ಹಿರಿಯ ಸಾಹಿತಿ ಮಲ್ಲಿಕಾರ್ಜುನ ಪಾಟೀಲ ನಿಧನ

ಸೊಲ್ಲಾಪುರ: ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದ ಜತ್ತ ತಾಲ್ಲೂಕಿನ ಉಟಗಿ ಗ್ರಾಮದ ಕನ್ನಡದ ಹಿರಿಯ ಸಾಹಿತಿ ಮಲ್ಲಿಕಾರ್ಜುನ ಪಾಟೀಲ (50) ಅವರು ಅನಾರೋಗ್ಯದಿಂದ ಶುಕ್ರವಾರ ನಿಧನರಾದರು. ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರರು ಇದ್ದಾರೆ. ಪಾಟೀಲರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಗಡಿನಾಡಿನ ಅಪ್ಪಟ ಕನ್ನಡಿಗರಾದ ಇವರು ಗಡಿ ಕವಿಗಳೆಂದು ಪ್ರಸಿದ್ಧರು. ಮಹಾನೆಲದಲ್ಲಿ ಕನ್ನಡ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಇವರು ನಾಲ್ಕು ಕವನ ಸಂಕಲನ  ಪ್ರಕಟಿಸಿದ್ದಾರೆ.  ಮಕ್ಕಳ ಸಾಹಿತ್ಯ, ಜಾನಪದ ಸಾಹಿತ್ಯ, ನಾಟಕ  ಮತ್ತು ಹಲವು  ಪ್ರಬಂಧಗಳನ್ನು ಮಂಡಿಸಿದ್ದಾರೆ.

ಸೃಜನಾತ್ಮಕ ಕಥೆ, ಕಾದಂಬರಿ ಲೇಖಕರಾಗಿ ಸಾಹಿತ್ಯಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರಿಗೆ ವಿವಿಧ ಪ್ರಶಸ್ತಿಗಳು ಲಭಿಸಿವೆ. ರಾಯಚೂರಿನಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕವನ ವಾಚಿಸುವ ಮೂಲಕ ಗಡಿನಾಡಿನ ಪ್ರಾತಿನಿಧಿಕ ತೋರಿಸಿದ್ದರು. ಗಡಿಭಾಗದಲ್ಲಿ ಹಲವು ಸಾಹಿತ್ಯ, ಸಾಂಸ್ಕೃತಿ ಸಮ್ಮೇಳನದಲ್ಲಿ ಕವಿ, ಉಪನ್ಯಾಸಕರಾಗಿ  ಸಹಭಾಗ ತೋರಿಸಿ ಇಲ್ಲಿನ ಕನ್ನಡ ಅಭಿವೃದ್ಧಿಗಾಗಿ ಸದಾ ಮೂಂಚುಣಿಯಾಗಿ ಕಾರ್ಯ ನಿರ್ವಹಿಸಿದ್ದರು.

ಕನ್ನಡ ನಾಡಿನ ಹೊರಗಿದ್ದು ಸದಾ ಕನ್ನಡಕ್ಕಾಗಿ ಸಿದ್ಧರಿರುವ ಮಲ್ಲಿಕಾರ್ಜುನ ಪಾಟೀಲರನ್ನು ಕಳೆದುಕೊಂಡಿದ್ದು ಗಡಿನಾಡ ಕನ್ನಡಿಗರಿಗೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು, ಮಹಾರಾಷ್ಟ್ರ ಗಡಿನಾಡು ಘಟಕ, ಆದರ್ಶ ಕನ್ನಡ ಬಳಗ, ಕನ್ನಡ ಶಿಕ್ಷಕ ಬಳಗ ಸೇರಿದಂತೆ ಗಡಿನಾಡಿನ ಕನ್ನಡಿಗರು ಸಂತಾಪ ವ್ಯಕ್ತಪಡಿಸಿದ್ದಾರೆ.

ಚೌಕಟ್ಟಿನಲ್ಲಿ : ಹಿರಿಯ ಸಾಹಿತಿ ಮಲ್ಲಿಕಾರ್ಜುನ ಪಾಟೀಲರ ನಿಧನದಿಂದ ಗಡಿನಾಡ ಕನ್ನಡಿಗರಿಗೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅವರ ಅಭಿಮಾನಿ ಮತ್ತು ಶಿಷ್ಯರಿಗೆ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. – ಸೋಮಶೇಖರ್ ಜಮಶೆಟ್ಟಿ, ಅಧ್ಯಕ್ಷರು, ಕಸಾಪ ಮಹಾರಾಷ್ಟ್ರ ಘಟಕ.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

11 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

14 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

18 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

19 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

21 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420