ಕಲಬುರಗಿ: ಕನ್ನಡ ಭವನದಲ್ಲಿ ಕಲ್ಯಾಣ ಕರ್ನಾಟಕ ಸೇನೆ ವತಿಯಿಂದ 205ನೇ ಭೀಮಾ ಕೋರೆಗಾಂವ ವಿಜಯೋತ್ಸವದ ಪ್ರಯುಕ್ತ ಕಲ್ಯಾಣ ಕರ್ನಾಟಕ ಸೇನೆಯ ಸಂಸ್ಥಾಪಕ ಅಧ್ಯಕ್ಷ ದತ್ತು ಹಯ್ಯಾಳಕರ್ ಮತ್ತು ಕಲ್ಯಾಣ ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷ ಯುವ ಉತ್ಸಾಹಿ ಆದಿತ್ಯ ಡಿ. ಹಯ್ಯಾಳಕರ್ ಇವರ ನೇತೃತ್ವದಲ್ಲಿ ಅಂಧ ವಿದ್ಯಾರ್ಥಿಗಳಿಗೆ, ವಿಕಲಚೇತನ (ಅಂಗ ವಿಕಲರಿಗೆ), ಅನಾಥ ಮಕ್ಕಳಿಗೆ, ಕಿವುಡ ಮೂಕÀ ಮಕ್ಕಳಿಗೆ ಕಂಬಳಿ ಹಾಗೂ ಹಣ್ಣು ಹಂಪಲಗಳನ್ನು ವಿತರಿಸಲಾಯಿತು.
ಕಾರ್ಯಕ್ರಮವನ್ನು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಅಧೀಕ್ಷಕ ಇಂಜಿನಿಯರರಾದ ಸುರೇಶ ಶರ್ಮಾ ಅವರು ಉದ್ಘಾಟಿಸಿ ಮಾತನಾಡುತ್ತಾ ಭೀಮಾ ಕೋರೆಗಾಂವ ವಿಜಯೋತ್ಸವದ ಕುರಿತು ಇತಿಹಾಸದ ಪುಟಗಳನ್ನು ನೆನಪಿಸಿಕೊಳ್ಳುತ್ತಾ ಸದೃಢ ದೇಶವನ್ನು ಕಟ್ಟಲು ಬಾಬಾ ಸಾಹೇಬರ ಕೊಡುಗೆಯನ್ನು ಸ್ಮರಿಸುತ್ತಾ ಯುವ ಪೀಳಿಗೆಗಳು ಅನುಸರಿಸಲು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಡಾ. ಎ.ಎಸ್. ರುದ್ರವಾಡಿ, ಮಹಾನಗರ ಪಾಲಿಕೆಯ (ಸಿ.ಇ.ಓ) ಮಾಣಿಕರಾವ, ಬಿ.ಜೆ.ಪಿ ಯುವ ಮುಖಂಡ ಚನ್ನಪ್ಪ, ಮುಖಂಡರಾದ ನಾಗರಾಜ ಮೇತ್ರೆ, ಭರತ ತಾರ್ಪೈಲ್, ಗೋರಂಪಳ್ಳಿ, ಶ್ರೀದೇವಿ ಮುತ್ತಂಗಿ, ಮಣಿಕಂಠ ತಾರ್ಫೈಲ್, ರಮೇಶ ಎಂ. ಸರಡಗಿ ಇದ್ದರು.
ಈ ಕಾರ್ಯಕ್ರಮದಲ್ಲಿ ಸುಮಾರು ಎಂಬತ್ತಕ್ಕಿಂತ ಹೆಚ್ಚು ಅಂಧ ಮತ್ತು ಶ್ರವಣ ದೋಷ ಮತ್ತು ವಿಕಲಚೇತನ ಹಾಗೂ ಅನಾಥ ಮಕ್ಕಳಿಗೆ ಕಂಬಳಿ ಹೊದಿಕೆ ಹಣ್ಣು ವಿತರಿಸುವುದರ ಮೂಲಕ ಸತ್ಕರಿಸಲಾಯಿತು. ಕಾರ್ಯಕ್ರಮವನ್ನು ಜೈಭೀಮ ಸಾವಳಗಿ ಸಂಗಿತ ಕಲಾವಿದ ನಿರೂಪಿಸಿದರು ಹಾಗೂ ರಮೇಶ ಎಂ. ಸರಡಗಿ ವಂದಿಸಿದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…