ಬಿಸಿ ಬಿಸಿ ಸುದ್ದಿ

ಬಸವರಾಜಪ್ಪ ಅಪ್ಪಾ ವಾಣಿಜ್ಯ ಮಹಾವಿದ್ಯಾಲಯ ಸ್ವಾಮಿ ವಿವೇಕಾನಂದ ಜಯಂತಿ

ಸುರಪುರದ:-ನಗರದ ಶರಣಬಸವೇಶ್ವರ ವಿದ್ಯಾ ವರ್ಧಕ ಸಂಚಾಲಿತ ಕಲಬುರ್ಗಿಯ ಬಸವರಾಜಪ್ಪ ಅಪ್ಪಾ ಪದವಿ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಮತ್ತು ಬಿ.ಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ನಡೆಸಲಾಯಿತು.

ಜಂಟಿ ಕಾರ್ಯದರ್ಶಿಗಳಾದ ದೊಡ್ಡಪ್ಪ ಎಸ್ ನಿಷ್ಠಿ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮzಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀºರಿರಾವ್ ಅಧೋನಿ ಹಿರಿಯ ಸಂಶೋಧಕರು ಮತ್ತು ಇತಿಹಾಸ ತಜ್ಞರು ವಿದ್ಯಾರ್ಥಿಗಳನ್ನು ಉದ್ದೇಶಿಸಿ “ಸುರಪುರ ಸಂಸ್ಥಾನ ಮತ್ತು ನಿಷ್ಠಿ ಮನೆತನದ ಕುರಿತು ಸುಮಧುರ ಗಾನವನ್ನು ಹಾಡುವುದರ ಮೂಲಕ ಪ್ರಾರಂಭಿಸಿ ವಿದ್ಯಾರ್ಥಿಗಳು ವಿವೇಕಾನಂದರ ತತ್ವಗಳನ್ನು ಅಳವಡಿಸಿಕೊಳ್ಳಬೇಕು. ಯುವಕರಲ್ಲಿ ದೈರ್ಯವಿರಬೇಕು ಎಂದರು.

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ವೇದವ್ಯಾಸ ಆಚಾರ್ಯ ಸುರಪುರ ಇಂಗ್ಲೀಷ ಭಾಷಾಂತರ ತಜ್ಞರು ಮಾತನಾಡಿ, ವಿವೇಕಾನಂದರ ಬಾಲ್ಯದ ಜೀವನ, ಶಿಕ್ಷಣ ಮತ್ತು ಸಮಾಜಕ್ಕೆ ಅವರು ನೀಡಿದ ಸಿಂಹವಾಣಿಗಳನ್ನು ವಿದ್ಯಾರ್ಥಿಗಳಿಗೆ ಹೇಳುವುದರ ಮೂಲಕ ಮಕ್ಕಳಿಗೆ ಸುದೀರ್ಘ ಉಪನ್ಯಾಸ ನೀಡಿದರು.

ವೇದಿಕೆಯ ಮೇಲೆ ಉಪಸ್ಥಿತರಿದ್ದ ಪ್ರೋ.ಆದಿನಾಥ ಮಹಾರಾಜ ವಿದ್ಯಾರ್ಥಿಗಳಿಗೆ ಶುಭ ಕೋರಿದರು ಮತ್ತು ಅಧ್ಯಕ್ಷತೆ ವಹಿಸಿದ್ದ ಮೋಹನರಡ್ಡಿ ದೇಸಾಯಿ ಕಿರದಳ್ಳಿ ಮಾತನಾಡಿ ವಿವೇಕಾನಂದರ ವ್ಯಕ್ತಿತ್ವ ಸಾಗರದಂತಿದ್ದ ಜಗತ್ತಿನ ದೃಷ್ಟಿಯಲ್ಲಿ ಗುಲಾಮಗಿರಿಯ ಅಡಿಯಲ್ಲಿ ನರಳುತ್ತಿದ್ದ ಭಾರತವನ್ನು ಜಗತ್ತು ಗುರುತಿಸಿ ತನ್ನಡೆಗೆ ಸೇಳೆಯುವಂತೆ ಮಾಡಿದ್ದು ವೀರ ಸನ್ಯಾಸಿ ವಿವೇಕನಂದರು ಎಂದು ವಿವೇಕಾನಂದರ ಸಿಂಹ ವಾಣಿಗಳಾದ ಈ ಜಗಕ್ಕೆ ಬಂದು ಗರಡಿ ಮನೆ ಅದರಲ್ಲಿ ನಾವೀಗ ಬಲಿಷ್ಠರಾಗಲು ಬಂದಿದ್ದೇವೆ, ಆರೋಗ್ಯವೇ ಭಾಗ್ಯ ಅನಾರೋಗ್ಯವೇ ನರಕ ಎಂದು ಅನೇಕ ವಿವೇಕಾನಂದರ ನುಡಿಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ದಾವೂದು ನಿರೂಪಿಸಿದರು ಮತ್ತು ಚೈತ್ರಾ ವಂದಿಸಿದರು

