ಕರವೇಗೆ ಮಾನಸಿಂಗ್ ನೇಮಕ

0
32

ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣಕುಮಾರ ಶೆಟ್ಟಿರವರ ಆದೇಶದ ಮೇರೆಗೆ ಉತ್ತರ ಕರ್ನಾಟಕ ಅಧ್ಯಕ್ಷ ಶರಣು ಗದ್ದುಗೆ, ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಷೇಕ ಬಾಲಾಜಿ ನೇತೃತ್ವದಲ್ಲಿ ಕಲಬುರಗಿ ಜಿಲ್ಲಾಧ್ಯಕ್ಷರನ್ನಾಗಿ ಮಾನಸಿಂಗ್ ಆರ್. ಚವ್ಹಾಣ ಅವರನ್ನು ನೇಮಕ ಮಾಡಲಾಗಿದೆ.

ಗುರುತರ ಜವಾಬ್ದಾರಿ ವಹಿಸಿಕೊಂಡು ಕನ್ನಡ ನಾಡು, ನುಡಿ, ಜಲ, ಗಡಿ ಬಗ್ಗೆ ಅನ್ಯಾಯವಾದಾಗ ಧ್ವನಿ ಎತ್ತಬೇಕು. ಕನ್ನಡ, ಕನ್ನಡಿಗ ಮತ್ತು ಕರ್ನಾಟಕದ ಬಗ್ಗೆ ಸದಾ ಕಾರ್ಯಪ್ರವೃತ್ತರಾಗಬೇಕು ಎಂದು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here