ಮೈಸೂರು: ಶಾಲಾಕಾಲೇಜಿನ ವಿದ್ಯಾರ್ಥಿಗಳಿಗೆ ಕೆಲವು ಕಿಡಿಗೇಡಿಗಳು ಮಾದಕ ಪದಾರ್ಥಗಳನ್ನು ಮಾರಾಟ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ವ್ಯಸನಿಗಳನ್ನಾಗಿ ಮಾಡುವ ದಂಧೆ ಹೆಚ್ಚಾಗಿ ನಡೆಯುತ್ತಿದ್ದು, ಶಾಲಾಕಾಲೇಜಿನ ಆವರಣದಲ್ಲಿ ಅಪ್ರಾಪ್ತ ರಿಗೆ ದ್ವಿಚಕ್ರವಾಹನ ಮೊಬೈಲ್ ಗೆ ಅವಕಾಶ ನೀಡದಂತೆ ಹಗೂ ಶಾಲಾ ಕಾಲೇಜಿನ ಸುತ್ತಮುತ್ತಲು ಸಿಗರೇಟ್ ವ್ಯಾಪಾರ ಸ್ಥಗಿತಗೊಳಿಸಿ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಂತೆ ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ ಅಧ್ಯಕ್ಷರಾದ ಜಾಕೀರ್ ಹುಸೇನ್ ಅವರ ನೇತೃತ್ವದಲ್ಲಿ ಮೈಸೂರು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಸಾಂಸ್ಕೃತಿಕ ನಗರಿ ಮೈಸೂರು ಇಡೀ ವಿಶ್ವದಲ್ಲಿ ಪ್ರವಾಸ ಮತ್ತು ವಿದ್ಯಾಭ್ಯಾಸಕ್ಕೆ ಹೆಸರುವಾಸಿಯಾಗಿದ್ದು, ದೇಶ ವಿದೇಶಗಳಿಂದ ರಾಜ್ಯ ಹೊರರಾಜ್ಯಗಳಿಂದ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಬಂದು ನೆಲೆಸಿದ ಕೆಲವು ಪ್ರತಿಷ್ಠಿತ ಶಾಲಾ ಕಾಲೇಜುಗಳಲ್ಲಿ ಈ ರೀತಿಯ ಮಾದಕವಸ್ತುಗಳ ಮಾರಾಟ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ಮುಖಾಂತರ ಜಗತ್ಜಾಹೀರಾಗಿದ್ದು, ಇದಕ್ಕೆ ಬಲಿಯಾಗುತ್ತಿರುವ ಅಮಾಯಕ ವಿದ್ಯಾರ್ಥಿಗಳ ಭವಿಷ್ಯ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಇನ್ನಷ್ಟು ಸದೃಢಗೊಳ್ಳಬೇಕಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಮುಂದಿನ ಭವಿಷ್ಯದ ವಾರಸುದಾರರಾದ ಯುವ ಪೀಳಿಗೆಗಳಿಗೆ ಗಾಂಜ, ಅಫೀಮ್ ನಂತಹ ನಶೆ ಹತ್ತಿಸುವ ಕೃತ್ಯ ನಡೆಯುತ್ತಿದ್ದು, ಅವರಲ್ಲಿರುವ ಕ್ರಿಯಾಶೀಲತೆಯನ್ನು ಕಳೆದುಕೊಂಡು ಜಗತ್ತಿನ ಪರಿವೇ ಇಲ್ಲದಂತೆ ವರ್ತಿಸುತ್ತಿದ್ದಾರೆ. ಶ್ರೀಮಂತ ಮನೆತನದ ವಿದ್ಯಾರ್ಥಿಗಳ ಹಾದಿಯಾಗಿ ಈ ರೀತಿಯ ಹೀನ ಕೃತ್ಯಗಳು ಬಡ ಗ್ರಾಮೀಣ ಪ್ರದೇಶಗಳಿಂದ ಬರುವ ವಿದ್ಯಾರ್ಥಿಗಳಿಗೂ ತಲುಪಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಸಮಿತಿ ಕಳವಳ ವ್ಯಕ್ತಪಡಿಸಿದೆ.
ಈ ಸಂದರ್ಭದಲ್ಲಿ ಸಮಿತಿಯ ಗೌರವಧ್ಯಕ್ಷ ಎಂ. ಚಂದ್ರಶೇಖರ್, ಪಾಲಿಕೆ ಮಾಜಿ ಮಹಾಪೌರರು ಪುರುಷೋತ್ತಮ್, ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ರಾಜ್ಯ ಕಾರ್ಯದರ್ಶಿ ಪ್ರಶಾಂತ್ ಆರ್ಯ, ಕಮಲ ಅನಂತರಾಮು, ಅರವಿಂದ ಶರ್ಮ, ರದಿವುಲ್ಲ ಖಾನ್, ಪ್ರಗತಿಪರ ಹೋರಾಟಗಾರರು ದ್ಯಾವಪ್ಪ ನಾಯ್ಕ, ಸಮಾಜಪರ ಚಿಂತಕರು ಶಿವಪ್ಪ ಸೇರಿದಂತೆ ಹಲವರು ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…