ಕಲಬುರಗಿ: ವಿವಿಧ ಉದ್ದೇಶ ಸಮಾಜ ಸೇವಾ ಸಮಿತಿಯು ಜ.16 ಸೋಮವಾರ ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹಾಗರಗಾ ರಸ್ತೆಯಲ್ಲಿರುವ ಪ್ರೀನ್ಸ್ ಫಂಕ್ಷನ್ ಹಾಲ್ ನಲ್ಲಿ ಕಲ್ಯಾಣ ನಾಡಿನ ಹೋರಾಟಗಾರ ಲಿಂಗರಾಜ ಸಿರಗಾಪೂರ ಅವರಿಗೆ ಜನಸೇವಾ ರತ್ನ ಪ್ರಶಸ್ತಿ ಪ್ರದಾನ ಹಾಗೂ ಗಣ್ಯರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಸಾಜಿದ್ ಅಲಿ ರಂಜೋಳ್ವಿ ಅವರು ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಾಜಿ ಶಾಸಕ ಅಲ್ಲಂಪ್ರಭು ಪ್ರಾಟೀಲ ಅವರು ಪ್ರಶಸ್ತಿ ಪ್ರದಾನ ಮಾಡುವರು.ಮುಖ್ಯ ಅತಿಥಿಗಳಾಗಿ ಕಾಂಗ್ರೆಸ್ ಮುಖಂಡ ನಿಲಕಂಠ ಮೂಲಗೆ, ಮಾಜಿ ವಕ್ಫ್ ಮಂಡಳಿ ಅಧ್ಯಕ್ಷ ಅಸದ್ ಅನ್ಸಾರಿ, ಖ್ಯಾತ ಕವಿಗಳಾದ ಮಕ್ಬುಲ್ ಅಹ್ಮದ್ ನೈಯರ್, ರಿಜ್ವಾನ್ ಉರ್ ರೇಹ್ಮಾನ್ ಆಗಮಿಸುರು. ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷ ಸಾಜಿದ್ ಅಲಿ ರಂಜೋಳ್ವಿ ಅವರು ವಹಿಸುವರು.
ನಿವೃತ್ತ ಮುಖ್ಯೋಪಾಧ್ಯಾಯ ಮಹ್ಮದ್ ಗೆಸುರರಾಜ, ಹಿರಿಯ ಪತ್ರಕರ್ತ ರಿಯಾಜ್ ಖತೀಬ್, ಸಾಹಿತಿ ಚಿಂತಕ ಜಿ.ಜಿ.ವಣಿಕ್ಯಾಳ, ಪತ್ರಕರ್ತ ಚಿಂತಕ ಡಾ.ಮಾಜಿದ ದಾಗಿ, ರಫೀಕ್ ಕಮಲಾಪೂರಿ, ಮಹ್ಮದ್ ಆರಿಫುದ್ದಿನ್, ಪತ್ರಕರ್ತ ಮುಬಿನ್ ಜಖ್ಮ್ ,ಸಮಾಜ ಸೇವಕರಾದ ಮಕ್ಬುಲ್ ಅಹ್ಮದ್ ಸಗ್ರಿ ಹಾಗೂ ಬಾಬಾ ಫಕ್ರುದ್ದೀನ್ ಅವರನ್ನು ಸನ್ಮಾನಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…