ಬಿಸಿ ಬಿಸಿ ಸುದ್ದಿ

ಕಾಯಕ-ದಾಸೋಹ ಪ್ರಜ್ಞೆ ಬೆಳೆಸಿದ ಶರಣ ಸಿದ್ಧರಾಮೇಶ್ವರರು

ಶಹಾಬಾದ: ಸಿದ್ಧರಾಮೇಶ್ವರರು ಕಾಯಕ, ದಾಸೋಹ ಪ್ರಜ್ಞೆಯನ್ನು ಬೆಳೆಸಿದ ಶರಣ.ಇವರು ನಾಡಿನ ಎಲ್ಲ ಸಮಾಜಕ್ಕೂ ಆದರ್ಶಪ್ರಾಯರು ಎಂದು ತಹಸೀಲ್ದಾರ ಸುರೇಶ ವರ್ಮಾ ಹೇಳಿದರು.

ಅವರು ಶನಿವಾರ ನಗರದ ಬಸವೇಶ್ವರ ವೃತ್ತದಲ್ಲಿ ಭೋವಿ ವಡ್ಡರ್ ಸಮಾಜ ಹಾಗೂ ಭೋವಿ ಯುವಕರ ಸಂಘ ವತಿಯಿಂದ ಆಯೋಜಿಸಲಾದ ಸಿದ್ಧರಾಮೇಶ್ವರರ ಜಯಂತಿಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಹನ್ನೇರಡನೇ ಶತಮಾನದ ಶ್ರೇಷ್ಠ ವಚನಕಾರರಲ್ಲಿ ಸಿದ್ಧರಾಮೇಶ್ವರರು ಒಬ್ಬರು. ಸಿದ್ಧರಾಮೇಶ್ವರರು ಆ ಕಾಲದಲ್ಲಿಯೇ ಜೀವಿಗಳಿಗೆ ಬದುಕಲು ಕೆರೆಕುಂಟೆಗಳನ್ನು ಕಟ್ಟಿಸಿದ ಮಾನವೀಯತೆಯ ಹರಿಕಾರರು. ಅವರು ತಮ್ಮ ಜೀವನದಲ್ಲಿ ನುಡಿದಂತೆ ನಡೆದವರು.ಅವರ ಬದುಕಿದ ರೀತಿ ಹಾಗೂ ನುಡಿದ ಒಂದೊಂದು ಮಾತುಗಳು ನಮಗೆ ದಾರಿದೀಪವಾಗಲಿವೆ. ಅವರ ಒಂದೊಂದು ವಚನಗಳನ್ನು ತಿಳಿದುಕೊಂಡು ನಮ್ಮ ಜೀವನದಲ್ಲಿ ಅಳವಡಿಸಿದ್ದೇ ಆದರೆ ನಮ್ಮ ಜೀವನ ಪಾವನವಾಗುತ್ತದೆ ಎಂದು ಹೇಳಿದರು.

ಭೋವಿ ಸಮಾಜದ ತಾಲೂಕಾಧ್ಯಕ್ಷ ಭೀಮರಾವ ಸಾಳುಂಕೆ ಮಾತನಾಡಿ, ಕೆರೆ ಕುಂಟೆಗಳನ್ನು ಕಟ್ಟುವ ಮೂಲಕ ಪ್ರಕೃತಿಯಲ್ಲಿನ ಪಶು,ಪಕ್ಷಿಗಳಿಗೆ ದಾಹ ನೀಗಿಸುವ ಕಾಯಕವನ್ನು ಮಾಡಿದವರು ಸಿದ್ಧರಾಮೇಶ್ವರ ಶರಣರೇ ಮೊದಲಿಗರು.ಇಂದು ಭೋವಿ ಸಮಾಜದ ಬಂಧುಗಳಲ್ಲಿ ಜಾಗೃತಿ ಮೂಡುತ್ತಿದೆ.ಸಮುದಾಯದಲ್ಲಿ ಸಿದ್ಧರಾಮೇಶ್ವರ ಕುರಿತು ಚಿಂತನೆ ನಡೆಯುತ್ತಿದೆ.ಅವರ ತತ್ವಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಮಾಜಿ ಸಚಿವ ರೇವುನಾಯಕ ಬೆಳಮಗಿ ಮಾತನಾಡಿ, ಕಾಯಕಕ್ಕಿಂತ ಮಿಗಿಲಾದುದು ಯಾವುದು ಇಲ್ಲ. ವಿಶ್ವದ ಎಲ್ಲಾ ಜೀವರಾಶಿಗಳಿಗೆ ಹೊಟ್ಟೆ ತುಂಬಿಸುವ ಕಾರ್ಯ ಕಾಯಕದಿಂದ ಮಾತ್ರ ಸಾಧ್ಯ. ಕಾಯಕ ಸತ್ಯ ಮತ್ತು ಶುದ್ಧವಾಗಿರಬೇಕು.ಯಾವುದೇ ಅನಾಚಾರದ ಮೂಲಕ ಗಳಿಸುವ ಹಣ ಸತ್ಪಾತ್ರಕ್ಕೆ ಸಲ್ಲುವುದಿಲ್ಲ. ಪ್ರಾಮಾಣಿಕತೆ ಹಾಗೂ ನಿಷ್ಠೆಯಿಂದ ಕಾಯಕ ಮಾಡುವ ಸಂಸ್ಕøತಿಯನ್ನು ಬೆಳೆಸಿದವರು ಶರಣರು ಎಂದು ಹೇಳಿದರು.

ಉದ್ಯಮಿ ನರೇಂದ್ರ ವರ್ಮಾ ಹಾಗೂ ನಗರ ಪೊಲೀಸ್ ಠಾಣೆಯ ಪಿಐ ರಾಘವೇಂದ್ರ ಮಾತನಾಡಿ, ಸ್ವಂತಿಕೆಯಿಂದ ಯೋಚಿಸಿ ಸ್ವಾಭಿಮಾನದ ಬದುಕನ್ನು ಬದುಕಬೇಕೆಂಬ ಅಂಶವನ್ನು ಸಿದ್ಧರಾಮೇಶ್ವರರು ತಮ್ಮ ಸರಳ ಸುಲಲಿತ ವಚನಗಳಲ್ಲಿ ತಿಳಿಸಿದ್ದಾರೆ. ಜಾತೀಯತೆಯನ್ನು ಮೀರಿದ ವಸ್ತು ನಿಷ್ಠತೆ, ಸತ್ಯ ನಿಷ್ಠತೆ ಬದುಕು, ನಿಜವಾದ ಬದುಕು ಎಂಬುದಾಗಿ ಪ್ರತಿಪಾದಿಸಿದ ದಿಟ್ಟ ಮಾನವತವಾದಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಭೋವಿ ಸಮಾಜದ ಯುವಕರು ಹಾಗೂ ಮುಖಂಡರು ನೂರಾರು ಸಂಖ್ಯೆಯಲ್ಲಿ ಹಾಜರಿದ್ದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

41 mins ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

47 mins ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

50 mins ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

55 mins ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

58 mins ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

1 hour ago