ಶಹಾಬಾದ: ದೇಶದ ಸಂಸ್ಕøತಿ ಮತ್ತು ಗೌರವವನ್ನು ವಿಶ್ವಕ್ಕೆ ಪರಿಚಯಿಸಿದ ಮಹಾನ್ ಸಾಧಕರಾದ ವಿವೇಕಾನಂದರ ದೇಶ ಪ್ರೇಮ ಮತ್ತು ಈ ಮಣ್ಣಿನ ಬಗ್ಗೆ ಅವರಿಗಿದ್ದ ಧನ್ಯತಾ ಭಾವನೆ ಇಂದಿನ ಯುವಕರಲ್ಲಿ ಬೆಳೆಯಬೇಕಿದೆ ಎಂದು ಎಸ್.ಎಸ್.ಮರಗೋಳ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೋ. ಕೆ.ಬಿ.ಬಿಲ್ಲವ್ ಹೇಳಿದರು.
ಅವರು ಗುರುವಾರ ನಗರದ ಎಸ್.ಎಸ್.ಮರಗೋಳ ಕಲಾ,ವಿಜ್ಞಾನ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ ಶ್ರೀ ಸ್ವಾಮಿ ವಿವೇಕಾನಂದರವರ 160ನೇ ಜನ್ಮ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಯುವ ಜನಾಂಗಕ್ಕೆ ದೇಶದ ಭವಿಷ್ಯವನ್ನೇ ಬದಲಾಯಿಸುವ ಶಕ್ತಿ ಇದ್ದು, ಆ ಶಕ್ತಿಯ ಮಹತ್ವವನ್ನು ಯುವ ಜನಾಂಗ ಅರಿಯಬೇಕಾಗಿದೆ. ನಮ್ಮೊಳಗೆ ಅಗಾಧವಾದ ಅತಿ ಅದ್ಭುತ ಶಕ್ತಿ ಇದೆ.ಅದನ್ನು ಅರಿತು ನಡೆದಾಗ ಮಾತ್ರ ನಮ್ಮ ವ್ಯಕ್ತಿತ್ವ ರೂಪಗೊಳ್ಳಲು ಸಾಧ್ಯ.ಹಾಗೇ ನಾವು ಅಂದುಕೊಂಡ ಕಾರ್ಯವು ಎಲ್ಲ ಫಲಿಸುತ್ತದೆ ಎಂದು ಹೇಳಿದರು.
ಉಪನ್ಯಾಸಕ ರಾಮಣ್ಣ ಇಬ್ರಾಹಿಂಪೂರ ಮಾತನಾಡಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಸ್ವಾಭಿಮಾನದ ಕಿಚ್ಚು ಮೂಡಿದಾಗ ಮಾತ್ರ ಭಾರತ ದೇಶವನ್ನು ಬಲಿಷ್ಠ ರಾಷ್ಟ್ರವನ್ನಾಗಿ ಮಾಡಲು ಸಾಧ್ಯ. ಜೀವನದಲ್ಲಿ ಧೈರ್ಯದಿಂದ ಮುನ್ನುಗ್ಗಬೇಕು.ಅಡೆತಡೆಗಳು ಬರುವುದು ಸಹಜ.ಅದನ್ನು ಮೆಟ್ಟಿ ನಿಂತಾಗ ಮಾತ್ರ ನಮ್ಮ ಗೆಲುವು ಮಾತ್ರ ಖಚಿತ.ಆದ್ದರಿಂದ ಆತ್ಮಬಲ,ಆತ್ಮ ವಿಶ್ವಾಸದ ಶಕ್ತಿ ಸ್ವಾರ್ಥಕ್ಕೆ ಬಲಿಯಾಗದೇ ಸಮಾಜ ಮುಖಿ ಚಿಂತನೆಗಳತ್ತ ವಾಲಿದರೆ ವಿವೇಕಾನಂದರ ಆಶಯಗಳು ಈಡೇರಲು ಸಾಧ್ಯ ಎಂದರು.
ಮುಖ್ಯ ಅತಿಥಿಗಳಾಗಿ ಪ್ರಾರ್ಧಯಾಪಕರಾದ ಡಾ.ಬಸವರಾಜ ಹಿರೇಮಠ, ಗಂಗಾಧರ ಸ್ಥಾವರಮಠ, ಡಾ.ಸಿ.ಬಿ.ಗಂಧಿಗುಡಿ, ಡಾ.ವೆಂಕಟೇಶ,ಎಮ್.ಕೆ.ಬೋತಗಿ, ಡಾ.ವೆಂಕಟರಾಜಪ್ಪ ಸೇರಿದಂತೆ ಪದವಿ ಹಾಗೂ ಪದವಪೂರ್ವ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.
ಶಿವಶಂಕರ ಹಿರೇಮಠ ನಿರೂಪಿಸಿದರು, ಎಮ್.ಕೆ.ಬೋತಗಿ ಸ್ವಾಗತಿಸಿದರು, ಶರಣಮ್ಮ ಕೊಳ್ಳಿ ವಂದಿಸಿದರು.