ಪಕ್ಷ ಬಲಗೊಳಿಸಲು ಬಿಜೆಪಿಯಿಂದ ಬೂತ್ ವಿಜಯ ಅಭಿಯಾನ

ಶಹಾಬಾದ: ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಸೋಮವಾರ “ಬೂತ್ ವಿಜಯ ಅಭಿಯಾನ” ಕ್ಕೆ ಶಹಾಬಾದ ಮಂಡಲದ ಪ್ರಭಾರಿಗಳಾದ ರಾಘವೇಂದ್ರ ಕುಲಕರ್ಣಿ, ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಪ್ರತಿ 25 ಕಾರ್ಯಕರ್ತರ ಮನೆಯ ಮೇಲೆ ಧ್ವಜವನ್ನು ಹಾರಿಸಲಾಗುತ್ತಿದೆ. ಅಭಿಯಾನ ಮುಖ್ಯ ಉದ್ದೇಶ ಶೇ.100ರಷ್ಟು ಮತದಾನ ಆಗುವ ರೀತಿಯಲ್ಲಿ ಮತದಾರರನ್ನು ಮನವೊಲಿಸುವುದು ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ಎಲ್ಲಾ ಬೂತ್‍ಗಳಲ್ಲಿ ಹಾಗೂ ಹಳ್ಳಿಗಳಲ್ಲಿ ವೀಕ್ಷಿಸುವಂತೆ ಜನರನ್ನು ಪ್ರೇರೇಪಿಸುವುದಾಗಿದೆ. ಪ್ರತೀ ಬೂತ್‍ನಲ್ಲಿ ವಾಟ್ಸ್‍ಪ್ ಗ್ರೂಪ್‍ಗಳನ್ನು ಮಾಡಿ ಪಕ್ಷದ ಎಲ್ಲಾ ವಿಚಾರಗಳನ್ನು ಜನರಿಗೆ ಮುಟ್ಟಿಸಲಾಗುವುದು ಎಂದು ಹೇಳಿದರು.

ಶಹಾಬಾದ ಮಂಡಲದ ಪ್ರಭಾರಿಗಳಾದ ರಾಘವೇಂದ್ರ ಕುಲಕರ್ಣಿ, ಭಾರತೀಯ ಜನತಾ ಪಾರ್ಟಿ ಶಹಾಬಾದ ಮಂಡಲ ವತಿಯಿಂದ ಬೂತ್ ಸಂಖ್ಯೆ 259, 260, 261 ಮತ್ತು 263 ರಲ್ಲಿ ರಲ್ಲಿ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ಸಿಕ್ಕಿದ್ದು, ಕಾರ್ಯಕರ್ತರು ಹುರುಪಿನಿಂದ ಕಾರ್ಯನಿರ್ವಹಿಸುತ್ತಿದ್ದಾರೆ.ಮುಂಬರುವ ಚುನಾವಣೆಯಲ್ಲಿ ಪಕ್ಷದ ಬಲವರ್ಧನೆ ಹಾಗೂ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಶ್ರಮಿಸಬೇಕಾಗಿದೆ ಎಂದರು.

ಅಭಿಯಾನದ ಪ್ರಭಾರಿಗಳಾದ ಕನಕಪ್ಪ ದಂಡಗುಲಕರ, ಅಧ್ಯಕ್ಷರಾದ ಅಣವೀರಪ್ಪ ಇಂಗಿನಶೆಟ್ಟಿ, ಸಂಚಾಲಕರಾದ ಸದಾನಂದ ಕುಂಬಾರ, ಸಹಸಂಚಾಲಕರಾದ ಡಾ.ಅಶೋಕ ಜಿಂಗಾಡೆ, ಬಸವರಾಜ ಬಿರಾದಾರ, ಸದಸ್ಯರಾದ ರವಿ ರಾಠೊಡ, ದತ್ತಾತ್ರೇಯ ಫಂಡ, ಉಪಾಧ್ಯಕ್ಷರಾದ ಮಹಾದೇವ ಗೊಬ್ಬೂರಕರ, ದುರ್ಗಪ್ಪ ಪವಾರ, ಶ್ರೀಧರ ಜೋಶಿ, ಪದಾಧಿಕಾರಿಗಳು, ಪ್ರಮುಖರು, ನಗರಸಭೆ ಸದಸ್ಯರು, ನಾಮನಿರ್ದೇಶಿತ ಸದಸ್ಯರು, ಮೋರ್ಚಾಗಳ ಪದಾಧಿಕಾರಿಗಳು,ಮಹಾಶಕ್ತಿ ಕೇಂದ್ರದ ಮತ್ತು ಶಕ್ತಿ ಕೇಂದ್ರದ ಪ್ರಮುಖರು, ಪ್ರಕೋಷ್ಟಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತಿತರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420