ಶಹಾಬಾದ:ಹನ್ನೇರಡನೇ ಶತಮಾನದ ಶ್ರೇಷ್ಠ ವಚನಕಾರರಲ್ಲಿ ಸಿದ್ಧರಾಮೇಶ್ವರರು ಒಬ್ಬರು ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹೇಳಿದರು.
ಅವರು ರವಿವಾರ ನಗರದ ವಡ್ಡರ್ ಸಂಘದಲ್ಲಿ ಭೋವಿ ಸಮಾಜದ ವತಿಯಿಂದ ಆಯೋಜಿಸಲಾದ ಸಿದ್ಧರಾಮೇಶ್ವರರ ಜಯಂತಿಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಸಿದ್ಧರಾಮೇಶ್ವರರು ಆ ಕಾಲದಲ್ಲಿಯೇ ಜೀವಿಗಳಿಗೆ ಬದುಕಲು ಕೆರೆಕುಂಟೆಗಳನ್ನು ಕಟ್ಟಿಸಿದ ಮಾನವೀಯತೆಯ ಹರಿಕಾರರು. ಅವರು ತಮ್ಮ ಜೀವನದಲ್ಲಿ ನುಡಿದಂತೆ ನಡೆದವರು.ಅವರ ಬದುಕಿದ ರೀತಿ ಹಾಗೂ ನುಡಿದ ಒಂದೊಂದು ಮಾತುಗಳು ನಮಗೆ ದಾರಿದೀಪವಾಗಲಿವೆ. ಅವರ ಒಂದೊಂದು ವಚನಗಳನ್ನು ತಿಳಿದುಕೊಂಡು ನಮ್ಮ ಜೀವನದಲ್ಲಿ ಅಳವಡಿಸಿದ್ದೇ ಆದರೆ ನಮ್ಮ ಜೀವನ ಪಾವನವಾಗುತ್ತದೆ ಎಂದು ಹೇಳಿದರು.
ಭೋವಿ ಸಮಾಜದÀ ನಗರಾಧ್ಯಕ್ಷ ಭೀಮರಾವ ಸಾಳುಂಕೆ ಮಾತನಾಡಿ, ಸ್ವಂತಿಕೆಯಿಂದ ಯೋಚಿಸಿ ಸ್ವಾಭಿಮಾನದ ಬದುಕನ್ನು ಬದುಕಬೇಕೆಂಬ ಅಂಶವನ್ನು ಸಿದ್ಧರಾಮೇಶ್ವರರು ತಮ್ಮ ಸರಳ ಸುಲಲಿತ ವಚನಗಳಲ್ಲಿ ತಿಳಿಸಿದ್ದಾರೆ.
ಜಾತೀಯತೆಯನ್ನು ಮೀರಿದ ವಸ್ತು ನಿಷ್ಠತೆ, ಸತ್ಯ ನಿಷ್ಠತೆ ಬದುಕು, ನಿಜವಾದ ಬದುಕು ಎಂಬುದಾಗಿ ಪ್ರತಿಪಾದಿಸಿದ ದಿಟ್ಟ ಮಾನವತವಾದಿ ಎಂದು ಹೇಳಿದರು.
ಶಾಸಕ ಬಸವರಾಜ ಮತ್ತಿಮಡು ಶ್ರೀ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪೂಜೆ ನೇರವೆರಿಸಿದರು. ಮಂಡಲ ಅಧ್ಯಕ್ಷರಾದ ಅಣವೀರ ಇಂಗಿನಶೆಟ್ಟಿ,ಕನಕಪ್ಪ ದಂಡಗುಲಕರ್, ದೇವದಾಸ ಜಾಧವ,ಸಿದ್ರಾಮ ಕುಸಾಳೆ,ರಾಮು ಕುಸಾಳೆ, ತಿಮ್ಮಣ್ಣ ಕುರ್ಡೆಕರ,ರವಿ ರಾಠೋಡ,ಗೋವಿಂದಸ್ವಾಮಿ ಕುಸಾಳೆ, ಅಭೀμÉಕ ದೇವಕರ,ಉಮೇಶ ನಿಂಬಾಳಕರ,ದತ್ತು ಕುಸಾಳೆ,ದಿನೇಶ ಕುಸಾಳೆ,ಅಮು ಮಾನೆ,ಸುರೇಶ ದಂಡಗುಲಕರ,ಶಿವು,ಬಾಬು ಪ್ರಸನ್ನ ಕುರ್ಡೆಕರ,ಶ್ಯಾಮ ದೇವಕರ,ದತ್ತ ಫಂಡ, ಇತ್ತರರು ಉಪಸ್ಥಿತರಿದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…