ವಿಜ್ಞಾನವನ್ನು ತಪಸ್ಸಿನಂತೆ ಅಧ್ಯಯನ ಮಾಡಿ : ಡಾ. ಪಿ. ರಘೋತ್ತಮರಾವ್

ಕಲಬುರಗಿ: ಜಗತ್ತಿನ ಆಗುಹೋಗುಗಳ ಜ್ಞಾನವನ್ನುಕ್ಷಣಮಾತ್ರದಲ್ಲೇಒದಗಿಸುವ ಸೌಕರ್ಯಇಂದುಜಗತ್ತಿಗೆದೊರೆತದ್ದುವಿಜ್ಞಾನದ ಪ್ರಗತಿಯಿಂದ. ವಿಜ್ಞಾನದ ವಿಸ್ಮಯಕಾರಿಕುತೂಹಲಕರ ಸಂಗತಿಗಳನ್ನು ತಪಸ್ಸಿನಂತೆ ಅಧ್ಯಯನ ಮಾಡಿದಾಗ ಮಾತ್ರ ಭವಿಷ್ಯದ ವಿಜ್ಞಾನಿಗಳಾಗಲು ಸಾಧ್ಯಎಂದುರಕ್ಷಣಾ ಸಂಶೋಧನಾ ಮತ್ತುಅಭಿವೃದ್ಧಿ ಸಂಸ್ಥೆಡಿ.ಆರ್.ಡಿ.ಒ.ದ ನಿವೃತ್ತ ವಿಜ್ಞಾನಿ ಡಾ. ಪಿ. ರಘೋತ್ತಮರಾವ್ ಅಭಿಪ್ರಾಯಪಟ್ಟರು.

ಇಂದು ನಗರದ ಹೊರವಲಯದ ಕಣದಾಳದ ಶ್ರೀಗುರು ವಿದ್ಯಾಪೀಠದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ವತಿಯಿಂದ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಅಖಿಲ ಕರ್ನಾಟಕ 30ನೇ ರಾಷ್ಟ್ರೀಯಮಕ್ಕಳ ವಿಜ್ಞಾನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾರಂಭದಲ್ಲಿ ಮುಖ್ಯಅತಿಥಿಯಾಗಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಷಿ ಮಾತನಾಡಿಜೀವ ಪರಿಸರಅಧ್ಯಯನ ಇಂದಿನ ಅನಿವಾರ್ಯತೆಯಾಗಿದೆ.ಪರಿಸರ ಸಮತೋಲನತೆಯಿಂದಕೂಡಿದಾಗ ಮಾತ್ರ ಸುಸ್ಥಿರ ಅಭಿವೃದ್ದಿ ಸಾಧ್ಯ.ಇಲ್ಲಿ ಭಾಗವಹಿಸಿರುವ ಬಾಲ ವಿಜ್ಞಾನಿಗಳು ಇದೇ ವಿಷಯದಕುರಿತುಯೋಜನೆ ತಯಾರಿಸಿರುವುದು ಸಂತೋಷದ ಸಂಗತಿ ಎಂದರು.

