ರೈತ ಸಂಘದ ತಾಲೂಕು ಅಧ್ಯಕ್ಷರಾಗಿ ವಿಜಯರಾಜ ನಾಯಕ ನೇಮಕ

0
12

ಸುರಪುರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಸಂಘಟನೆಯಿಂದ ತಾಲೂಕಿನ ತಿಂಥಣಿ ಗ್ರಾಮದಲ್ಲಿ ರೈತ ದಿನಾಚರಣೆ ಹಾಗೂ ನೂತನ ತಾಲೂಕು ಘಟಕದ ಪದಾಧಿಕಾರಿಗಳನ್ನು ನೇಮಕಗೊಳಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಲಕ್ಷ್ಮೀಕಾಂತ ಪಾಟೀಲ ಮದ್ದರಕಿ ಮಾತನಾಡಿ,ನಮ್ಮ ಕರ್ನಾಟಕ ರಾಜ್ಯ ರೈತ ಸಂಘವು ನಾಡಿನ ರೈತರ ಎಲ್ಲಾ ಸಮಸ್ಯೆಗಳಿಗಾಗಿ ನಿರಂತರವಾಗಿ ಹೋರಾಟವನ್ನು ನಡೆಸಲಿದೆ. ಈಗಾಗಲೇ ರೈತರ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನೀಡುವುದು,ವಿದ್ಯುತ್ ಕಾಯಿದೆ ಕೈಬಿಡುವಂತೆ ಸೇರಿ ವಿವಿಧ ಬೇಡಿಕೆಗಳಿಗಾಗಿ ಹೋರಾಟವನ್ನು ನಡೆಸಲಿದೆ ಎಂದರು.

Contact Your\'s Advertisement; 9902492681

ಅಲ್ಲದೆ ಇದೇ ಸಂದರ್ಭದಲ್ಲಿ ನೂತನ ತಾಲೂಕು ಅಧ್ಯಕ್ಷರನ್ನಾಗಿ ಹೋರಾಟಗಾರ ವಿಜಯರಾಜ ನಾಯಕ ಅವರನ್ನು ನೇಮಕಗೊಳಿಸಲಾಗಿದೆ. ವಿಜಯರಾಜ ನಾಯಕ ಅವರು ಇದುವರೆಗೆ ತಿಂಥಣಿ ಗ್ರಾಮ ಘಟಕದ ಅಧ್ಯಕ್ಷರಾಗಿ ಉತ್ತಮವಾಗಿ ಕಾರ್ಯ ಮಾಡಿಕೊಂಡು ಬರುತ್ತಿದ್ದು ಅವರ ಹೋರಾಟವನ್ನು ಪರಿಗಣಿಸಿ ಇಂದು ತಾಲೂಕು ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ,ಅಲ್ಲದೆ ತಿಂಥಣಿ ಗ್ರಾಮ ಘಟಕದ ಅಧ್ಯಕ್ಷರನ್ನಾಗಿ ದೇವರಾಜ ಬಡಿಗೇರ ಅವರನ್ನು ನೇಮಕಗೊಳಿಸಿ ಘೋಷಿಸಿದರು.

ನಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿವಿಧ ಪ್ರಗತಿಪರ ರೈತರನ್ನು ಸನ್ಮಾನಿಸಿ ಗೌರವಿಸುವ ಮೂಲಕ ರೈತ ದಿನವನ್ನು ಆಚರಿಸಲಾಯಿತು.ನೂರಾರು ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here