ಕಲಬುರಗಿ: ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ನಗರದ ಟೌನ್ ಮಹಾತ್ಮಾಗಾಂಧೀಜಿ ಹಾಲ್ ಅವರ ಮುಂದಿರುವ ಪುತ್ಥಳಿಯ ಪಕ್ಕದಲ್ಲಿ ಕೋಲಿ ಸಮಾಜದ ಗುರುಗಳಾದ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಪ್ರತಿಷ್ಠಾಪಿಸಬೇಕು ಎಂದು ಒತ್ತಾಯಿಸಿ ಶ್ರೀ ಅಂಬಿಗರ ಸೇವಾ ದಳದ ಕಾರ್ಯಕರ್ತರು ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿ ಪಾಲಿಕೆ ಕಚೇರಿ ಮುಂದೆ ಪ್ರತಿಭಟನಾ ಪ್ರದರ್ಶನ ಮಾಡಿದರು.
ಪ್ರತಿಭಟನೆಕಾರರು ನಂತರ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿ, ಕಳೆದ 2017 ರಿಂದ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಪ್ರತಿಷ್ಠಾಪನೆಗಾಗಿ ಕಳೆದ 2017ರಿಂದ ಪ್ರತಿಭಟನೆ ಹಾಗೂ ಮನವಿಗಳನ್ನು ಸಲ್ಲಿಸಲಾಗಿತ್ತು. ಅದರ ಫಲವಾಗಿ ಅಂದಿನ ಮಹಾಪೌರರು ಸ್ಪಂದಿಸಿ 2019ರ ಫೆಬ್ರವರಿ 6ರಂದು ಜರುಗಿದ ಮಹಾನಗರ ಪಾಲಿಕೆಯ ಕರ, ಹಣಕಾಸು ಹಾಗೂ ಮೇಲ್ಮನವಿ ಸ್ಥಾಯಿ ಸಮಿತಿ ಸಭೆಯಲ್ಲಿ ಹಣಕಾಸು ಬಜೆಟ್ನಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಹಣ ಮೀಸಲಿಟ್ಟಿದ್ದರು ಎಂದರು.
2019ರ ಮಾರ್ಚ್ 7ರಂದು ಮಹಾಪೌರರ ಅಧ್ಯಕ್ಷತೆಯಲ್ಲಿ ಜರುಗಿದ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಟೌನ್ ಹಾಲ್ (ಇಂದಿರಾ ಸ್ಮಾರಕ ಭವನ) ಬಳಿ ಇರುವ ಮಹಾತ್ಮಾಗಾಂಧೀಜಿ ಮೂರ್ತಿ ಪಕ್ಕದಲ್ಲಿ ಪ್ರತಿಷ್ಠಾಪಿಸಲು ಜಾಗವನ್ನು ಸಹ ನಿಗದಿಪಡಿಸಲಾಗಿತ್ತು. 2020ರ ಕೋವಿಡ್ ಸಂದರ್ಭದಲ್ಲಿ ಸದರಿ ವಿಷಯವನ್ನು ಸ್ಥಗಿತಗೊಳಿಸಲಾಗಿತ್ತು. ತದನಂತರ ಮಹಾನಗರ ಪಾಲಿಕೆಯ ಅವಧಿಯು ಮುಕ್ತಾಯ ಗೊಂಡಿದ್ದ ರಿಂದ ಸದರಿ ವಿಷಯವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಆದ್ದರಿಂದ ಮೂರ್ತಿ ಪ್ರತಿಷ್ಠಾಪನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಸಂಘಟನೆಯ ಅಧ್ಯಕ್ಷ ಸಂತೋಷ್ ಎಸ್. ಬೆಣ್ಣೂರ್ ಹಾಗೂ ಸಂದೇಶ ಟಿ.ಕಮಕನೂರ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಶರಣು ಕಿರಸಾವಳಗಿ, ರಾಜು ಸೊನ್ನ, ಆನಂದ್ ಕದರಗಿ, ಮಹಾತೇಶ್ ಹರವಾಳ, ಮಲ್ಲು ಗಾಜಿಪುರ, ಶರಣು ಶಿವಾಜಿನಗರ, ವೆಂಕಟೇಶ ಮರತೂರ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.
ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮತ್ತು ಕಲ್ಯಾಣ ಕರ್ನಾಟಕ ರಸ್ತೆ…
ಬೀದರ್: ಮಾಧ್ಯಮ ಮತ್ತು ಸಾಮಾಜಿಕ ಸಂಘಟನೆ ಕ್ಷೇತ್ರದಲ್ಲಿ ದೀರ್ಘ ಸೇವೆಯನ್ನು ಗುರ್ತಿಸಿ ತಿಪಟೂರು ಕೃಷ್ಣ ಅವರಿಗೆ " ಕಾಯಕ ರತ್ನ…
ಕಲಬುರಗಿ: ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳು ಹಾಗೂ ನಾಡಿನ ಶ್ರೇಷ್ಠ ಕೃಷಿ ವಿಜ್ಞಾನಿಗಳಾಗಿದ್ದ ಡಾ.ಎಸ್.ಎ.ಪಾಟೀಲ್ ಬಿರಾಳ (80) ಅವರು ನಿಧನರಾಗಿದ್ದಾರೆ.…
ಬೆಂಗಳೂರು: ಯುವಜನತೆ ನದಿಮೂಲಗಳು ಹಾಗೂ ಪರಿಸರ ಸಂರಕ್ಷಣೆಯ ಅಭಿಯಾನಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಮೈಗೂಡಿಸಿಕೊಳ್ಳಬೇಕೆಂದು…
ಕಲಬುರಗಿ: ಜಿಲ್ಲಾ ಗಾಣಿಗ ನೌಕರರ ಕಲ್ಯಾಣ ಸಂಘದ ಸದಸ್ಯರ ಸಭೆ ಜು.17ರಂದು ಬೆಳಗ್ಗೆ 10.30ಕ್ಕೆ ಕನ್ನಡ ಭವನದಲ್ಲಿ ನಡೆಯಲಿದ್ದು, ಸಂಘದ…
ಕಲಬುರಗಿ: 371(ಜೆ) ಕಲಂ ಸಮರ್ಪಕ ಅನುಷ್ಠಾನಕ್ಕೆ ಪ್ರತ್ಯೇಕ ಸಚಿವಾಲಯ ಘೋಷಣೆ ಮಾಡಿ ಕಚೇರಿ ಸ್ಥಾಪಿಸಬೇಕು.ಇಲ್ಲದಿದ್ದಲ್ಲಿ ಮತ್ತೊಮ್ಮೆ ಕಲ್ಯಾಣ ಕರ್ನಾಟಕದ ಎಲ್ಲಾ…