ಕಲಬುರಗಿ: ರಾಜ್ಯ ಭ್ರಷ್ಟಾಚಾರ ನಿರ್ಮೂಲನಾ ದಳದ ರಾಜ್ಯಾಧ್ಯಕ್ಷರಾದ ಡಾ. ಎಎಸ್ ಭದ್ರಶೆಟ್ಟಿಯವರನ್ನು ರಾಷ್ಟ್ರೀಯ ಭ್ರಷ್ಟಾಚಾರ ನಿಗ್ರಹ ಮತ್ತು ಕಾರ್ಯಾಚರಣೆ ಸಮಿತಿಯ ಕರ್ನಾಟಕ ರಾಜ್ಯ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಷ್ಟ್ರೀಯ ಭ್ರಷ್ಟಾಚಾರ ನಿಗ್ರಹ ಮತ್ತು ಕಾರ್ಯಾಚರಣೆ ಸಮಿತಿಯ ಅಧ್ಯಕ್ಷ ರಾಜೇಶ್ ಶುಕ್ಲಾರವರು ನೇಮಕ ಮಾಡಿದ್ದಾರೆ ಎಂದು ಸಮಿತಿಯ ದಕ್ಷಿಣ ಭಾರತದ ಅಧ್ಯಕ್ಷ ಶ್ರೀ ನಲ್ಲಮ್ ಸಂಜೀವ ರೆಡ್ಡಿಯವರು ತಿಳಿಸಿದ್ದಾರೆ.