ಶಹಾಬಾದ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಲಿಕಾ ಮನೋಭಾವವನ್ನಿಟ್ಟುಕೊಂಡು ಹೆಚ್ಚು ಹೆಚ್ಚು ವಿಷಯಗಳನ್ನು ಸತತ ಪರಿಶ್ರಮದಿಂದ ಅಭ್ಯಾಸ ಮಾಡಿದರೆ ಮಾತ್ರ ನಿರ್ದಿಷ್ಟ ಗುರಿ ಮುಟ್ಟಲು ಸಾಧ್ಯ ಎಂದು ನಗರದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಹ್ಮದ್ಅಬ್ದುಲ್ ರಹೀಮ್ ಹೇಳಿದರು.
ಅವರು ಮಂಗಳವಾರ ನಗರದ ಎಸ್.ಎಸ್.ಮರಗೋಳ ಕಾಲೇಜಿನಲ್ಲಿ ಬಿ.ಎ, ಬಿಎಸ್ಸಿ, ಬಿಕಾಂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಂಯಮದಿಂದ ಕಲಿತು ಹೆತ್ತವರಿಗೆ ಹೆಸರನ್ನು ತರಬೇಕು. ವಿದ್ಯೆ ಎನ್ನುವುದು ಯಾರು ಕದಿಯಲಾಗದ ಸಂಪತ್ತು. ಅದನ್ನು ಎಷ್ಟು ಗಳಿಸಿದರೂ ತೆರೆಗೆ ಕಟ್ಟಬೇಕಿಲ್ಲ. ಎಷ್ಟೇ ಖರ್ಚು ಮಾಡಿದರೂ ಖಾಲಿಯಾಗುವುದಿಲ್ಲ. ಬದುಕಿನ ಕೊನೆ ಉಸಿರಿರುವವರೆಗೂ ವಿದ್ಯೆಯನ್ನು ಸಂಪಾದಿಸುತ್ತಲೇ ಇರಬೇಕು.ಕಲಿತ ವಿದ್ಯೆಯನ್ನು ಸಮಾಜದ ಹಿತಕ್ಕೆ ಬಳಸಬೇಕು. ಆಗ ಮಾತ್ರ ಬದುಕಿನ ಸಾರ್ಥಕತೆ ದೊರೆಯುತ್ತದೆ.
ವಿದ್ಯಾರ್ಥಿಗಳಿಗೆ ಮನೋನಿಗ್ರಹ ಅಗತ್ಯ. ಶ್ರದ್ಧೆ ಮತ್ತು ಏಕಾಗ್ರತೆಯಿಂದ ಜ್ಞಾನಾರ್ಜನೆ ಮಾಡಬೇಕು ಎಂದರು.ಅಲ್ಲದೇ ಉನ್ನತ ಹುದ್ದೆ ಹೊಂದಿದ ಅಧಿಕಾರಿಗಳನ್ನು ನೋಡಿ, ನಾವು ಅವರಂತೆ ಆಗಬಲ್ಲೆವು ಎಂಬ ಆತ್ಮಬಲವನ್ನು ಬೆಳೆಸಿಕೊಂಡು, ಆ ಗುರಿಗಾಗಿ ಪ್ರಯತ್ನ ಪಡಬೇಕು. ವಿದ್ಯಾರ್ಥಿಗಳು ಸಮಯಕ್ಕೆ ಮಹತ್ವ ನೀಡಿ, ಮೊಬೈಲ್ಗೆ ದಾಸರಾಗದೇ ಜಾಗೃತಿಯಿಂದ ಅಭ್ಯಾಸ ಮಾಡುವುದರ ಜೊತೆಗೆ ಸರಿಯಾದ ನಿರ್ಧಾರ, ಗುರಿಯೊಂದಿಗೆ ಮುನ್ನಡೆಯಬೇಕೆಂದು ಕಿವಿಮಾತು ಹೇಳಿದರು.
ಎಸ್.ಎಸ್.ಮರಗೋಳ ಕಾಲೇಜಿನ ಪ್ರಾಂಶುಪಾಲ ಕೆ.ಬಿ.ಬಿಲ್ಲವ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ನಿರಂತರ ಪರಿಶ್ರಮದಿಂದ ಗುರಿಯಡೆಗೆ ಸಾಗಿದಾಗ ಮಾತ್ರ ಉತ್ತಮ ನಾಗರಿಕರಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದರು.
ಡಾ.ಶಂಕರ, ಡಾ.ದಶರಥ ಜಿಂಗಾಡೆ,ಪ್ರಾಧ್ಯಾಪಕರಾದ ಡಾ.ಬಸವರಾಜ ಹಿರೇಮಠ,ಗಂಗಾಧರ ಸ್ಥಾವರಮಠ, ಎಮ್.ಕೆ.ಬೋತಗಿ, ಡಾ.ಸಿ.ಬಿ ಗಂಧಿಗುಡಿ, ಡಾ.ವೆಂಕಟೇಶ ಪೂಜಾರಿ ವೇದಿಕೆಯ ಮೇಲಿದ್ದರು. ಪ್ರಮೋದ ನಾಟೀಕಾರ ನೃತ್ಯವನ್ನು ನಡೆಸಿಕೊಟ್ಟರು.ಪ್ರೀಯದರ್ಶಿನಿ ನಿರೂಪಿಸಿದರು,ವೈಷ್ಣವಿ ಸ್ವಾಗತಿಸಿದರು, ಗಗನ ವಂದಿಸಿದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಧ್ಯಾಪಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗು ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…