ಜನಸ್ನೇಹಿ ಕಾನೂನು ಸುವ್ಯಸ್ಥೆಗೆ ಆದ್ಯತೆ: ನೂತನ ಕಮಿಷನರ್ ಚೇತನ ಆರ್. ಭರವಸೆ

ನಗರದ ಬೇರೆ ಬೇರೆ ಬಡಾವಣೆ ಮತ್ತು ರಸ್ತೆಗಳು ಬೇರೆ ಬೇರೆ ಪೊಲೀಸ್ ಠಾಣೆಗಳ ವ್ಯಾಪ್ತಿಗೆ ಬರುತ್ತವೆ. ಅಪಘಾತ ಅಥವಾ ತುರ್ತು ಸಂದರ್ಭಗಳಲ್ಲಿ ಯಾವ ಠಾಣೆಯನ್ನು ಸಂಪರ್ಕಿಸಬೇಕು ಎಂಬ ಗೊಂದಲ ಸಾರ್ವಜನಿಕರನ್ನು ಕಾಡುತ್ತದೆ. ಹೀಗಾಗಿ ಇಷ್ಟರಲ್ಲೇ ಪೊಲೀಸ್ ಠಾಣೆಗಳ ಸರಹದ್ದು ಖಚಿತಪಡಿಸುವ ಬೋರ್ಡ್‍ಗಳನ್ನು ನಗರದ ಎಲ್ಲೆಡೆ ಅಳವಡಿಸಲಾಗುವುದು. -ಚೇತನ್ ಆರ್, ಕಲಬುರಗಿ ನಗರ ಪೊಲೀಸ್ ಕಮಿಷನರ್.

ಕಲಬುರಗಿ: ಪೊಲೀಸ್ ಆಯುಕ್ತಾಲಯದ ವ್ಯಪ್ತಿಯಲ್ಲಿ ಕನೂನು ಸುವ್ಯವಸ್ಥೆ ಪಾಲನೆಗೆ ಮೊದಲ ಆದ್ಯತೆ ನೀಡಲಗುತ್ತಿದ್ದು, ಮಕ್ಕಳು ಮತ್ತು ಹಿರಿಯ ನಾಗರಿಕರ ರಕ್ಷಣೆಗೆ ಜನಶ್ನೇಹಿ ಪೊಲೀಸ್ ವ್ಯವಸ್ಥೆಗಾಗಿ ಸಹಾಯವಾಣಿ 112 ಸಕ್ರಿಯಗೊಳಿಸಲಾಗುವುದು ಎಂದು ನೂತನ ಪೊಲೀಸ್ ಕಮಿಷನರ್ ಚೇತನ ಆರ್. ತಿಳಿಸಿದರು.

ಇಲ್ಲಿನ ಪೊಲೀಸ್ ಕಮಿಷನರ್ ಕಚೇರಿಯ ಸಭಾಂಗಣದಲ್ಲಿ ಶನಿವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದುರ್ಬಲ, ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಕಡಿವಾಣ ಹಾಕುವುದಕ್ದಕಾಗಿ ಇಲಾಖೆಯನ್ನು ಸನ್ನದ್ದುಗೊಳಿಸುವುದಾಗಿ ಅವರು ಹೇಳಿದರು.

ಆಯುಕ್ತಾಲಯದ ವ್ಯಾಪ್ತಿಯಲ್ಲಿ ನೈಟ್ ಬೀಟ್ ವ್ಯವಸ್ಥೆ ಮತ್ತಷ್ಟು ಬಲಪಡಿಸಲಾಗುವುದು ಅದರಲ್ಲೂ ಮುಖ್ಯವಾಗಿ ವರ್ತುಲ ರಸ್ತೆ ಮತ್ತು ಹೆಚ್ಚು ಜನಸಂಚಾರ ಇಲ್ಲದ ಪ್ರದೇಶಗಳಲ್ಲಿ ಅಪರಾಧ ಕೃತ್ಯಗಳಿಗೆ ಆಸ್ಪದವಿಲ್ಲದಂತೆ ನೈಟ್ ಬೀಟ್ ಸಕ್ರಿಯಗೊಳಿಸಲಾಗುವುದು ಎಂದರು.

ಬೆಳಗ್ಗೆ 9ರಿಂದ 11 ಮತ್ತು ಸಂಜೆ 5ರಿಂದ 7 ಗಂಟೆಯವರೆಗೆ ನಗರದಲ್ಲಿ ವಾಹನ ದಟ್ಟಣೆ ಹೆಚ್ಚಿರುತ್ತದೆ. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಸಂಚಾರ ವ್ಯವಸ್ಥೆ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅತ್ಯಧಿಕ ಭಾರದ ಮರಳು ಗಾಡಿಗಳು ಓಡಾಡುವುದರಿಂದ ರಸ್ತೆ ಹದಗೆಡುತ್ತಿವೆ ಎಂಬ ಮಾಧ್ಯನದವರ ಸಲಹೆ ಮೇಋಎಗೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

ಪೊಲೀಸ್ ಇಲಾಖೆಯ ಸಿಬ್ಬಂದಿ ಸಮಾಜಘಾತುಕ ಶಕ್ತಿಗಳೊಂದಿಗೆ ಶಾಮೀಲಾಗಿರುವುದು ಕಂಡು ಬಂದರೆ ಅಂಥವರ ವಿರುದ್ಧ ಶುಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಗಡಿಪಾರು ಪ್ರಕರಣಕ್ಕೆ ಸಂಭಂಧಿಸಿದಂತೆ ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರಿಸಿದರು. ಡಿಸಿಪಿ ಅಡ್ಡೂರ್ ಶ್ರೀನಿವಾಸಲು ಇದ್ದರು.

ಪಾರ್ಕಿಂಗ್ ವ್ಯವಸ್ಥೆ ಆಟೋ ಚಾಲಕರೊಂದಿಗೆ ಸಭೆ: ಕಲಬುರಗಿ ನಗರದಲ್ಲಿ ಆಟೋ ಚಾಲಕರು ಎಲ್ಲಂದರಲ್ಲಿ ಆಟೋರಿಕ್ಷಾ ನಿಲ್ಲಿಸುತ್ತಾರೆ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂಬ ದೂರುಗಳು ಸಾಕಷ್ಟು ಬಂದಿವೆ. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಧಿಕೃತ ಪಾರ್ಕಿಂಗ್ ಸ್ಥಳದಲ್ಲಿಯೇ ಪಾರ್ಕ್ ಮಡುವಂತೆ ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ಆಟೋ ಚಾಲಕರ ಸಭೆ ಕರೆದು ಅವರೊಂದಿಗೆ ಚರ್ಚಿಸಿ ಅಗತ್ಯ ಸೂಚನೆಗಳನ್ನು ನೀಡಲಾಗುವುದು ಎಂದು ಕಮಿಷನರ್ ಚೇತನ್ ತಿಳಿಸಿದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420