ಕಲಬುರಗಿ: ನಗರದ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಕ್ಷವನ್ನು ತೊರೆದು, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ, ಶಾಸಕ ಬಸವರಾಜ ಮತ್ತಿಮಡು ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಸವರಾಜ ಮತ್ತಿಮಡು, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಡಳಿತ ವೈಖರಿ, ಅಭಿವೃದ್ಧಿ ಪರವಾದ ಕೆಲಸವನ್ನು ನೋಡಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರುತ್ತಿದ್ದು,ಮುಂಬರುವ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಶ್ರಮ ಹಾಕಿ, ಪಕ್ಷವನ್ನು ಅಧಿಕಾರಕ್ಕೆ ತರಲು ಕೆಲಸ ಮಾಡಬೇಕು ಎಂದರು.
ಮುಂಬರುವ ದಿನಗಳಲ್ಲಿ ಕಮಲಾಪುರ ತಾಲೂಕಿನ ವ್ಯಾಪ್ತಿಯಲ್ಲಿ 2500 ಜನರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ದೊಡ್ಡ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು ಎಂದು ಹೇಳಿದ ಅವರು, ಸೇರ್ಪಡೆಗೊಂಡ ಎಲ್ಲಾ ಕಾರ್ಯಕರ್ತರಿಗೆ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಶಾಸಕ ಅವಿನಾಶ್ ಜಾಧವ, ವಿಧಾನ ಪರಿಷತ್ ಸದಸ್ಯ ಶಶೀಲ ನಮೋಶಿ, ಮಾಜಿ ವಿಧಾನ ಪರಿಷತ್ ಸದಸ್ಯ ಅಮರನಾಥ ಪಾಟೀಲ್, ಕಾಡಾ ಅಧ್ಯಕ್ಷ ಹರ್ಷವರ್ಧನ ಗೂಗಳೆ ಸೇರಿದಂತೆ ಹಲವು ಮುಖಂಡ ಉಪಸ್ಥಿತರಿದ್ದರು.
ಗ್ರಾಮೀಣ ಭಾಗದ ಸುಮಾರು 500 ಜನ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಬಂಡೆಪ್ಪಾ ಲೆಂಗಟಿ, ವಿಜಯಕುಮಾರ್ ಲೆಂಗಟಿ, ಅಬ್ದುಲ್ ರಹೀಮ, ಗೋಪಾಲ್ ಕಿಣ್ಣಿ ಸಡಕ್, ಜಗದೇವಿ ಚೆಂಗಟಾ, ಚಂದ್ರಕಾಂತ ಸಾಹು, ಗೌತಮ್ ದಸ್ತಾಪುರ, ಮಂಜುನಾಥ್ ಮಾಳಕೆ, ಮಂಜುನಾಥ್ ವಗ್ಗೆ, ಆನಂದ ಪೂಜಾರಿ, ಅಶೋಕ್ ಓಕಳಿ, ಯಶವಂತ ಸಾಹುಕಾರ, ದತ್ತು ಮರಾಠಾ, ನಾಗರ ಕಲ್ಲಹಂಗರಗಾ, ಶರಣಬಸಪ್ಪಾ ಹೊಳಗುಂದಾ ಸೇರಿದಂತೆ ಹಲವರು ಪಕ್ಷಕ್ಕೆ ಸೇರ್ಪಡೆಗೊಂಡರು.