ಜೆಡಿಎಸ್ ಪಕ್ಷದ ಕೆಕೆಆರ್ಡಿಬಿ ವಿಭಾಗದ ಉಸ್ತುವಾರಿಯಾಗಿ ಸಿರಾಜುದ್ದೀನ್ ಶಾಬ್ದಿ ನೇಮಕ

0
25

ಕಲಬುರಗಿ : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಜೆಡಿಎಸ್ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಜಿ.ಶ್ರೀರಾಮಯ್ಯ ಹಾಗೂ ಜೆಡಿಎಸ್ ಮುಖಂಡ ನಾಸಿರ್ ಹುಸೇನ್ ಉಸ್ತಾದ ಅವರ ಆದೇಶ ಮೇರೆಗೆ ಜಿಲ್ಲಾ ಜಾತ್ಯಾತೀತ ಜನತಾದಳ ಪಕ್ಷದ ಕೆಕೆಆರ್‍ಡಿಬಿ ವಿಭಾಗದ ಉಸ್ತುವಾರಿಯನ್ನಾಗಿ ಮಹಮ್ಮದ್ ಸಿರಾಜುದ್ದೀನ್ ಸೋಹರವರದಿ (ಶಾಬ್ದಿ) ಅವರನ್ನು ನೇಮಕ ಮಾಡಲಾಗಿದೆ ಹಾಗೂ ಜಿಲ್ಲಾ ಕಾರ್ಮಿಕ ಅಧ್ಯಕ್ಷ ಸ್ಥಾನವನ್ನು ಮುಂದುವರಿಸಲು ನವೀಕರಣ ಆದೇಶ ಪತ್ರವನ್ನು ನೀಡಲಾಯಿತು.

ತಾವು ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ ಜಿಲ್ಲೆಯ ಪಕ್ಷದ ಹಿರಿಯ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಲಬುರಗಿ, ಬೀದರ, ಯಾದಗಿರ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲಾ ಕಾರ್ಮಿಕ ವಿಭಾಗದ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ ಹಾಗೂ ಜಾತ್ಯಾತೀತ ಜನತಾದಳ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ಮೂಲಕ ಪಕ್ಷವನ್ನು ಬಲವರ್ದನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುತ್ತಿರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here