ಹೊನ್ನ ಕಿರಣಗಿಯಲ್ಲಿ ನವಲಗುಂದ ನಾಗಲಿಂಗನ ಪುರಾಣ ಪ್ರಾರಂಭ

ಫರತಾಬಾದ: ಕಲಬುರಗಿ ತಾಲೂಕಿನ ಹೊನ್ನ ಕಿರಣಗಿ ಗ್ರಾಮದ ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ ಲಿಂಗೈಕ್ಯ ಶ್ರೀ ಕರಿಬಸವೇಶ್ವರ ಶಿವಾಚಾರ್ಯರ ಏಳನೇ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀ ನವಲಗುಂದ ನಾಗಲಿಂಗ ಶಿವಯೋಗಿಗಳ ಪುರಾಣ ಪ್ರಾರಂಭವಾಯಿತು.

ಇಂದಿನಿಂದ 11ದಿನಗಳ ಕಾಲ ಜನವರಿ 26ರವರೆಗೆ ಜರುಗಲಿದೆ. 26ರಂದು ಸಾಯಂಕಾಲ 6ಗಂಟೆಗೆ ರಥೋತ್ಸವ ಜರುಗಲಿದೆ. ಪುರಾಣ ಪ್ರಾರಂಭವನ್ನು ತೊನಸನಹಳ್ಳಿ ಶ್ರೀಗಳಾದ ಶ್ರೀ.ಷ.ಬ್ರ.ರೇವಣಸಿದ್ದ ಚರಂತೇಶ್ವರ ಶಿವಾಚಾರ್ಯರು ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು. ನೇತೃತ್ವವನ್ನು ರಾಚೋಟೇಶ್ವರ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ.ಷ.ಬ್ರ.ಚಂದ್ರಗುಂಡ ಶಿವಾಚಾರ್ಯರು ವಹಿಸಿ ಸಮಾಜದಲ್ಲಿ ಶಿಕ್ಷಣ ಮತ್ತು ಸಂಸ್ಕಾರ ಕೊಡುವಂತಹ ಕೇಂದ್ರಗಳು ಮಠಗಳು ಆಗಿರುತ್ತವೆ, ಶರಣರ ಮಹತ್ವವನ್ನು ತಿಳಿದುಕೊಳ್ಳಬೇಕು ಅವರು ಹಾಕಿಕೊಟ್ಟ ದಾರಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ವೇದಿಕೆ ಮೇಲೆ ಕನ್ನಡ ಸಾಹಿತ್ಯ ಪರಿಷತ್ ಕಲಬುರಗಿ ತಾಲೂಕು ಅಧ್ಯಕ್ಷರಾದ ಗುರುಬಸಪ್ಪ ಸಜ್ಜನಶೆಟ್ಟಿ ಮಾತನಾಡಿ ನಮ್ಮ ಮಠವು ಗ್ರಾಮದ ಜನರ ಏಳಿಗೆಗಾಗಿ ಕಾರ್ಯಕ್ರಮಗಳು ಹಮ್ಮಿಕೊಳ್ಳುತ್ತಿದ್ದಾರೆ. ಜನರಿಗೆ ಸಂಸ್ಕಾರದ ಜೊತೆಗೆ ಶಿಕ್ಷಣವೂ ನೀಡುತ್ತಿದ್ದಾರೆ ಎಂದು ಹೇಳಿದರು.

ವಿಶ್ವನಾಥ ವಾರಕರ, ಶಾಂತಯ್ಯ ಡೆಂಗಿಮಠ, ಜಗನ್ಣ ಆಲಮೇಲಕರ್ ಇದ್ದರು. ಪ್ರವಚನಕಾರರಾದ ಪಂಡಿತ ರತ್ನ ಸಿದ್ದರಾಮ ಸ್ವಾಮಿಗಳು, ವಿಶ್ವರಾಧ್ಯ ಗೃಹಸ್ಥಾಶ್ರಮ ಬ್ಯಾಡಗಿಹಾಳ ಅವರು ನೇರವೇರಿಸಿಕೊಟ್ಟ್ರು. ಸಂಗೀತ ಸೇವೆಯನ್ನು ಭೀಮನಗೌಡ ಯರಗಲ, ತಬಲ ವಾದಕರಾದ ವೀರೇಶ್ ಕಟ್ಟಿ ಸಂಗಾವಿ, ಕಾರ್ಯಕ್ರಮದಲ್ಲಿ ಅಖಂಡಪ್ಪ ಸಿರವಾಳ, ಶಿವಕುಮಾರ ತುಪ್ಪದ, ಕಲ್ಯಾಣಕುಮಾರ ನಂದಿಕೋಲ, ಮಲ್ಲಕಾರ್ಜುನ ಸಜ್ಜನ, ಮುರುಗೇಂದ್ರ ಸಿರನೂರ, ರಾಮು ಹೂಗಾರ್, ಶರಣು ಮುಸಾವಳಗಿ, ಪ್ರಕಾಶ್ ಮುಡ್ಡಿ, ಬಸವರಾಜ್ ಬಸ್ತಾಳ, ತೊನಸನಹಳ್ಳಿ ಭಕ್ತರು, ಹೊನಗುಂಟಿ ಭಕ್ತರು ಇನ್ನು ಇತರರು ಇದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಮಠದ ಭಕ್ತರಾದ ಬಸವರಾಜ ಚಟ್ಟಿ ಅವರು ಮಾಡಿದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

60 mins ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

4 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

8 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

9 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

11 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420