ಬೈರಿಮರಡಿ: ಜಯ ಕರ್ನಾಟಕ ರಕ್ಷಣಾ ಸೇನೆ ಗ್ರಾಮ ಶಾಖೆ ರಚನೆ

ಸುರಪುರ: ತಾಲೂಕಿನ ಬೈರಿಮರಡಿ ಗ್ರಾಮದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆ ಗ್ರಾಮ ಶಾಖೆ ರಚನೆ ಮಾಡಲಾಯಿತು.ಸಂಘಟನೆಯ ತಾಲೂಕು ಅಧ್ಯಕ್ಷ ಮಲ್ಲಪ್ಪ ನಾಯಕ ಕಬಾಡಗೇರ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು,ಇಂದು ಬೈರಿಮರಡಿ ಗ್ರಾಮದ ಅನೇಕರು ಇಂದು ನಮ್ಮ ಜಯ ಕರ್ನಾಟಕ ರಕ್ಷಣಾ ಸೇನೆ ಸಂಘಟನೆಯನ್ನು ಸೇರಿ ಗ್ರಾಮ ಶಾಖೆ ರಚನೆ ಮಾಡಿಕೊಂಡು ಹೋರಾಟಕ್ಕೆ ಮುಂದಾಗಿರುವುದು ತುಂಬಾ ಸಂತೋಷದ ಸಂಗತಿಯಾಗಿದೆ,ಗ್ರಾಮದ ಸಮಸ್ಯೆಗಳ ಕುರಿತು ಧ್ವನಿ ಎತ್ತುವುದು ಹಾಗೂ ಸಂಘಟನೆಯ ಎಲ್ಲಾ ಹೋರಾಟಗಳಲ್ಲಿ ತಾವು ಭಾಗವಹಿಸುವ ಮೂಲಕ ನಾಡು ನುಡಿ ಸೇವೆಗೆ ಮುಂದಾಗುವಂತೆ ಕರೆ ನೀಡಿದರು.ಅಲ್ಲದೆ ಸಂಘಟನೆಯ ಯಾವುದೇ ತತ್ವ ಸಿದ್ಧಾಂತಗಳಿಗೆ ಧಕ್ಕೆ ಬರದಂತೆ ಸಂಘಟನೆಯನ್ನು ಬೆಳೆಸುವಂತೆ ಕಿವಿಮಾತು ಹೇಳಿದರು.

ಈ ಸಂಧರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆ ಯಾದಗಿರಿ ಜಿಲ್ಲಾ ಕಾರ್ಯದರ್ಶಿ ಯಾದ ಶರಣು ಬೈರಿಮರಡಿ, ಮುಖಂಡರಾದ ರಾಜು ಧರಬಾರಿ, ಹೊನ್ನಪ್ಪ ಬೈರಿಮರಡಿ, ಶಿವರಾಜ ವಗ್ಗರ, ರಾಘು ಕಟ್ಟಿಮನಿ, ರಾಘು ಹೋಗಿಕೆರ, ರವಿ ನಾಯಕ ಬಿಚದಕೆರ,ತಿಪ್ಪಣ್ಣ ಖಾನಿಕೇರಿ,ರಾಮಚಂದ್ರ ದೇವರಗೊನಾಲ ಮತ್ತು ಇನ್ನಿತರರಿದ್ದರು.

ಗ್ರಾಮಶಾಖೆ ಪದಾಧಿಕಾರಿಗಳು: ಅಧ್ಯಕ್ಷರನ್ನಾಗಿ ರಾಜು ಹುಂಡೆಕಲ, ಗೌರವ ಅಧ್ಯಕ್ಷರನ್ನಾಗಿ ಸಿದ್ರಾಮಪ್ಪ ಅನಸುರ,,ಉಪಾಧ್ಯಕ್ಷರನ್ನಾಗಿ ಬಲಭೀಮ ಬನ್ನೆಟ್ಟಿ,ಕಾರ್ಯಾಧ್ಯಕ್ಷ ಮೈಲಾರೆಪ್ಪ ಯಾದವ, ಪ್ರಧಾನ ಕಾರ್ಯದರ್ಶಿ ವೆಂಕಟೇಶ ದೊರಿ, ಸಹ ಕಾರ್ಯದರ್ಶಿ ಮೈಲಾರಪ್ಪ ಯಾದವ, ಸಂಚಾಲಕ ಸಣ್ಣ ಭೀಮಣ್ಣ ಸಂಗಟಿ, ಜಂಟಿ ಕಾರ್ಯದರ್ಶಿ ವೆಂಕಟೇಶ ನಾಯ್ಕೊಡಿ, ಖಜಾಂಚಿ ಬಲಭೀಮ ಚಳ್ಳಿಗಿ ಮತ್ತಿತರರನ್ನು ಆಯ್ಕೆ ಮಾಡಿ ಆದೇಶ ಪತ್ರ ನೀಡಲಾಯಿತು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

48 mins ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

7 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

17 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

19 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

19 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

19 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420