ಶಹಾಬಾದ: ಭಾರತೀಯ ಜನತಾ ಪಾರ್ಟಿ ಮಂಡಲ ವತಿಯಿಂದ ರಾಜ್ಯ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ನೇಮಕರಾದ ಪಕ್ಷದ ಮುಖಂಡರಾದ ನಿಂಗಪ್ಪ ಹುಳಗೊಳಕರ ಅವರಿಗೆ ಪಕ್ಷದ ವತಿಯಿಂದ ಸನ್ಮಾನಿಸಲಾಯಿತು.
ಶಹಾಬಾದ ಮಂಡಲ ಪ್ರಭಾರಿ ರಾಘವೇಂದ್ರ ಕುಲಕರ್ಣಿ ಕೊಗನೂರ, ಪಕ್ಷಕ್ಕಾಗಿ ದುಡಿದವರಿಗೆ ಪಕ್ಷ ಯಾವಾಗಲೂ ಗುರುತಿಸುತ್ತದೆ ಎಂಬುದಕ್ಕೆ ನಿಂಗಣ್ಣ ಹುಳಗೋಳಕರ್ ಅವರೇ ಸಾಕ್ಷಿ. ಬಿಜೆಪಿಯಲ್ಲಿ ಸಾಮನ್ಯ ಕಾರ್ಯಕರ್ತರಿಗೂ ಬೆಲೆಯಿದೆ.ಯಾರು ಪಕ್ಷಕ್ಕಾಗಿ ದುಡಿಯುತ್ತಾರೆ ಅವರಿಗೆ ಸ್ಥಾನಮಾನಗಳು ಕಟ್ಟಿಟ್ಟ ಬುತ್ತಿ.ಇದಕ್ಕೆ ಸಾಕ್ಷಿ ಎಂಬಂತೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರೇ ಉದಾಹರಣೆ ಎಂದರು.
ಸನ್ಮಾನ ಸ್ವೀಕರಿಸಿಕೊಂಡು ಮಾತನಾಡಿದ ನಿಂಗಣ್ಣ ಹುಳಗೋಳಕರ್, ಪಕ್ಷಕ್ಕಾಗಿ ಹಾಗೂ ಸಮಾಜಕ್ಕಾಗಿ ದುಡಿದ ಪ್ರತಿಫಲವೇ ಇಂದು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ನಿರ್ದೇಶಕನಾಗಿದ್ದಾರೆ.ಪಕ್ಷದ ಅಧ್ಯಕ್ಷರು,ಮುಖಂಡರು, ಕಾರ್ಯಕರ್ತರು ಹಾಗೂಮಾಜಿ ಸಚಿವ ಬಾಬುರಾವ ಚಿಂಚನಸೂರ್, ಶಾಸಕ ಬಸವರಾಜ ಮತ್ತಿಮಡು, ಅವರು ನನ್ನ ಮೇಲೆ ಇಟ್ಟಿರುವ ಅಭಿಮಾನಕ್ಕೆ ನಾನು ಚಿರಋಣಿಯಾಗಿರುತ್ತೆನೆ ಎಂದರು.
ಅಧಕ್ಷರಾದ ಶ್ರೀ ಅಣವೀರಪ್ಪ ಇಂಗಿನಶೆಟ್ಟಿ, ಅಭಿಯಾನ ಪ್ರಭಾರಿಗಳಾದ ಕನಕಪ್ಪ ದಂಡಗುಲಕರ, ಪ್ರಧಾನ ಕಾರ್ಯದರ್ಶಿ ಸದಾನಂದ ಕುಂಬಾರ, ಉಪಾಧ್ಯಕ್ಷರಾದ ಮಹಾದೇವ ಗೊಬ್ಬೂರಕರ, ಶ್ರೀಧರ ಜೋಶಿ, ದುರ್ಗಪ್ಪ ಪವಾರ, ಪ್ರಮುಖರು, ನಗರಸಭೆ ಸದಸ್ಯರು, ಎಲ್ಲಾ ನಾಮನಿರ್ದೇಶಿತ ಸದಸ್ಯರು, ಮೋರ್ಚಾಗಳ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರದ ಮತ್ತು ಶಕ್ತಿ ಕೇಂದ್ರದ ಪದಾಧಿಕಾರಿಗಳು, ಪ್ರಕೋಷ್ಟಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…