ಕುವೆಂಪುರವರ ಜನ್ಮದಿನಾಚರಣೆ: ಉಚಿತ ಕನ್ನಡಕ ವಿತರಣೆ

0
50

ಬೆಂಗಳೂರು: ಗಂಧದನಾಡು ಜನಪರ ವೇದಿಕೆ-ಗಜವೇ ವತಿಯಿಂದ ರಾಷ್ಟ್ರಕವಿ ಕುವೆಂಪುರವರ ಜನ್ಮದಿನಾಚರಣೆ ಹಾಗೂ ಗಜವೇ 50ನೇ ಆರೋಗ್ಯ ಶಿಬಿರದಲ್ಲಿ ವೈದ್ಯರು ಸೂಚಿಸಿದ್ದವರಿಗೆ ಉಚಿತವಾಗಿ ಕನ್ನಡಕಗಳನ್ನು ನೀಡಲಾಯಿತು.

ಗಜವೇ ಸಂಸ್ಥಾಪಕ ಅಧ್ಯಕ್ಷರಾದ ವಿಜಯರಾಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಚಂದಾಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ವೈ. ಕೃಷ್ಣಮೂರ್ತಿ, ಲೆಕ್ಕ ಪರಿಶೋಧಕರಾದ ಮಹೇಶ್ ದಿವಾಕರ್, ಹೆನ್ನಾಗರ ಗ್ರಾಮ ಪಂಚಾಯಿತಿ ಸದಸ್ಯರಾದ ಯಾರಂಡಹಳ್ಳಿಯ ಮರಿಯಪ್ಪ, ಆನೇಕಲ್ ಸರ್ಕಾರಿ ಆಸ್ಪತ್ರೆ ಎನ್‌ಸಿಡಿ ತಂಡದ ಭರತೇಶ್, ಗಜವೇ ರಾಜ್ಯ ಖಜಾಂಚಿ ಬಂಡಾಪುರ ಶ್ರೀನಿವಾಸ್, ರಾಜ್ಯ ಕಾರ್ಯದರ್ಶಿ ದೇವರಾಜ್ ನಾಯ್ಕ, ರಾಜ್ಯ ಸಹ-ಕಾರ್ಯದರ್ಶಿ ಜಗದೀಶ್ ಅರಸು, ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾದ ಸ್ವಾಭಿಮಾನಿ ಸತೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೇಮಂತ್, ಜಿಲ್ಲಾ ಕಾರ್ಯದರ್ಶಿ ರಾಜೇಶ್, ಬೆಂ.ದ.ವಿ ಕ್ಷೇತ್ರದ ಉಪಾಧ್ಯಕ್ಷರಾದ ಮಹಾಂತಲಿಂಗಪುರ ಮಂಜು, ಆನೇಕಲ್ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ತಿಮ್ಮರಾಯಪ್ಪ, ಪ್ರಧಾನ ಕಾರ್ಯದರ್ಶಿ ಕೌಶಿಕ್ ರೆಡ್ಡಿ, ಕಾರ್ಯದರ್ಶಿ ರಾಜಕುಮಾರ್, ಸದಸ್ಯರುಗಳಾದ ಸಂತೋಷ್, ವೆಂಕಟೇಶ್ ನಾಯ್ಕ, ಚರಣ್, ನೇತ್ರ ಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here