ಬಿಸಿ ಬಿಸಿ ಸುದ್ದಿ

ಪ್ರವಾಹ ಸಂತ್ರಸ್ತರ ರಕ್ಷಣೆಗೆ ಬೋಟ್ ಹತ್ತಿ ಕಾರ್ಯಚರಣೆಗಿಳಿದ ಶಾಸಕ ರಾಜುಗೌಡ

ಸುರಪುರ: ನನ್ನ ಕ್ಷೇತ್ರದ ಜನರ ರಕ್ಷಣೆ ನನ್ನ ಜವಬ್ದಾರಿಯಾಗಿದೆ.ಆದ್ದರಿಂದ ಕ್ರಷ್ಣಾ ನದಿ ಪ್ರವಾಹಕ್ಕೆ ಸಿಲುಕಿದ ಜನರ ರಕ್ಷಣೆಗೆ ಸದಾಕಾಲ ನಿಮ್ಮ ಜೊತೆಗಿರುವುದಾಗಿ ಶಾಸಕ ನರಸಿಂಹ ನಾಯಕ (ರಾಜುಗೌಡ) ಮಾತನಾಡಿ ಸಂತ್ರಸ್ತರಲ್ಲಿ ಧೈರ್ಯ ತುಂಬಿದರು.

ತಾಲ್ಲುಕಿನ ಹೆಮ್ಮಡಗಿ,ಸುಗೂರು,ತಿಂಥಣಿ,ಶೆಳ್ಳಿಗಿ ಮತ್ತಿತರೆ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳು ಆಲಿಸಿ ಮಾತನಾಡಿ, ಮಹಾರಷ್ಟ್ರದಲ್ಲಿ ಸುರಿದ ಮಹಾಮಳೆಯಿಂದಾಗಿ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿಬಿಡಲಾಗಿದೆ. ಇದರಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.ಇದಕ್ಕೆ ಸರಕಾರ ನಿಮ್ಮ ಜೊತೆಗಿದ್ದು ಪರಿಹಾರ ಒದಗಿಸಲಿದೆ. ಸಂಕಷ್ಟಕ್ಕೀಡಾದ ಜನರಿಗೆ ಸರಕಾರದಿಂದ ಅಗತ್ಯ ನೆರವು ಕೊಡಿಸುವುದಾಗಿ ಭರವಸೆ ನೀಡಿದರು. ಅಲ್ಲದೆ ಈಗ ಮನೆ ಕಳೆದುಕೊಂಡವರಿಗೆ ಶಾಸ್ವತ ಮನೆಗಳನ್ನು ಕಲ್ಪಿಸಲು ಮುಂದಾಗುವೆನು.ಅಲ್ಲದೆ ರೈತರ ಬೆಳೆಗಳ ನಷ್ಟವನ್ನು ಸರಕಾರ ಭರಿಸಲಿದೆ ಯಾವುದೆ ಕಾರಣಕ್ಕು ರೈತರು ಮತ್ತು ಸಂತ್ರಸ್ತರು ಎದೆಗುಂದದಂತೆ ಧೈರ್ಯ ತುಂಬಿದರು.

ಚೌಡೇಶ್ವರಿಹಾಳ ಗ್ರಾಮದ ನದಿ ದಂಡೆಯ ಜಮೀನಲ್ಲಿ ಮನೆ ನಿರ್ಮಿಸಿಕೊಂಡಿದ್ದ ರೈತ ವೆಂಕಟರಡ್ಡಿ ಕುಟುಂಬ ನದಿ ಪ್ರವಾಹಕ್ಕೆ ಸಿಲುಕಿ ನಡುಗಡ್ಡೆಯಂತಾದ ಮನೆಯಲ್ಲಿ ಸಿಲುಕಿ ಸಂಕಷ್ಟಕ್ಕೆ ಸಿಲುಕಿರುವ ಸುದ್ದಿ ತಿಳಿದು ನೆರೆಯ ಸ್ಥಳಕ್ಕೆ ಆಗಮಿಸಿದ ಶಾಸಕ ರಾಜುಗೌಡ ಅಗ್ನಿ ಶಾಮಕ ದಳದ ಸಿಬ್ಬಂದಿಯೊಂದಿಗೆ ಸ್ವತಃ ತಾವೇ ರಕ್ಷಣಾ ಜಾಕೇಟ್ ಧರಿಸಿ ಬೋಟ್ ಹತ್ತಿ ವೆಂಕಟರಡ್ಡಿ ಕುಟುಂಬವನ್ನು ಸುರಕ್ಷಿತವಾಗಿ ಕರೆತಂದು ಸಾಹಸ ಮೆರೆದಿದ್ದಾರೆ.ಇವರ ಜೊತೆಗೆ ಜಿಲ್ಲಾ ಪಂಚಾಯತಿ ಸದಸ್ಯ ಮರಿಲಿಂಗಪ್ಪ ಕರ್ನಾಳಕೂಡ ತೆರಳಿದ್ದರು.

ಕಾರ್ಯಾಚರಣೆ ಸಂದರ್ಭದಲ್ಲಿ ತಹಸೀಲ್ದಾರ್ ಸುರೇಶ ಅಂಕಲಗಿ,ಡಿವಾಯ್‌ಎಸ್‌ಪಿ ಶಿವನಗೌಡ ಪಾಟೀಲ,ಪಿಐ ಆನಂದರಾವ್,ಆರ್.ಐ ಗುರುಬಸಪ್ಪ ಹಾಗು ಮುಖಂಡರಾದ ಬಿ.ಎಂ.ಅಳ್ಳಿಕೋಟೆ,ದೊಡ್ಡ ದೇಸಾಯಿ ದೇವರಗೋನಾಲ,ಎಸ್.ಎನ್.ಪಾಟೀಲ,ದುರಗಪ್ಪ ಗೋಗಿಕೇರಾ,ಶ್ರೀನಿವಾಸ ನಾಯಕ ದರಬಾರಿ,ಭೀಮಣ್ಣ ಬೇವಿನಹಾಳ,ದೇವರಾಜ ಮಕಾಶಿ,ನರಸಿಂಹಕಾಂತ ಪಂಚಮಗಿರಿ,ಜಗದೀಶ ಪಾಟೀಲ,ವಿರುಪಾಕ್ಷಿ ಕೋನಾಳ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗು ರಾಜುಗೌಡರ ಬೆಂಬಲಿಗರಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

57 mins ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

4 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

8 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

9 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

11 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420