ಬಿಸಿ ಬಿಸಿ ಸುದ್ದಿ

ಮಹಿಳೆ ಹೊಟ್ಟೆಯಲ್ಲಿ ನಾಲ್ಕುವರೆ K.G ಬೃಹತ್ ಗಡ್ಡೆ | ಆಸ್ಪತ್ರೆಯ ಅಮೋಘ ಸಾಧನೆ

ಐದುವರೆ ತಾಸಿನ ಮ್ಯಾರಥಾನ್ ಆಪರೇಷನ್: ಲಿವರ್ ಒಳಗೆ ಅತ್ಯಂತ ಸೂಕ್ಷ್ಮ ರಕ್ತನಾಳಗಳು ಇರುತ್ತವೆ. ಒಂದು ರಕ್ತನಾಳಕ್ಕೆ ಹಾನಿಯಾದರೆ ಒಂದು ನಿಮಿಷದಲ್ಲಿ ಎರಡು- ಮೂರು ಲೀಟರ್ ರಕ್ತಸ್ರಾವ ಉಂಟಾಗುತ್ತದೆ. ಇಷ್ಟೊಂದು ಅಪಾಯ ಇರುವ ಈ ಶಸ್ತ್ರಚಿಕಿತ್ಸೆಯನ್ನು ಐದು ತಾಸು ಕೈಗೊಳ್ಳಲಾಗಿದೆ. ಈ ಪ್ರಕ್ರಿಯೆಯಲ್ಲಿ ಕೇವಲ 600 ಮಿಲಿ ಲೀಟರ್ ರಕ್ತಸ್ರಾವ ಆಗುವಂತೆ ಎಚ್ಚರ ವಹಿಸಲಾಗಿದೆ ಎಂದು ಡಾ.ಸಲ್ಮಾನ್ ಪಟೇಲ್ ಹಾಗೂ ಡಾ.ಅರುಣ ಬಾರಾಡ್ ಹೆಮ್ಮೆಯಿಂದ ಹೇಳಿದರು.

ಕಲಬುರಗಿ: 60 ವರ್ಷದ ಮಹಿಳೆಯೊಬ್ಬರ ಯಕೃತ್ತಿನಲ್ಲಿ (ಲಿವರ್) ಬೆಳೆದಿದ್ದ ಸುಮಾರು ನಾಲ್ಕುವರೆ ಕಿಲೋಗ್ರಾಂ ತೂಕದ ಗಡ್ಡೆಯೊಂದನ್ನು ಇಲ್ಲಿನ ಸನ್ ರೈಸ್ ಆಸ್ಪತ್ರೆಯ ತಜ್ಞ ವೈದ್ಯರು ಯಶಸ್ವೀ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಸನ್ ರೈಸ್ ಆಸ್ಪತ್ರೆಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಆಸ್ಪತ್ರೆಯ ಮುಖ್ಯಸ್ಥ ಡಾ.ಸಲ್ಮಾನ್ ಪಟೇಲ್ ಹಾಗೂ ಖ್ಯಾತ ಕ್ಯಾನ್ಸರ್ ತಜ್ಞ ಡಾ.ಅರುಣ್ ಬಾರಾಡ್ ಈ ಕುರಿತು ಮಾಹಿತಿ ಹಂಚಿಕೊಂಡರು. ಕಳೆದ 15 ದಿನಗಳ ಹಿಂದೆ ಕಿಬ್ಬೊಟ್ಟೆಯಲ್ಲಿ (ಕೆಳಭಾಗದ ಹೊಟ್ಟೆ) ತೀವ್ರ ಸ್ವರೂಪದ ಹೊಟ್ಟೆನೋವು ಮತ್ತು ಉಸಿರಾಟದ ತೊಂದರೆ ಸಮಸ್ಯೆಯೊಂದಿಗೆ ಬಂದಿದ್ದ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಮಹಿಳೆಯನ್ನು ದಾಖಲಿಸಿಕೊಂಡು ತಪಾಸಣೆಗೆ ಒಳಪಡಿಸಲಾಗಿತ್ತು.

ಆಕೆಯ ಯಕೃತ್ತಿನಲ್ಲಿ ರಕ್ತನಾಳಗಳ ಜೀವಕೋಶಗಳಿಂದ ಉದ್ಭವಿಸಿದ್ದ ಬೃಹತ್ ಗಡ್ಡೆಯೊಂದು ಪತ್ತೆಯಾಗಿತ್ತು. ವೈದ್ಯಕೀಯ ಪರಿಭಾಷೆಯಲ್ಲಿ ಲಿವರ್ ಹಿಮೊಜಿಮಾ ಎಂದು ಕರೆಯಲಾಗುವ ಈ ಗಡ್ಡೆ ಸುಮಾರು ನಾಲ್ಕುವರೆ ಕೆ.ಜಿ.ಯಷ್ಟಿತ್ತು. ಆಸ್ಪತ್ರೆಯ ಎಲ್ಲ ತಜ್ಞ ವೈದ್ಯರ ಆಳವಾದ ಸಮಾಲೋಚನೆಯ ಬಳಿಕ ಡಿಸೆಂಬರ್ 30ರಂದು ಮಹಿಳೆಯ ಹೊಟ್ಟೆಯಲ್ಲಿದ್ದ ಬೃಹತ್ ಗಡ್ಡೆ ಹೊರತೆಗೆಯಲಾಗಿದೆ ಎಂದರು.

ಸನ್ ರೈಸ್ ಆಸ್ಪತ್ರೆಗೆ ರೋಗಿಯನ್ನು ಕರೆತರುವುದಕ್ಕಿಂತಲೂ ಮುಂಚೆ ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ನಮ್ಮ ಆಸ್ಪತ್ರೆಗೆ ಬಂದ ಬಳಿಕ ಸುದೀರ್ಘ ತಪಾಸಣೆಯ ಬಳಿಕ ಇದೊಂದು ಲಿವರ್ ಹಿಮಾಜಿಮಾ ಪ್ರಕರಣ ಎಂಬುದು ಪತ್ತೆಯಾಯಿತು ಎಂದು ಡಾ.ಅರುಣ್ ಹೇಳಿದರು.

ಹೈದರಬಾದ್ ಮತ್ತು ಬೆಂಗಳೂರಿನಂತಹ ಮೆಟ್ರೊ ನಗರಗಳಲ್ಲಿ ಇಂತಹ ಅಪರೂಪದ ಆಪರೇಷನ್ ಮಾಡಲು ಸುಮಾರು 10 ಲಕ್ಷಕ್ಕಿಂತಲೂ ಹೆಚ್ಚು ಬಿಲ್ ಮಾಡಲಾಗುತ್ತದೆ. ಆದರೆ ನಮ್ಮಲ್ಲಿ ಅತ್ಯಂತ ಕಡಿಮೆ ದರದಲ್ಲಿ ಈ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗಿದೆ ಎಂದರು.

ಅರಿವಳಿಕೆ ತಜ್ಞರಾದ ಡಾ.ಅಜೀಮುದ್ದೀನ್ ಮೈದರ್ಗಿ, ಡಾ.ಹಸೀಬ್ ಸೋಹೆರ್ ವಾರ್ದಿ ಹಾಗೂ ಡಾ.ಪ್ರೇಮಾ ಬನಗೊಂಡ ಸುದ್ದಿಗೋಷ್ಠಿಯಲ್ಲಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

4 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

5 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

6 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

6 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

7 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

7 hours ago