ಚಿಟಗುಪ್ಪ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ: ಪೂಜ್ಯ ಮೈತ್ರಾದೇವಿ ತಾಯಿ ಸರ್ವಾಧ್ಯಕ್ಷರಾಗಿ ಆಯ್ಕೆ

ಚಿಟಗುಪ್ಪ: ತಾಲೂಕಿನ ಪ್ರಥಮ ಶರಣ ಸಾಹಿತ್ಯ ಪರಿಷತ್ತಿನ ಪ್ರಥಮ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪೂಜ್ಯ ಮೈತ್ರಾದೇವಿ ತಾಯಿ ಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಮನ್ನಾಎಖೇಳಿ ಬಸವಮಾಹಾಮಠದ ಎಸ್ ಬಿ ಶೇರಿಕಾರ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಬಸವ ಧರ್ಮ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಸರ್ವರ ಸಮಕ್ಷಮದಲ್ಲಿ ಪೂಜ್ಯ ಮೈತ್ರಾದೇವಿ ತಾಯಿ ಯವರನ್ನು ಶರಣ ಸಾಹಿತ್ಯ ಪರಿಷತ್ತಿನ ಪ್ರಥಮ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಿ, ಅಧಿಕೃತವಾಗಿ ಘೋಷಿಸಿ, ಗೌರವ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಪರಮ ಪೂಜ್ಯ ಡಾ. ಬಸವಲಿಂಗ ಪಟ್ಟದ್ದೇವರು ಮಾತನಾಡಿ ಸುಮಾರು ವರ್ಷಗಳಿಂದ ಬಸವ ತತ್ವವನ್ನು ಒಪ್ಪಿಕೊಂಡು ತನು ಮನ ಧನದಿಂದ ದುಡಿಯುತ್ತಿರುವ ಈ ಭಾಗದ ಶರಣ ತತ್ವ ಪ್ರಚಾರಕರಾದ ಪೂಜ್ಯ ಮೈತ್ರಾದೇವಿ ತಾಯಿ ಯವರ ಸೇವೆ ಅನನ್ಯ ಮತ್ತು ಅಪಾರವಾಗಿದೆ. ಹಾಗಾಗಿ ಶರಣ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಹಾಗೂ ಬಸವಾಭಿಮಾನಿಗಳ ಬಯಕೆಯಂತೆ ಪೂಜ್ಯ ಮೈತ್ರಾದೇವಿ ತಾಯಿ ಯವರು ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಿದ್ದು ಬಹಳ ಸಂತೋಷ ತಂದಿದೆ ಎಂದರು.

ನೇತೃತ್ವ ವಹಿಸಿದ ಪೂಜ್ಯ ಗುರುಬಸವ ಪಟ್ಟಿದ್ದೇವರು ಮಾತನಾಡಿ ಶಿಕ್ಷಣ, ಸಾಮಾಜಿಕ, ದಾಸೋಹ ಸೇವೆಯಲ್ಲಿ ತಮ್ಮದೇ ಆದ ವಿಶಿಷ್ಟ ಸೇವಾ ಚಟುವಟಿಕೆಗಳ ಕೈಂಕರ್ಯಗಳು ಕೈಗೊಳ್ಳುವ ಮೂಲಕ ಹತ್ತು ಹಲವು ವಿನೂತನ ಕಾರ್ಯಕ್ರಮಗಳು ಈ ಭಾಗದಲ್ಲಿ ಕೈಗೊಂಡು, ಬಸವ ತತ್ವ ಬೆಳೆಸುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪೂಜ್ಯ ಮೈತ್ರಾದೇವಿ ತಾಯಿ ಯವರನ್ನು ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಆಗಿದ್ದು ನಮ್ಮೆಲ್ಲರಿಗೂ ಗೌರವ ಮತ್ತು ಹೆಮ್ಮೆ ಪಡುವ ಸಂಗತಿಯಾಗಿದೆ ಎಂದರು.

ಶರಣ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಸಂಗಮೇಶ ಎನ್ ಜವಾದಿ ಮಾತನಾಡಿ ಬಸವ ಧರ್ಮ ಸಮಾವೇಶದ ಜೊತೆಗೆ ಪ್ರಥಮ ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಸಮ್ಮೇಳನವನ್ನು ನಡೆಸಲು ಸರ್ವರೂ ಸಹಕರಿಸುವ ಮೂಲಕ ಶರಣ ತತ್ವ ಬೆಳೆಸುವ ಕೆಲಸ ಮಾಡೋಣ ಎಂದರು.

ಇದೆ ಸಮಯದಲ್ಲಿ ಡಾ.ನಾಗರಾಜ್ ಶೇರಿಕಾರ ರವರನ್ನು ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಿ, ಅಭಿನಂದಿಸಿ, ಸನ್ಮಾನಿಸಲಾಯಿತು.

ಹಿರಿಯರಾದ ಶಂಕರರಾವ್ ಪಾಟೀಲರು ಕಾರ್ಯಕ್ರಮದ ಕುರಿತು ಸವಿಸ್ತಾರವಾಗಿ ಮಾತನಾಡಿದರು. ಸಭೆಯಲ್ಲಿ ಪ್ರಮುಖರಾದ ನಾಗೇಂದ್ರ ವರವಟ್ಟಿ,ಸುಭಾಷ ಖಾಶೆಂಪೂರ, ಸಂಗಪ್ಪ ಮಾಲಿ ಪಾಟೀಲ, ಬಕ್ಕಪ್ಪ ಬಸರಡ್ಡಿ,ಚಂದ್ರಶೇಖರ ತಂಗಾ, ಶಿವರಾಜ ನೀಲಾ,
ಶಿವಕುಮಾರ ಸ್ವಾಮಿ, ರೇವಣ್ಣಸಿದ್ದ ಬಾವಿಗೆ, ವೈಜನಾಥ ಹಾಲಹಳ್ಳಿ, ಭೀಮರಾವ ಪಾಟೀಲ್ ಉಪಸ್ಥಿತರಿದ್ದರು.

ನವಲಿಂಗ ಪಾಟೀಲರು ನಿರೂಪಿಸಿದರು. ಶಿವರಾಜ ಬನ್ನಳ್ಳಿ ವಂದಿಸಿದರು. ಬಸವ ಮಾಹಾಮಠದ ಭಕ್ತರು, ಬಸವಾಭಿಮಾನಿಗಳು, ಪರಿಷತ್ತಿನ ಪದಾಧಿಕಾರಿಗಳು ಹಾಜರಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420