ಕಲಬುರಗಿ: ಕಲ್ಯಾಣ ಕರ್ನಾಟಕದ ಹಿರಿಯ ಮುತ್ಸದಿ ರಾಜಕಾರಣಿ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರ ಭಾವ ಚಿತ್ರವನ್ನು ವಿರೂಪಗೊಳಿಸಿ ಆರೋಪದಲ್ಲಿ ಚಿತ್ತಾಪುರನ ಬಿಜಿಪಿ ಕಾರ್ಯಕರ್ತನ ವಿರುದ್ಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ತಾಪುರನ ತಾಲ್ಲೂಕಿನ ನಿವಾಸಿ ಅಶ್ವಥ್ ರಾಠೋಡ್ ಫೋಟೋ ವಿರೂಪಗೊಳಿಸಿ ಆರೋಪಿ. ಡಾ.ಮಲ್ಲಿಕಾರ್ಜುನ್ ಖರ್ಗೆ ಅವರ ಫೋಟೋವನ್ನು ಅವಮಾನ ರೀತಿಯಲ್ಲಿ ಎಡಿಟ್ ಮಾಡಿ ಮಲ್ಲಿಕಾರ್ಜುನ್ ಖರ್ಗೆ ಅವರೇ ನಿಮ್ಮ ಸೋಲಿಗೆ ನಿಮ್ಮ ಸುಪುತ್ರ ಕಾರಣ ಎಂದು ತಲೆ ಬರಹ ಬರೆದು ತನ್ನ ವಾಟ್ಸಪ್ ಸ್ಟೇಸ್ ಇಟ್ಟಿದ್ದ.
ಕರ್ನಾಟಕದ ಹಿರಿಯ ಮುತ್ಸದಿ ರಾಜಕಾರಣಿ ಎಂದು ಕರೆಸಿಕೊಳ್ಳುವ ರಾಷ್ಟ್ರ ಮಟ್ಟದ ಉನ್ನತ ಹುದ್ದೆಯಲ್ಲಿರುವ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರು ಅಪಾರ ಅಭಿಮಾನಿಗಳ ಬಳವನ್ನು ಹೊಂದಿದ್ದಾರೆ. ಬಿಜೆಪಿ ಕಾರ್ಯಕರ್ತನ ಕೃತ್ಯದಿಂದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಆರೋಪಿ ಅಶ್ವಥ್ ರಾಠೋಡ್ ವಿರುದ್ಧ ದೂರು ನೀಡಿ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ರಾತ್ರಿ ಪೊಲೀಸ್ ಠಾಣೆಯಲ್ಲಿ ಪಟ್ಟು ಹಿಡಿದಿದ್ದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಪುರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ, ಮುಕ್ತಾರ ಪಟೇಲ್, ವಿನೋದ ಗುತ್ತೇದಾರ್, ಸೂರ್ಯಕಾಂತ ಪೂಜಾರಿ, ಶ್ರೀಕಾಂತ ಸಿಂಧೆ, ಜಗದೀಶ ಚವ್ಹಾಣ್, ಶಿವಾಜಿ ಕಾಶಿ, ಶಿವಕಾಂತ ಬೆಣ್ಣೂರಕರ್, ಸಂತೋಷ ಪೂಜಾರಿ, ಮಲ್ಲಿಕಾರ್ಜುನ ಬೆಣ್ಣೂರಕರ್, ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…