emedialine

Recent Posts

ಹೊಸ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ ಸರ್ವೆ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲಾಧಿಕಾರಿಗಳಿಂದ ಕ್ರೀಡಾ ವಸತಿ ನಿಲಯಕ್ಕೆ ಭೇಟಿ ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮಂಗಳವಾರ ಕಲಬುರಗಿ ನಗರದ ಚಂದ್ರಶೇಖರ ಪಾಟೀಲ…

4 mins ago

ಫ.ಗು. ಹಳಕಟ್ಟಿ ವಚನ ತವನಿಧಿಯ ಸಂರಕ್ಷಕ: ಬಿ.ಆರ್. ಪಾಟೀಲ

ಕಲಬುರಗಿ: ಮನೆ, ಮಠ, ಜಗುಲಿಗಳಲ್ಲಿ ಪೂಜಿಸುತ್ತಿದ್ದ ತಾಡೋಲೆಗಳನ್ನು ಹೆಕ್ಕಿ ತೆಗೆದ ಫ.ಗು. ಹಳಕಟ್ಟಿಯವರು ವಚನ ಸಾಹಿತ್ಯದ ಪಿತಾಮಹ ಎಂದು ಮುಖ್ಯಮಂತ್ರಿಗಳ…

14 mins ago

ಕೆಬಿಎನ್ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

ಕಲಬುರಗಿ: ಸ್ಥಳೀಯ ಕೆಬಿಎನ್ ವಿವಿಯ ಕೆಬಿಎನ್ ಆಸ್ಪತ್ರೆಯಲ್ಲಿ ವೈದ್ಯರ ದಿನವನ್ನು ಆಚರಿಸಲಾಯಿತು. ರೇಡಿಯೋ ಡಿಗ್ನೋಸಿಸ ವಿಭಾಗದ ಮಾಜಿ ಮುಖಸ್ಥ ಡಾ.…

18 mins ago

ಈಡಿಗ ನಿಗಮ ಅನುದಾನಕ್ಕೆ ವಿಧಾನಸಭೆಯಲ್ಲಿ ಧ್ವನಿಯಾಗುವೆ: ಶಾಸಕ ಗವಿಯಪ್ಪ

ಕಲಬುರಗಿ : ರಾಜ್ಯದ ಈಡಿಗ ಬಿಲ್ಲವ ಸೇರಿದಂತೆ 26 ಪಂಗಡಗಳ ಅಭಿವೃದ್ಧಿಗಾಗಿ ರಾಜ್ಯ ಸರಕಾರವು ಘೋಷಣೆ ಮಾಡಿದ ಬ್ರಹ್ಮಶ್ರೀ ನಾರಾಯಣ…

21 mins ago

ಕಲ್ಯಾಣ ಕರ್ನಾಟಕದ 18 ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಾಣ: ಡಾ. ಅಜುಸಿಂಗ್

ಕಲಬುರಗಿ: ಕಂದಾಯ ಇಲಾಖೆಯ ಸಹಯೋಗದೊಂದಿಗೆ ಕಲ್ಯಾಣ ಕರ್ನಾಟಕ ಭಾಗದ ನೂತನ 18 ತಾಲೂಕು ಕೇಂದ್ರಗಳಲ್ಲಿ ಆಡಳಿತ ವಿಧಾನಸೌಧಗಳನ್ನು ನಿರ್ಮಿಸಲು ತಲಾ…

24 mins ago

ಅಧ್ಯಾತ್ಮದ ಜ್ಞಾನ ಬದುಕಿಗೆ ಬೆಳಕು ನೀಡುತ್ತದೆ

ಕಲಬುರಗಿ:ಮಾನವನ ಬದುಕಿಗೆ ಅಧ್ಯಾತ್ಮದ ಜ್ಞಾನವು ಅರಿವು ಮೂಡಿಸುವುದಲ್ಲದೆ,ಬೆಳಕು ನೀಡುತ್ತದೆ ಎಂದು ಪುರಾಣ ಪಂಡಿತ ಮಲ್ಲಿಕಾರ್ಜುನ ಶಾಸ್ತ್ರಿ ಅಭಿಪ್ರಾಯ ಪಟ್ಟಿದ್ದಾರೆ. ಜಯನಗರ…

4 hours ago