ಜನಾರ್ಧನರೆಡ್ಡಿಯವರ ರಾಜಕೀಯ ಪಕ್ಷ ರಾಜ್ಯ ರಾಜಕಾರಣದಲ್ಲಿ ಸಂಚಲನ

0
445

ಸುರಪುರ: ನಮ್ಮ ನೆಚ್ಚಿನ ನಾಯಕರಾದ ಜನಾರ್ಧನರೆಡ್ಡಿಯವರು ನೂತನ ರಾಜಕೀಯ ಪಕ್ಷವನ್ನು ಆರಂಭಿಸಿರುವುದು ಸಂತೋಷದ ಸಂಗತಿಯಾಗಿದೆ.ಅವರು ಪಕ್ಷವನ್ನು ಸ್ಥಾಪಿಸುವ ಮೂಲಕ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಲಿದೆ ಎಂದು ಯುವ ಮುಖಂಡ ಮಲ್ಲಿಕಾರ್ಜುನರೆಡ್ಡಿ ಅಮ್ಮಾಪುರ ಹರ್ಷವ್ಯಕ್ತಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಮಲ್ಲಿಕಾರ್ಜುನರೆಡ್ಡಿ,ಜನಾರ್ಧನರೆಡ್ಡಿಯವರು ಅನೇಕ ವರ್ಷಗಳ ನಂತರ ನೇರ ರಾಜಕಾರಣಕ್ಕೆ ಧುನುಕಿದ್ದು ಅವರ ಅಸಂಖ್ಯಾತ ಅಭಿಮಾನಿಗಳಲ್ಲಿ ಹೊಸ ಉತ್ಸಾಹ ಮೂಡಿಸಿದ್ದು ಅವರ ಪಕ್ಷ ಮುಂದಿನ ಸರಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ತಿಳಿಸಿದ್ದು.

Contact Your\'s Advertisement; 9902492681

ಮುಂದಿನ ದಿನಗಳಲ್ಲಿ ನಮ್ಮ ಕಲ್ಯಾಣ ಕರ್ನಾಟಕ ಭಾಗದ ಅನೇಕ ಜನ ಹಿರಿಯ ರಾಜಕಾರಣಿಗಳು ಅವರೊಂದಿಗೆ ಸೇರಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ ಎಂದು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here