ಅದಮ್ಯ ಚೇತನಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಷಾ ಭೇಟಿ

ಬೆಂಗಳೂರು: ಅದಮ್ಯ ಚೇತನ ಸಂಸ್ಥೆ ನಡೆಸುತ್ತಿರುವ ಶೂನ್ಯ ತ್ಯಾಜ್ಯ ಅಡುಗೆ ಮನೆಯಂತಹ ಹೊಸ ಸಾಧ್ಯತೆಗಳ ಬಗ್ಗೆ ಮಾನ್ಯ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್‌ ಷಾ ಬಹಳಷ್ಟು ಕುತೂಹಲದಿಂದ ವೀಕ್ಷಿಸಿದರು.

ಇಂದು ಬೆಂಗಳೂರು ನಗರದ ಗವಿಪುರಗುಟ್ಟಳ್ಳಿಯಲ್ಲಿರುವ ಅದಮ್ಯ ಚೇತನ ಸಂಸ್ಥೆಯ – ಶೂನ್ಯ ತ್ಯಾಜ್ಯ ಅಡುಗೆ ಮನೆಗೆ ಭೇಟಿ ನೀಡಿ, ಅಡುಗೆ ಮನೆಯಲ್ಲಿ ಪ್ರತಿನಿತ್ಯ ನಡೆಯುವಂತಹ ಅಡುಗೆ ತಯಾರಿಯ ಕೆಲಸಗಳ ಬಗ್ಗೆ ವಿಸ್ತ್ರತವಾಗಿ ಮಾಹಿತಿ ಪಡೆದುಕೊಂಡರು. ಅದಮ್ಯ ಚೇತನ ಸಂಸ್ಥೆ ಸ್ಥಾಪನೆಯ ಹಿಂದೆ ದಿವಂಗತ ಅನಂತಕುಮಾರ್‌ ಅವರ ಅದಮ್ಯ ಕನಸುಗಳ ಬಗ್ಗೆ ಡಾ. ತೇಜಸ್ವಿನಿ ಅನಂತಕುಮಾರ್‌ ಗೃಹ ಸಚಿವರಿಗೆ ವಿವರಣೆ ನೀಡಿದರು.

ಪ್ರತಿ ನಿತ್ಯ ಸುಮಾರು 70 ಸಾವಿರಕ್ಕೂ ಹೆಚ್ಚು ಊಟಗಳನ್ನ ಈ ಅಡುಗೆ ಮನೆಯಲ್ಲಿ ತಯಾರಿಸಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ಥರಹದ ತ್ಯಾಜ್ಯ ಉತ್ಪತ್ತಿಯಾಗುವುದಿಲ್ಲ. ಹಾಗೆಯೇ, ಉಪಯೋಗಿಸಿದ ನೀರಿನ ಮರುಬಳಕೆಯನ್ನು ಮಾಡಲಾಗುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳನ್ನ ಬಳಸದೇ ಅಡುಗೆ ಮಾಡುವುದು ಈ ಅಡುಗೆ ಮನೆಯ ಮತ್ತೊಂದು ವಿಶೇಷ ಎಂದು ವಿವರಿಸಿದರು. ಅವರ ಚಿಂತನೆಯ ಹಾದಿಯಲ್ಲಿಯೇ ನಾವುಗಳು ಹಸಿರು ಭಾನುವಾರ, ದೇಗುಲ ದರ್ಶನ, ಅನಂತಕುಮಾರ್‌ ಪ್ರತಿಷ್ಠಾನದ ಮೂಲಕ ಸಮಾಜ ಸೇವೆಯಂತಹ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೀವಿ. ಹಾಗೆಯೇ, ಅನಂತಕುಮಾರ್‌ ಪ್ರತಿಷ್ಠಾನದ ಮೂಲಕ ಯುವ ಜನತೆಯಲ್ಲಿ ನಾಯಕತ್ವ ಗುಣಗಳನ್ನ ಬೆಳಸುತ್ತಿರುವುದನ್ನೂ ಕೇಳಿ ಸಂತಸ ಪಟ್ಟರು.

ನಂತರ ಅನಂತ ಸೇವಾ ಉತ್ಸವದಲ್ಲಿ ಭಾಗವಹಿಸಿ “ತೇಜಸ್‌ ಯುದ್ದವಿಮಾನ ಅಭಿವೃದ್ದಿಯ ಯಶೋಗಾಥೆ” ಎನ್ನುವ ಪುಸ್ತಕದ ಕನ್ನಡ ಅವತರಣಿಕೆಯನ್ನು ಲೋಕಾರ್ಪಣೆಗೊಳಿಸಿದರು. ಸಂಪೂರ್ಣ ಸ್ವದೇಶಿ ನಿರ್ಮಿತ ತೇಜಸ್‌ ಯುದ್ದವಿಮಾನದ ವಿನ್ಯಾಸದಲ್ಲಿ ಡಾ. ತೇಜಸ್ವಿನಿ ಅನಂತಕುಮಾರ್‌ ಅವರು ಸೇವೆ ಸಲ್ಲಿಸಿದ್ದರು, ಈ ಪುಸ್ತಕದ ಕನ್ನಡ ಅವತರಣಿಕೆಯ ಲೋಕಾರ್ಪಣೆಯ ಸಂಧರ್ಭದಲ್ಲಿ ಅವರ ಸಹದ್ಯೋಗಿಗಳು ನೆನೆಪಿಸಿಕೊಂಡರು.

ಈ ಸಂಧರ್ಭದಲ್ಲಿ ಬಿಜೆಪಿ ರಾಜ್ಯ ಪ್ರಭಾರಿ ಅರುಣ್‌ ಸಿಂಗ್‌, ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್‌ ಕುಮಾರ್‌ ಕಟೀಲ್‌, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಕಂದಾಯ ಸಚಿವರಾದ ಆರ್‌ ಅಶೋಕ, ಸಹಕಾರ ಸಚಿವರಾದ ಎಸ್‌ ಟಿ ಸೋಮಶೇಖರ್‌, ಗೃಹ ಸಚಿವರಾದ ಅರಗ ಜ್ಞಾನೇಂದ್ರ, ಅದಮ್ಯ ಚೇತನ ಸಂಸ್ಥೆಯ ಟ್ರಸ್ಟಿಗಳಾದ ನಂದಕುಮಾರ್‌, ಪ್ರದೀಪ್‌ ಓಕ್‌, ಐಶ್ಚರ್ಯ ಅನಂತಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420