ಕತ್ತಲೆಯಿಂದ ಬೆಳೆಕಿನಡೆಗೆ ಸಾಗುವುದೇ ಸಂಕ್ರಾಂತಿ

ಮೂರು ಪ್ರಕಾರಗಳಲ್ಲಿ ಸಂಗೀತ ಕಾರ್ಯಕ್ರಮ ನಡೆಯುತ್ತವೆ ಎಂದು ಹೇಳಿದ ಡಾ. ನರಸಿಂಹಲು ವಡವಾಟಿಯವರು ಒಂದು ವ್ಯಾವಹಾರಿಕ ಸಂಗೀತ ಕಾರ್ಯಕ್ರಮ, ಇನ್ನೊಂದು ಪ್ರೀತಿಪೂರ್ವಕ ಸಂಗೀತ ಕಾರ್ಯಕ್ರಮ, ಮತ್ತೊಂದು ವೃತ್ತಿಪೂರ್ವಕ ಸಂಗೀತ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಗಾಯನ ಮತ್ತು ಕ್ಲಾರಿನೆಟ್ ವಾದನ ನಡೆಸಿ ಜನರು ಸಂಗೀತದ ನಾದದಲ್ಲಿ ಮುಳುಗೇಳುವಂತೆ ಮಾಡಿದರು. ಡಾ. ರೇವಯ್ಯ ವಸ್ತ್ರದಮಠ ಹರ್ಮೋನಿಯಂ ನುಡಿಸಿದರು. ಗೋಪಾಲ ಗುಡಿಬಂಡೆ ತಬಲಾ ಸಾಥ್ ನೀಡಿದರು.

ಕಲಬುರಗಿ: ವ್ಯಾಪಕ ಕತ್ತಲೆಯ ಬಂಧನದಿಂದ ಪ್ರಖರ ಬೆಳಕಿನ ಕಡೆಗೆ ನಡೆಯುವುದೇ ಸಂಕ್ರಾಂತಿ. ಮಾನವೀಯತೆ ನೆಲೆಗಳಲ್ಲಿ ನಿಸ್ವಾರ್ಥದ ಅಹಂಕಾರದಲ್ಲಿ ಕಳೆದು ಹೋಗಿರುವ ನಾವುಗಳು ಬಸವ ಪ್ರಜ್ಞೆ ಕಡೆ ಮುನ್ನಡೆಯಬೇಕು ಎಂದು ಬೆಂಗಳೂರು ಬೇಲಿಮಠದ ಶಿವರುದ್ರ ಮಹಾಸ್ವಾಮಿಗಳು ತಿಳಿಸಿದರು.

ಕಲಬುರಗಿ ಬಸವ ಸಮಿತಿ, ಡಾ. ಬಿ.ಡಿ. ಜತ್ತಿ ವಚನ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ಆಶ್ರಯದಲ್ಲಿ ಜಯನಗರದ ಅನುಭವ ಮಂಟಪದಲ್ಲಿ ಲಿಂ. ಸೋವiನಥಪ್ಪ ಬಸವಣ್ಣಪ್ಪ ಖೂಬಾ ಸ್ಮರಣಾರ್ಥ 738ನೇ ಅರಿವಿನ ಹಾಗೂ ವಚನ ಸಂಕ್ರಾಂತಿ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಸ್ವಾರ್ಥದ ಕತ್ತಲೆಯಿಂದ ನಿಸ್ವಾರ್ಥದ ಬೆಳಕಿನೆಡಗೆ ಸಾಗುವುದೇ ನಿಜವಾದ ಸಂಕ್ರಾಂತಿಯಾಗಿದ್ದು, ಮನೆಯಲ್ಲಿ ಹಬ್ಬ ಆಚರಿಸಿದಂತೆ ಮನದಾಳದ ನೆಲೆಸಿರುವ ಕತ್ತಲೆಯನ್ನೋಡಿಸುವ ಕೆಲಸ ಸದಾ ನಡೆಯುತ್ತಿರಬೇಕು ಎಂದು ಆಶಿಸಿದರು.

ಇದೇವೇಳೆಯಲ್ಲಿ ಕ್ಲ್ಲಾರಿನೆಟ್ ವಾದಕ ಪಂಡಿತ ಡಾ. ನರಸಿಂಹಲು ವಡವಾಟಿ ಅವರಿಗೆ ವಚನ ಸಂಗೀತ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವಡವಾಟಿ, ಇದೊಂದು ಸಾರ್ಥಕ ಸಂಗೀತ ಸೇವೆ ಎಂದು ಸಂತೋಷ ವ್ಯಕ್ತಪಡಿಸಿದರು. ಬಸವ ಸಮಿತಿ ಜಿಲ್ಲಾಧ್ಯಕ್ಷೆ ಡಾ. ವಿಲಾಸವತಿ ಖೂಬಾ ಅಧ್ಯಕ್ಷತೆ ವಹಿಸಿದ್ದರು. ಡಾ. ಜಯಶ್ರೀ ದಂಡೆ ಮಾತನಾಡಿದರು.

ತಮಿಳುನಡಿನ ನಾಗಸಂದ್ರದ ಸಿದ್ಧಲಿಂಗ ಸ್ವಮೀಜಿ ಮಾತನಾಡಿದರು. ಡಾ. ಬಿ.ಡಿ. ಜತ್ತಿ ವಚನ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ನಿರ್ದೇಶಕ ಡಾ. ವೀರಣ್ಣ ದಂಡೆ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಉದ್ಯಮಿ ರಾಜೇಂದ್ರ ಖೂಬಾ ಉಪಸ್ಥಿತರಿದ್ದರು. ಎಚ್.ಕೆ. ಉದ್ದಂಡಯ್ಯ ನಿರೂಪಿಸಿ ವಂದಿಸಿದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

11 mins ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

3 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

8 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

8 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

10 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420