ಗಣಿತ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರ

ಕಲಬುರಗಿ: ಸಾರ್ವಜನಿಕ ಶಿಕ್ಷಣ ಇಲಾಖೆ ಕಲಬುರಗಿ, ಕರ್ನಾಟಕರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘ ಹಾಗೂ ಎನ್.ಪಿ.ಎಸ್. ಪದವಿ ಪೂರ್ವಕಾಲೇಜು ಇವರುಗಳ ಸಂಯುಕ್ತಆಶ್ರಯದಲ್ಲಿ ಶಹಾಬಾದ ರಸ್ತೆಯಲ್ಲಿರುವ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ 300 ಪ್ರೌಢ ಶಾಲಾ ಗಣಿತ ಬೋಧಿಸುವ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರ ಆಯೋಜಿಸಲಾಯಿತು.

ಕಾರ್ಯಾಗಾರವನ್ನು ಉಪನಿರ್ದೆಶಕರ ಕಛೇರಿಯ ವಿಷಯ ಪರಿವೀಕ್ಷರಾದ ಕರಬಸಯ್ಯ ಮಠ ಅವರು ಉದ್ಘಾಟಿಸಿ ಮಾತನಾಡಿ ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಗಣಿತ, ವಿಜ್ಞಾನ ಹಾಗೂ ಇಂಗ್ಲೀಷ ವಿಷಯಗಳು ಕಠಿಣವಾಗಿದ್ದು, ಈ ವಿಷಯ ಶಿಕ್ಷಕರಿಗೆ ಹೊಸ ಬೋಧನಾ ತಂತ್ರಗಳು ಹಾಗು ವಿಧಾನಗಳನ್ನು ಪರಿಚಯಿಸಲು ವಾರ್ಷಿಕ ಕನಿಷ್ಠ ಎರಡು ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುವುದು ಅಗತ್ಯವಾಗಿದೆ. ಈ ಕೆಲಸವನ್ನು ಇಲಾಖೆಯ ಜೊತೆ ಕೈಗೂಡಿಸಿ ಕರ್ನಾಟಕರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘ ಹಾಗೂ ಎನ್.ಪಿ.ಎಸ್. ಪದವಿ ಪೂರ್ವಕಾಲೇಜು ಕಲಬುರಗಿರವರು ರಾಜ್ಯ ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ಕಾರ್ಯಾಗಾರ ನಡೆಸುತ್ತಿರುವುದು ಉತ್ತಮಕಾರ್ಯವಾಗಿದೆ ಎಂದರು.

ಸಂಘದ ಅದ್ಯಕ್ಷ ಮಹೇಶ ಹೂಗಾರ ಅವರು ಪ್ರಾಸ್ತವಿಕ ಮಾತನಾಡಿ ಮಕ್ಕಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ ಮಾಡುವುದು ನಮ್ಮೆಲ್ಲರಜವಾಬ್ದಾರಿ ಇದೆ. ನಾವೆಲ್ಲರೂ ಇದನ್ನು ಸಮರ್ಪಕವಾಗಿ ನಿಭಾಯಿಸಬೇಕು. ಸಂಘ ಎಲ್ಲ ಶೈಕ್ಷಣಿಕ ಚಟುವಟಿಕೆ ಅಭಿವೃದ್ದಿ ಪಡಿಸಲು ಸಹಕರಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸ್ಥೆಯ ಅಧ್ಯಕ್ಷ ಶಶೀಲ ಜಿ. ನಮೋಶಿ ರವರು ಮಾತನಾಡಿ ನಮ್ಮ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಪ್ರಗತಿ ಕಾಣಬೇಕಾದರೆ ಶಿಕ್ಷಕರ ಪಾತ್ರತುಂಬಾ ಹಿರಿದಾಗಿದೆ. ಶಿಕ್ಷಕರು ಮನಸ್ಸು ಮಾಡಿದರೆಏನೆಲ್ಲ ಸಾಧನೆಆಗುತ್ತದೆ. ಶಿಕ್ಷಕರಿಂದ ಮಾತ್ರ ಈ ಭಾಗದ ಪ್ರಗತಿ ಸಾದ್ಯಎಂದು ತಿಳಿಸಿದರು.

ಈ ಕಾರ್ಯಾಗಾರದಲ್ಲಿ ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ಅನಿಲಕುಮಾರ ಸ.ಶಿ. ಸರಕಾರಿ ಪ್ರೌಢ ಶಾಲೆ ಅರಳಲುಸಂದ್ರ ತಾ.ಜಿ. ರಾಮನಗರ ಹಾಗೂ ಶಶಿಕಾಂತ ಜೋಶಿ ಸ.ಶಿ. ಸ.ಹಿ.ಪ್ರಾ.ಶಾ. ಔರಾದತಾ. ಜಿ. ಬೀದರರವರು ಭಾಗವಹಿಸಿ ಎಲ್ಲ ಶಿಕ್ಷಕರಿಗೆ ಹೊಸ ವಿಷಯ ಪರಿಚಯಿಸುವುದರೊಂದಿಗೆ ಎಲ್ಲ ಶಿಕ್ಷಕರ ಸಮಸ್ಯೆಗಳಿಗೆ ಉತ್ತಮರೀತಿಯಲ್ಲಿ ಪರಿಹಾರ ನೀಡಿದರು.

ತರಬೇತಿಕಾರ್ಯಾಗಾರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಕ್ರೆಪ್ಪಗೌಡ ಬಿರಾದಾರ ಅವರು ಮದ್ಯಾಹ್ನದ ವರೆಗೆ ಆಸಕ್ತಿಯಿಂದ ತರಬೇತಿ ವೀಕ್ಷಿಸಿದರು.

ಕಾರ್ಯಕ್ರಮದ ನಿರೂಪಣೆ ಮುರಳಿಧರ ಟೊಣಪೆ ಮಾಡಿದರು, ಕಲ್ಲಹಂಗರಗಾ ಪ್ರೌಢ ಶಾಲೆಯ ಶಿಕ್ಷಕರಾದ ಶ್ರೀನಿವಾಸ ನಾಲವಾರರವರು ಸ್ವಾಗತಿಸಿದರು. ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಜಮೀಲ್ ಇಮ್ರಾನ್ ಅಹ್ಮದ್, ಸಂಸ್ಥೆಯ ನಿರ್ದೇಶಕರಾದ ವಿಶ್ವನಾಥ ಖುಬಾ ರವರು ಭಾಗವಹಿಸಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

1 hour ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

4 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

8 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

9 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

11 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420