ಇನ್ನೋರ್ವ ಅತಿಥಿ ಶರಣಮ್ಮ ದಿಗ್ಗಾವಿ ಶಿಕ್ಷಣ ಸಂಸ್ಥೆಯಮುಖ್ಯಸ್ಥ ಬಸವರಾಜ ದಿಗ್ಗಾವಿ ಮಾತನಾಡಿ ಇಲ್ಲಿಂದ ಆಯ್ಕೆ ಗೊಂಡುರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನಗೊಳಿಸುವ ಕರ್ನಾಟಕದ ಬಾಲವಿಜ್ಞಾನಿಗೆ ರೂ.1.00 ಲಕ್ಷ ನಗದು ಬಹುಮಾನ ನೀಡುವುದರೊಂದಿಗೆ ನೂತನ ಸಭಾಗೃಹ ಆ ಬಾಲವಿಜ್ಞಾನಿ ಕೈಯಿಂದಲೇ ಉದ್ಘಾಟಿಸಿ ಅವರನ್ನುಅವರ ಮಾರ್ಗದರ್ಶಿ ಶಿಕ್ಷಕರನ್ನು ಸನ್ಮಾನಿಸುವುದಾಗಿ ಘೋಷಿಸಿದರು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಮ್ ವೈ ಪಾಟೀಲ ಮಾತನಾಡಿ ಮೂಢನಂಬಿಕೆಗಳನ್ನು ತ್ಯಜಿಸಿ ವೈಜ್ಞಾನಿಕ ಮನೋಭಾವ ಹೊಂದುವುದು ಪ್ರತಿಯೊಬ್ಬ ನಾಗರಿಕನಜವಾಬ್ದಾರಿಯಾಗಿದೆ.ಇಂದಿನ ವಿದ್ಯಾರ್ಥಿಗಳು ಬಾಲ್ಯದಿಂಲೇ ವೈಜ್ಞಾನಿಕ ತಳಹದಿಯ ಮೇಲೆ ಸಮಾಜಕಟ್ಟುವುದನ್ನು ರೂಢಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ವಿಜ್ಞಾನ ಪರಿಷತ್ತಿನ ಅಧ್ಯಕ್ಷ ಗಿರೀಶ ಕಡ್ಲೇವಾಡ ಎಳೆಯ ವಯಸ್ಸಿನಲ್ಲಿಯೇ ರಾಜ್ಯದ ವಿದ್ಯಾರ್ಥಿಗಳಲ್ಲಿ ಸಂಶೋಧನಾ ಪ್ರವೃತ್ತಿ ಬೆಳೆಸುವ ಹಾಗು ಅವರನ್ನು ಭವಿಷ್ಯದ ವಿಜ್ಞಾನಿಗಳನ್ನಾಗಿ ರೂಪಿಸುವ ಉದ್ದೇಶದಿಂದ ವಿಜ್ಞಾನ ಪರಿಷತ್ತು ಮಕ್ಕಳ ವಿಜ್ಞಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಇಲ್ಲಿ ಆಯ್ಕೆಗೊಳ್ಳುವ ಬಾಲವಿಜ್ಞಾನಿಗಳು ರಾಷ್ಟ್ರಮಟ್ಟದಲ್ಲಿಕರ್ನಾಟಕದಕೀರ್ತಿತರುವಂತವರಾಗಲಿ ಎಂದರು.

ವೇದಿಕೆಯ ಮೇಲೆ ವಿಧಾನ ಪರಿಷತ್ತಿನ ಸದಸ್ಯಡಾ. ಬಿ. ಜಿ. ಪಾಟೀಲ, ರಾಜ್ಯ ವಿಜ್ಞಾನ ಪರಿಷತ್ತಿನಉಪಾಧ್ಯಕ್ಷರಾದ ಬಿ. ದೊಡ್ಡಬಸಪ್ಪ, ಸಹಕಾರ್ಯದರ್ಶಿ ಬಿ. ಎನ್. ಶ್ರೀನಾಥ್, ಖಜಾಂಚಿಎಚ್.ಎಸ್.ಟಿ. ಸ್ವಾಮಿ,ಕಾರ್ಯಕಾರಿ ಸಮಿತಿ ಸದಸ್ಯರಾದಅಣದೂರು ಮಹಾರುದ್ರಪ್ಪ, ಜಗನಾಥ ಹಲಮಡಗಿ, ಬಸವಲಿಂಗಪ್ಪ ಮಲ್ಹಾರ, ಮೀನಾಕ್ಷಿ ಕುಡಸೋಮಣ್ಣವರ ಉಪಸ್ಥಿತರಿದ್ದರು. ರಾಜ್ಯ ಸಂಯೋಜಕಡಾ. ಕುಂಟೆಪ್ಪಗೌರಿಪೂರ ಸ್ವಾಗತಿಸಿದರು. ಉಪಾಧ್ಯಕ್ಷ ಎಚ್.ಜಿ. ಹುದ್ದಾರ ವಂದಿಸಿದರು. ಸಮಾವೇಶದಲಿ ್ಲರಾಜ್ಯದ 30 ಜಿಲ್ಲೆಗಳಿಂದ ಆಯ್ದ 300 ಯೋಜನೆಗಳ 600 ಬಾಲ ವಿಜ್ಞಾನಿಗಳು ಅವರ ಮಾರ್ಗದರ್ಶಿ ಶಿಕ್ಷಕರೊಂದಿಗೆ ಭಾಗವಹಿಸಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

8 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

11 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

16 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

16 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

18 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420