ಕಲಬುರಗಿ: ಪ್ರತಿಯೋಬ್ಬರ ಮನುಷ್ಯ ದೈಹಿಕವಾಗಿ ಸದೃಢ ಇದ್ದರಷ್ಟೇ ಸಾಲದು. ಮಾನಸಿಕವಾಗಿ ಆರೋಗ್ಯ ಹೊಂದುವುದು ಮುಖ್ಯ ಎಂದು ಸಾಹಿತಿ ಚಿಂತಕ ಜಿ.ಜಿ.ವಣಿಕ್ಯಾಳ ಅಭಿಪ್ರಾಯಪಟ್ಟರು.
ಜಯನಗರ ಶಿವಮಂದಿರದಲ್ಲಿ ಜಯನಗರ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಆರೋಗ್ಯ ಬದುಕು ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯ ಹೊಂದಿದ ವ್ಯಕ್ತಿ ಜೀವನದಲ್ಲಿ ಎನು ಬೇಕಾದರು ಸಾಧನೆ ಮಾಡಬಹುದು.ಆರೋಗ್ಯ ಕೆಟ್ಟರೆ ಬದುಕು ಭಾರವಾಗುತ್ತದೆ.ಆದ್ದರಿಂದ ದಿನ ನಿತ್ಯ ಯೋಗಾಭ್ಯಾಸ ಹಾಗೂ ಸಮತೋಲನ ಆಹಾರದ ಕಡೆ ಗಮನಹರಿಸಬೇಕು ಎಂದ ಅವರು ಜಂಜಾಟದ ಬದುಕಿನಿಂದ ದೂರವಿದ್ದು, ಸಂತೋಷದಿಂದ ದಿನ ಕಳೆಯಬೇಕು ಎಂದರು.
ಇನ್ನೋರ್ವ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ನಿವೃತ್ತ ನರ್ಸಿಂಗ್ ಅಧೀಕ್ಷಕ ವಿನೋದ ಪಾಟೀಲ್ ಇಂದಿನ ಯುವಕರು ತಂಬಾಕು ಹಾಗೂ ಗುಟ್ಕಾ ಮತ್ತು ಸಿಗರೇಟು ಸೇದುವ ಚಟಕ್ಕೆ ಬಲಿಯಾಗಿ ಜೀವನಪೂರ್ತಿ ನರಳಲಾಡುತ್ತಾರೆ.ಮಾನಸಿಕವಾಗಿಯೂ ಕುಗ್ಗಿ ಉತ್ಸಾಹ ಕಳೆದು ಕೊಳ್ಳುತ್ತಾರೆ.ಇದನ್ನು ತಪ್ಪಿಸಲು ಪಾಲಕರು ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸುವ ಜೊತೆಗೆ ತಿಳಿಹೇಳುವ ಕೆಲಸಕ್ಕೆ ಮುಂದಾಗಬೇಕು ಎಂದರು.
ಟ್ರಸ್ಟ್ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಅತಿಥಿಗಳಾಗಿ ವಿರೇಶ ದಂಡೋತಿ, ಭೀಮಾಶಂಕರ ಶೆಟ್ಟಿ ವೇದಿಕೆಮೇಲೆ ಇದ್ದರು.ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಕೆ.ಬಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಯದರ್ಶಿ ಶಿವಪುತ್ರಪ್ಪ ಮರಡಿ, ಕೋಶಾಧ್ಯಕ್ಷ ಬಸವರಾಜ ಮಾಗಿ, ಹಿರಿಯ ಸದಸ್ಯರಾದ ಬಸವರಾಜ ಅನ್ವರಕರ, ವಾಸುದೇವ ಮಾಲಿ ಬೀರಾದರ, ಬಂಡೆಪ್ಪ ಕೇಸೂರ, ಎಸ್.ಡಿ.ಸೇಡಂಕರ, ಶಿವಕುಮಾರ ಪಾಟೀಲ್,ಬಡಶೇಷಿ, ಶ್ರೀಮತಿ ಅನುರಾಧ ಕುಮಾರಸ್ವಾಮಿ, ಪ್ರಶಾಂತ ತಂಬೂರಿ,ಜೈ ಭೀಮ್ ಸಾಲೇಗಾಂವ ಸೇರಿದಂತೆ ಮುಂತಾದವರು ಇದ್ದರು.
ಬೆಂಗಳೂರು:ಕಲಾವಿದನ ಕಲ್ಪನೆ ಮತ್ತು ಭಾವನೆಗಳ ಅಭಿವ್ಯಕ್ತಿಯೆ ಚಿತ್ರಕಲೆ,ಹಾಗೂ ಸಾಮಾನ್ಯವಾಗಿ ಒಬ್ಬ ಕಲಾವಿದ ಕಲೆಯಲ್ಲಿ ತೊಡಗಿಕೊಳ್ಳುವುದರಿಂದ ಅವರ ಯೋಚನೆ ಮತ್ತು ಭಾವನೆಗಳು…
ಕಲಬುರಗಿ: ನಗರದ ಕಲಾಮಂಡಳದಲ್ಲಿ ಜಾÐನದೀಪ ನೃತ್ಯ ಕಲಾಸಂಸ್ಥೆ ರಿ ವತಿಯಿಂದ ಸಾಂಸ್ಕ್ರತಿಕ ಕಲಾಮಹೋತ್ಸ ಮತ್ತು ಎಸ್.ಎಸ್.ಎಲ್.ಸಿ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಶರಣ ಬಸವೇಶ್ವರರ ದೇವಸ್ಥಾನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಚಿತ್ತಾಪುರ ತಾಲೂಕು ಘಟಕದ…
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…