾಗುವುದು ಎನ್ನುವ ಭರವಸೆ ನೀಡಿದ ನಂತೆ ಮನವಿಯನ್ನು ಸಲ್ಲಿಸಿ ಧರಣಿ ನಿಲ್ಲಿಸಲಾಯಿತು.
ಧರಣಿಯಲ್ಲಿ ಮುಖಂಡರಾದ ತಿಪ್ಪಣ್ಣ ಶೆಳ್ಳಗಿ,ಶೇಖರ ಮಂಗಳೂರು,ಖಾಜಾ ಅಜ್ಮೀರ್,ಭೀಮರಾಯ ಮಂಗಳೂರು,ಮಲ್ಲಿಕಾರ್ಜುನ ಭಜಂತ್ರಿ,ಗುಲಾಂ ನಬಿ ಮಕ್ತಾಪುರ,ಅಬ್ದುಲ್ ಅಲೀಂ,ಶರ್ಮುದ್ದಿನ್ ಖುರೇಶಿ,ಮಹ್ಮದ್ ಅಕ್ಬರ್,ಮಹ್ಮದ್ ಅಜರುದ್ದಿನ್,ರಾಜು ಬಡಿಗೇರ,ಗುರಪ್ಪ ಮಾವಿನಮಟ್ಟಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…