ಕಾಳಗಿ: ತಾಲೂಕಿನ ರಾಜಾಪೂರ ಗ್ರಾಮದ ಹಿರಿಯ ಬಿಜೆಪಿ ಮುಖಾಂಡರಾದ ಬ್ರಹ್ಮನಂದ್ ರೆಡ್ಡಿ ಪಟೇಲ್ ರ ನೇತೃತ್ವದಲ್ಲಿ 120 ಕ್ಕು ಹೆಚ್ಚು ಯುವಕರು ಹಾಗೂ ಹಿರಿಯರು ಕಲಬುರಗಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಜಗದೇವ ಗುತ್ತೇದಾರ, ಹಾಗೂ ಚಿಂಚೋಳಿ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ವ್ಹಿ. ರಾಠೋಡ್ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ನಂತರ ನಮ್ಮ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಬ್ರಹ್ಮನಂದ್ ರೆಡ್ಡಿ ಪಟೇಲ್, ನಮ್ಮ ಗ್ರಾಮದಲ್ಲಿ ನಾನೆಂದರೆ ಬಿಜೆಪಿ, ಬಿಜೆಪಿ ಎಂದರೆ ನಾನು ಎನ್ನುವ ರೀತಿಯಲ್ಲಿತ್ತು,ಆದರೆ ವಲಸಿಗರು ಹಾಗೂ ಮೂಲ ಬಿಜೆಪಿ ಗರ ಮಧ್ಯ ತಾರತಮ್ಯ, ಮತ್ತು ಜಾತೀಯತೆ ಹೆಚ್ಚಾಗಿದ್ದು, ರೈತರ ಮತ್ತು ಬಡವರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬದಲು , ತುಟಿಗೆ ಬೆಲ್ಲಾ ಹಚ್ಚಿ ಬಾಯಿಗೆ ಮಣ್ಣು ತುಂಬುವ ಕೆಲಸ ಬಿಜೆಪಿ ಮಾಡುತ್ತಿದ್ದು, ಅದಕ್ಕಾಗಿ ಬಿಜೆಪಿ ಪಕ್ಷ ತೊರೆದು,
ಕಾಂಗ್ರೇಸ್ ಪಕ್ಷ ಹಾಗೂ ಸುಭಾಷ್ ರಾಠೋಡ್ ರ ಚಿಂತನೆಗಳಿಗೆ ಮನಸೋತು ನನ್ನ ಬೆಂಬಲಿಗರೊಂದಿಗೆ ಕಾಂಗ್ರೇಸ್ ಪಕ್ಷ ಸೇರಿದ್ದಾಗಿ ತಿಳಿಸಿದರು.
ಈ ಸಂಧರ್ಭದಲ್ಲಿ ದೇವಿಂದ್ರಪ್ಪ ಹೆಬ್ಬಾಳ, ಬಸ್ಯಯ ಗುತ್ತೇದಾರ, ಭೀಮರಾವ್ ಟಿ ಟಿ, ಬಸವರಾಜ್ ಪಾಟೀಲ್, ವೇದಪ್ರಕಾಶ್ ಮೊಟಗಿ, ರಾಘವೇಂದ್ರ ಗುತ್ತೇದಾರ, ಶಿವಾನಂದ ಮಜ್ಜಗಿ, ಅಪ್ಪಾರಾವ್ ಸೌಕಾರ್, ಬಸವರಾಜ್ ಕೊಲಕುಂದಿ, ಗಣಪತಿ ಹಾಳಕಾಯಿ,ಜಗನಾಥ್ ಚಂದಕೇರಿ, ರವಿದಾಸ್ ಪತಂಗೆ, ಗೌರಿಶಂಕರ್ ಗುತ್ತೇದಾರ, ಜಿಯಾವೋದ್ದೀನ್ ಸೌದಾಗರ್, ಸೇರಿದಂತೆ ಅನೇಕ ಕಾಂಗ್ರೇಸ್ ಮುಖಂಡರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…