ಸುರಪುರ:ತಾಲೂಕಿನ ಖಾನಾಪುರ ಎಸ್.ಹೆಚ್ (ರುಕ್ಮಾಪುರ) ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುರಪುರ ಹಾಗೂ ಅಜೀಮ್ ಪ್ರೇಮಜೀ ಫೌಂಡೇಷನ್ ಸಹಯೋಗದಲ್ಲಿ ಬಾಲ ಮೇಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಅಜೀಮ್ ಪ್ರೇಮಜೀ ಫೌಂಡೆಷನನ್ ಸಂಪನ್ಮೂಲ ವ್ಯಕ್ತಿ ಅನ್ವರ ಜಮಾದಾರ ಮಾತನಾಡುತ್ತಾ, ಮೂರು ವರ್ಷದ ಬುದ್ಧಿ ನೂರು ವರುಷದತನಕ ಎಂಬಂತೆ, ಮಕ್ಕಳು ದೈಹಿಕವಾಗಿ, ಭೌಧ್ದಿಕವಾಗಿ ಬೆಳೆಯುವಲ್ಲಿ ಉತ್ತಮವಾಗಿರುವಂತಹ ಕಲಿಕಾ ಪರಿಸರ ಅಂಗನವಾಡಿಗಳಲ್ಲಿ ಲಭಿಸುವುದು ತುಂಬಾ ಮುಖ್ಯವಾಗಿದೆ. ಮಕ್ಕಳಿಗೆ ಆರಂಭಿಕ ದಿನಗಲ್ಲಿ ಕಲಿಕೆಗೆ ಸಿದ್ಧಗೊಳಿಸುವಂತಹ ವಾತಾವರಣ ನಿರ್ಮಿಸುವುದು ಅವಶ್ಯಕವಾಗಿದೆ. ರುಕ್ಮಾಪುರದ ಅಂಗನವಾಡಿ ಕೇಂದ್ರಗಳು ಮಕ್ಕಳಿಗೆ ತುಂಬಾ ಉತ್ತಮವಾದಂತಹ ಕಲಿಕಾ ಪರಿಸರವನ್ನು ನಿರ್ಮಾಣ ಮಾಡಿವೆ ಎಂದು ಅಭಿಪ್ರಾಯಪಟ್ಟರು.

ಅಂಗನವಾಡಿ ಮೇಲ್ವಿಚಾರಕಿ ಶಶಿಕಲಾ ಗಾಳಿ ಮಾತನಾಡಿ, ಅಜೀಮ್ ಪ್ರೇಮಜೀ ಫೌಂಡೇಷನ ಸಹಯೋಗದಲ್ಲಿ ಅಂಗನವಾಡಿ ಮಕ್ಕಳಿಗಾಗಿ ಹಮ್ಮಿಕೊಂಡಿರುವ ಬಾಲ ಮೇಳ ಯಾದಗಿರಿ ಜಿಲ್ಲೆಯಲ್ಲಿಯೇ ಪ್ರಥಮವಾಗಿದೆ. ಬಹಳಷ್ಟು ಪಾಲಕರು, ಮಕ್ಕಳೊಂದಿಗೆ ಭಾಗವಹಿಸಿ ವಿವಿಧ ಚಟುವಟಿಕೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಿಪಡಿಸಿರುವುದು ಅತ್ಯಂತ ಸಂತೋಷವಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಪಿಡಿಓ ಸಂಗೀತಾ, ಗಾಮ ಪಂಚಾಯಿತಿ ಅಧ್ಯಕ್ಷರಾದ ಶರಣಮ್ಮ ಕುದುರೆ, ಉಪಧ್ಯಾಕ್ಷರು ಯಂಕೋಬಾ ದಾಸರು, ಮುಖ್ಯ ಗುರು ಶರಣಬಸಮ್ಮ ಭಾಗವಹಿಸಿ ಮಾತನಾಡಿದರು.ಅಂಗನವಾಡಿ ಮಹಿಳಾ ಮೇಲ್ವಿಚಾರಕಿಯರಾದ ಪದ್ಮಾನಾಯಕ, ಜಯಶ್ರೀ ಬಿರಾದಾರ,ಬಾಗಮ್ಮ,ಶರಣಮ್ಮ ದೇಸಾಯಿ,ಮಹಾದೇವಿ, ಅಂಗನವಾಡಿ ಶಿಕ್ಷಕಿಯರಾದ ಸಂಗೀತಾ, ಅಕ್ಕಮಹಾದೇವಿ, ಸರಸ್ವತಿ, ಜಯಶ್ರೀ, ಸಿ ಆರ್.ಪಿ ಶಿವುಕುಮಾರ ಕಮತಗಿ, ಅಂಗನವಾಡಿ ಸಹಾಯಕಿಯರು, ಆಶಾ ಕಾಯಕರ್ತೆಯರು, ಅರೋಗ್ಯ ಇಲಾಖೆಯ ಸವಿತಾ ಲೋಖರೆ, ಮಾಲಾ ನಾಯಕ ಅಜೀಮ್ ಪ್ರೇಮಜೀ ಫೌಂಡೇಷನನ್ ಸಂಪನ್ಮೂಲ ವ್ಯಕ್ತಿಗಳಾದ ಕವಿತಾ, ಮುತ್ತುರಾಜು, ರಾಜಶೇಖರ ರಾಜೇಶ, ಜಗದೇವಿ, ವಿನೋದಕುಮಾರ, ಶರಣ್ಯ, ಚಂದನಾ, ಪರಮಣ್ಣ ತೇಜಸ್ವಿನಿ, ಕೃಷ್ಣಯ್ಯ, ಅಕ್ಷರ, ರುಕ್ಮಾಪುರ ಗ್ರಾಮದ ಪಾಲಕ ಪೋಷಕರು ಭಾಗವಹಿಸಿದ್ದರು.ಮಹಿಳಾ ಮೇಲ್ವಿಚಾರಕಿ ಸಾವಿತ್ರಿ ಗಾಳಿ ಕಾರ್ಯಕ್ರಮದ ಕುರಿತು ನಿರೂಪಿಸಿ ವಂದಿಸಿದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

9 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

12 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

17 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

17 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

19 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420