ಶೈಕ್ಷಣಿಕ ಕ್ಷೇತ್ರದ ಕಾಳಜಿ ಕಕುಲಾತಿ ಬಿಂಬಿಸುವ ಪುಸ್ತಕ “ಭರವಸೆಯ ಬೆಳಕು”

ಕಲಬುರಗಿ: ಶೈಕ್ಷಣಿಕ ಕ್ಷೇತ್ರದ ಕಾಳಜಿ,ಕಕುಲಾತಿ ಹಾಗೂ ಧನಾತ್ಮಕ ಅಂಶಗಳನ್ನು ಅತ್ಯಂತ ಸಂಶೋಧನಾ ಹಾಗೂ ಅಧ್ಯಯನದ ನೆಲೆಯಲ್ಲಿ ಬಿಂಬಿಸಿರುವ ಲೇಖನಗಳನ್ನು ಒಳಗೊಂಡ ಪುಸ್ತಕ “ಭರವಸೆಯ ಬೆಳಕು” ಎಂದು ಖ್ಯಾತ ಚಿಂತಕ, ಪ್ರಕಾಶಕ ಎಸ್.ಎಸ್.ಹಿರೆಮಠ ಅಭಿಮತ ವ್ಯಕ್ತಪಡಿಸಿದರು.

ಇತ್ತೀಚೆಗೆ ಕಲಬುರಗಿಯಲ್ಲಿ ಯುವ ಬರಹಗಾರ, ಶಿಜ್ಷಣ ತಜ್ಞರಾದ ಕೆ.ಎಂ.ವಿಶ್ವನಾಥ ಮರತೂರ ಅವರ “ಭರವಸೆಯ ಬೆಳಕು” ಎಂಬ ಪುಸ್ತಕದ ಮುಖಮುಟ ಅನಾವರಣಗೊಳಿಸಿ ಮಾತನಾಡಿದರು.

ಶಿಕ್ಷಣ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ನಮ್ಮ ಕಲ್ಯಾಣ ಕರ್ನಾಟಕದ ಹೆಮ್ಮೆಯಂತಿರುವ ಲೇಖಕರಾದ ಕೆ.ಎಂ.ವಿಶ್ವನಾಥ ಮರತೂರ ಅವರ ಪುಸ್ತಕ ಅತ್ಯಂತ ಪ್ರಮುಖವಾದ ಪುಸ್ತಕವಾಗಿದೆ. ಪ್ರತಿಯೊಂದು ಲೇಖನವು ಶಿಕ್ಷಣದ ಕಾಳಜಿ, ಧನಾತ್ಮಕ ಅಂಶಗಳ ಮೇಲೆ ಬೆಳಕು ಚೆಲ್ಲುತ್ತದೆ. ಮಕ್ಕಳು, ಶಿಕ್ಷಕರು, ಸಮುದಾಯದ ಪಾಲಕರು, ಅಧಿಕಾರಿಗಳು, ಯುವಕರು ಅವಶ್ಯವಾಗಿ ಓದಲೇಬೇಕಾದ ಪುಸ್ತಕವಿದು. ಇಲ್ಲಿ ಒಳಗೊಂಡಿರುವ ಅನೇಕ ಮಾಹಿತಿಯನ್ನು ಅತ್ಯಂತ ಅಧ್ಯಯನ, ಅನುಭವ ಹಾಗೂ ಸಂಶೋಧನಾ ನೆಲೆಯಲ್ಲಿ ರಚಿಸಲಾಗಿದೆ. ಪ್ರತಿಯೊಂದು ಲೇಖನವು ಮಾಹಿತಿಪೂರ್ಣವಾಗಿದ್ದು ಓದುಗರನ್ನು ಸೆಳೆಯುತ್ತವೆ. ಶೈಕ್ಷಣಿಕ ಚಿಂತನೆಗಳಿಂದ ಕೂಡಿವೆ. ಜನರ ಮನದೊಳಗೆ ಮೂಡಬಹುದಾದ ಅನೇಕ ಸವಾಲುಗಳಿಗೆ ಸಮಸ್ಯೆಗಳಿಗೆ ಪರಿಹಾರ ಶೈಕ್ಷಣಿಕವಾಗಿ ಕೊಡಲಿವೆ ಎಂದರು.

ಕಾರ್ಯಕ್ರಮದಲ್ಲಿ ಹಾಜರಿದ್ದ, ಬರಹಗಾರ ಕೆ.ಎಂ.ವಿಶ್ವನಾಥ ಮರತೂರ ಮಾತನಾಡುತ್ತಾ, ಈ ಪುಸ್ತಕವು ಶೈಕ್ಷಣಿಕ ಕ್ಷೇತ್ರದ ಮಹತ್ವ, ಸ್ಥೂಲವಾದ ಪರಿಚಯ, ಪ್ರಸ್ತುತ ಶೈಕ್ಷಣಿಕ ಕ್ಷೇತ್ರದ ವಿನೂತನ ಪ್ರಯೋಗಗಳು ಒಳಗೊಂಡಿದೆ. ನನ್ನ ಕ್ಷೇತ್ರಮಟ್ಟದಲ್ಲಿ ಕೆಲಸಗಳ ಜೊತೆಗೆ ಅಲ್ಲಿರುವ ಧನಾತ್ಮಕ ಅನುಭವಗಳನ್ನು ಅಕ್ಷರ ರೂಪಕ್ಕಿಳಿಸುವ ಪ್ರಮಾಣಿಕ ಪ್ರಯತ್ನ ಮಾಡಲಾಗಿದೆ. ಎಲ್ಲರೂ ಓದಿ ಆಸ್ವಾದಿಸಲು ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಮಹಾನಂದಾ ದಿಗ್ಗಾಂವಕರ ಒಳಗೊಂಡಂತೆ ಇತರ ಸಾಹಿತ್ಯಾಸಕ್ತರು “ಭರವಸೆಯ ಬೆಳಕು” ಪುಸ್ತಕದ ಆಕರ್ಷಕ ಮುಖಪುಟದ ಬಿಡುಗಡೆಯ ಸಂದರ್ಭದಲ್ಲಿ ಉಪಸ್ಥಿತರಿದ್ದರು.

emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

1 hour ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

2 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

4 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

15 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

17 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

18 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420