ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗೆದ್ದ ತಿರುಪತಿ ರಾಜ್ಯ ಮಟ್ಟಕ್ಕೆ ಆಯ್ಕೆ

0
11

ಸುರಪುರ: ಯಾದಗಿರಿಯಲ್ಲಿ ಜರುಗಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ನ್ಯಾಯಾಂಗ ಇಲಾಖೆಯ ಸ್ಥಳೀಯ ನ್ಯಾಯಾಲಯದ ಸಿಬ್ಬಂದಿ ತಿರುಪತಿ ಸಿಪಾಯಿ ಅವರು ಜಾವೆಲಿನ್ ಥ್ರೋ (ಬಲ್ಲೆ ಎಸೆತ) ಹಾಗೂ ಉದ್ದ ಜಿಗಿತ ಹಾಗೂ ಭಾರ ಎತ್ತುವಿಕೆ ಈ ಮೂರು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಅವರ ಸಾಧನೆಗೆ ನ್ಯಾಯಾಲಯದ ದಿವಾನಿ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳಾದ ಮಾರುತಿ. ಕೆ ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ, ಅಭಿನಂದಿಸಿ ಅವರು ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಹಾರೈಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here