ಸಗರನಾಡಿಗೆ ನರೇಂದ್ರ ಮೋದಿ ಆಗಮಿಸುತ್ತಿರುವುದು ಹೆಮ್ಮೆಯ ಸಂಗತಿ: ಡಾ. ರಾಜಾ ಕೃಷ್ಣಪ್ಪ ನಾಯಕ

ಸುರಪುರ: 1857ರ ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಸೇನಾನಿ ನಾಲ್ವಡಿ ರಾಜಾ ವೆಂಕಟಪ್ಪ ನಾಯಕರವರ ಕಂಚಿನ ಮೂರ್ತಿ ನಿರ್ಮಾಣದ ಅಡಿಗಲ್ಲು ಕಾರ್ಯಕ್ರಮಕ್ಕೆ ನಮ್ಮ ಸಗರ ನಾಡಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿರುವುದು ಸಂತಸದ ಸಂಗತಿಯಾಗಿದ್ದು ಸಂಸ್ಥಾನದ ವತಿಯಿಂದ ಅವರನ್ನು ಹಾರ್ದಿಕವಾಗಿ ಸ್ವಾಗತಿಸುವುದಾಗಿ ಅರಸು ವಂಶಸ್ಥ ಡಾ:ರಾಜಾ ಕೃಷ್ಣಪ್ಪ ನಾಯಕ ಹೇಳಿದರು.

ನಗರದ ದರಬಾರ ಹಾಲ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ,ನಾರಾಯಣಪೂರ ಜಲಾಶಯದ ಕಾಲುವೆಗಳ ಸ್ಕ್ವಾಡಾ ಗೇಟ್ ಲೋಕಾರ್ಪಣೆ, ಅಮೃತ ಜಲಾಧಾರೆ ಹಾಗೂ ಜಲಜೀವನ ಮಿಷನ್ ಯೋಜನೆ ಅಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗಾಗಿ ಆಗಮಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ.

ಇಂದು ಸ್ಕಾಡಾ ಗೇಟ್‍ಗಳ ಉದ್ಘಾಟನೆಗೆ ಆಗಮಿಸುತ್ತಿರುವ ನಾರಾಯಣಪುರ ಜಲಾಶಯಕ್ಕೆ ಕ್ರಿ.ಶ. 1715 ರಲ್ಲಿ ರಾಜಾ ಪೀತಾಂಬರಿ ಬಹರಿ ಪಿಡ್ಡನಾಯಕ ಅವರ ಆಡಳಿತಾವಧಿಯಲ್ಲಿ ಶಂಕುಸ್ಥಾಪನೆ ಮಾಡಲಾಗಿತ್ತು ಆದರೆ ರಾಜಕೀಯ ಕಾರಣಾಂತರಗಳಿಂದ ನಿರ್ಮಾಣ ಕಾರ್ಯವು ವಿಳಂಬವಾಯಿತು. ನಂತರ 1964 ರಲ್ಲಿ ಅಂದಿನ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರೀ ಅವರು ನಾರಾಯಣಪುರ ಜಲಾಶಯಕ್ಕೆ ಅಡಿಗಲ್ಲು ನೆರವೇರಿಸಿದ ಸಮಾರಂಭದಲ್ಲಿ ಕ್ಷೇತ್ರದ ಅಂದಿನ ಶಾಸಕರಾಗಿದ್ದ ನಮ್ಮ ತಾತಾನವರಾದ ರಾಜಾ ಪಿಡ್ಡ ನಾಯಕ ಅಧ್ಯಕ್ಷತೆ ವಹಿಸಿದ್ದರು.

ಸುಮಾರು 12 ವರ್ಷ ಜಲಾಶಯ ನಿರ್ಮಾಣ ಕಾಮಗಾರಿ ನಡೆದು ಪೂರ್ಣಗೊಳ್ಳುವವರೆಗೆ ಅವರೇ ಶಾಸಕರಾಗಿದ್ದದ್ದು ಹೆಮ್ಮೆಯ ವಿಷಯ ಎಂದ ಅವರು, ಸುಮಾರು 300ವರ್ಷಗಳ ಹಿಂದೆಯೇ ಸುರಪುರ ಸಂಸ್ಥಾನದ ಅರಸರ ಆಳ್ವಿಕೆಯಲ್ಲಿ ಜಲಾಶಯ ನಿರ್ಮಾಣದ ಯೋಜನೆಯ ರೂಪುರೇಷೆಗಳು ಪ್ರಾರಂಭಗೊಂಡಿದ್ದು ಸ್ವಾತಂತ್ರ್ಯ ನಂತರ ಸಂಸ್ಥಾನದ ವಂಶಸ್ಥರು ಶಾಸಕರಾಗಿದ್ದಾಗ ನಿರ್ಮಾಣ ಕೆಲಸ ಆರಂಭಗೊಂಡು ನಂತರ ಯೋಜನೆ ಪೂರ್ಣಗೊಂಡಿತು. ಈ ಡ್ಯಾಂ ನಿರ್ಮಾಣದಿಂದ ಸಗರನಾಡಿಗೆ ನೀರಾವರಿ ಭಾಗ್ಯ ದೊರೆಯಿತು ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿರವರ ಅಮೃತಹಸ್ತದಿಂದ ನಾರಾಯಣಪೂರ ಜಲಾಶಯದ ಮುಂದುಗಡೆ ಸ್ವಾತಂತ್ರ್ಯ ಸೇನಾನಿ ನಾಲ್ವಡಿ ರಾಜಾ ವೆಂಕಟಪ್ಪ ನಾಯಕರ ಅಶ್ವಾರೂಢ ಪ್ರತಿಮೆಗೆ ಶಂಕುಸ್ಥಾಪನೆಯನ್ನು ನೆರವೇರಿಸುತ್ತಿರುವುದು ಸಗರನಾಡಿನ ಸೌಭಾಗ್ಯ ಎಂದು ಹರ್ಷ ವ್ಯಕ್ತಪಡಿಸಿದರು.ಅಲ್ಲದೆ ಪ್ರಧಾನ ಮಂತ್ರಿಗಳನ್ನು ಕರೆದುಕೊಂಡು ಬರುತ್ತಿರುವ ಶಾಸಕರಾದ ರಾಜುಗೌಡ ಅವರಿಗೆ ಅಭಿನಂಧನೆ ಸಲ್ಲಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ರಾಜಾ ಲಕ್ಷ್ಮೀನಾರಾಯಣ ನಾಯಕ, ವಿಜಯ ರಾಘವನ್, ಶ್ರೀಹರಿರಾವ ಆದೋನಿ, ಶಿವಕುಮಾರ ಮಸ್ಕಿ, ಜಾವೇದ ಹುಸೇನ್ ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

15 mins ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

3 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

3 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

3 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

3 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420