ಶಹಾಬಾದ:ಸಿದ್ಧರಾಮೇಶ್ವರರು ಕಾಯಕ, ದಾಸೋಹ ಪ್ರಜ್ಞೆಯನ್ನು ಬೆಳೆಸಿದ ಶರಣರು ನಾಡಿನ ಎಲ್ಲ ಸಮಾಜಕ್ಕೂ ಆದರ್ಶಪ್ರಾಯರು ಎಂದು ನಗರಸಭೆಯ ವ್ಯವಸ್ಥಾಪಕ ಶರಣಗೌಡ ಪಾಟೀಲ ಹೇಳಿದರು.
ಅವರು ರವಿವಾರ ನಗರಸಭೆಯಲ್ಲಿ ಆಯೋಜಿಸಲಾದ ಸಿದ್ಧರಾಮೇಶ್ವರರ ಜಯಂತಿಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಕಾಯಕಕ್ಕಿಂತ ಮಿಗಿಲಾದುದು ಯಾವುದು ಇಲ್ಲ. ವಿಶ್ವದ ಎಲ್ಲಾ ಜೀವರಾಶಿಗಳಿಗೆ ಹೊಟ್ಟೆ ತುಂಬಿಸುವ ಕಾರ್ಯ ಕಾಯಕದಿಂದ ಮಾತ್ರ ಸಾಧ್ಯ. ಕಾಯಕ ಸತ್ಯ ಮತ್ತು ಶುದ್ಧವಾಗಿರಬೇಕು.ಯಾವುದೇ ಅನಾಚಾರದ ಮೂಲಕ ಗಳಿಸುವ ಹಣ ಸತ್ಪಾತ್ರಕ್ಕೆ ಸಲ್ಲುವುದಿಲ್ಲ. ಪ್ರಾಮಾಣಿಕತೆ ಹಾಗೂ ನಿಷ್ಠೆಯಿಂದ ಕಾಯಕ ಮಾಡುವ ಸಂಸ್ಕøತಿಯನ್ನು ಬೆಳೆಸಿದವರು ಶರಣರು ಎಂದು ಹೇಳಿದರು.
ಕನಕಪ್ಪ ದಂಡಗುಲಕರ್ ಮಾತನಾಡಿ, ಸಿದ್ಧರಾಮೇಶ್ವರ ಅಂತಹ ಮಹಾ ಶರಣರ ಜಯಂತಿ ಆಚರಿಸುವುದು ಸಂತೋಷದ ವಿಷಯ.ಆದರೆ ಇದು ಕೇವಲ ವರ್ಷಕ್ಕೊಮ್ಮೆ ಎಂಬಂತೆ ಕಾಟಾಚಾರಕ್ಕಾಗಿ ಆಚರಿಸದೇ, ಅವರ ನಿಜವಾದ ತತ್ವಗಳನ್ನು ಅಳವಡಿಸಿಕೊಳ್ಳುವ ಮೂಲಕ ಶರಣರು ಕಂಡಂತಹ ಕಲ್ಯಾಣ ರಾಜ್ಯವನ್ನು ಮತ್ತೆ ಮರು ಸ್ಥಾಪಿಸಬಹುದು ಎಂದು ಹೇಳಿದರು.
ಭೋವಿ ವಡ್ಡರ ಸಮಾಜ ಸೇವಾ ಸಂಘದ ತಾಲೂಕಾಧ್ಯಕ್ಷರಾದ ಕಳ್ಳೋಳ್ಳಿ ಬಿ. ಕುಸಾಳೆ,ನಗರ ಅಧ್ಯಕ್ಷರಾದ ಭೀಮರಾವ ಸಾಳೂಂಕೆ,ನಾಗರಾಜ ಮೇಲಗಿರಿ,ದೇವದಾಸ ಜಾಧವ,ಸಿದ್ರಾಮ ಕುಸಾಳೆ,ಶಂಕರ ಕುಸಾಳೆ,ನಗರಸಭೆ ಸದಸ್ಯರಾದ ಲಕ್ಷ್ಮೀಬಾಯಿ ಕುಸಾಳೆ,ಗೋವಿಂದಸ್ವಾಮಿ ಕುಸಾಳೆ, ಅಭೀμÉಕ ದೇವಕರ,ಉಮೇಶ ನಿಂಬಾಳಕರ,ದತ್ತು ಕುಸಾಳೆ,ಹಾಗೂ ಸಮಾಜದ ಬಂದುಗಳು,ನಗರಸಭೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…