ಸುರಪುರ: ಮಹಾರಾಷ್ಟ್ರದಲ್ಲಿನ ಕೋಯ್ನಾ ಆಣೆಕಟ್ಟಿನಿಂದ ಅಪಾರ ಪ್ರಮಾಣದ ನೀರು ಕೃಷ್ಣಾ ನದಿಗೆ ಹರಿಬಿಟ್ಟಿದ್ದರಿಂದ ಇಂದು ತಾವೆಲ್ಲ ಸಂಕಷ್ಟ ಪಡುವಂತಾಗಿದೆ.ತಾಔಉ ಯಾವುದೆ ರೀತಿಯ ಚಿಂತೆಗೀಡಾಗಬೇಡಿ,ನಿಮ್ಮೊಂದಿಗೆ ನಾನಿರುವೆ ಎಂದು ಶಾಸಕ ನನಸಿಂಹ ನಾಯಕ(ರಾಜುಗೌಡ) ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.
ನಗರದ ಎಪಿಎಂಸಿಯಲ್ಲಿ ತೆರೆಯಲಾದ ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಶೆಳ್ಳಿಗಿ,ಹೆಮ್ಮಡಿಗಿ,ಮುಷ್ಠಳ್ಳಿ ಮತ್ತಿತರೆ ಗ್ರಾಮಗಳ ನೆರೆ ಸಂತ್ರಸ್ತರಿಗೆ ಭೇಟಿ ಮಾಡಿ ಮಾತನಾಡಿ,ಸರಕಾರ ತಮಗೆ ಎಲ್ಲಾ ರೀತಿಯ ನೆರವು ನೀಡಲಿದೆ.ತಮ್ಮ ಬದುಕನ್ನು ಕಟ್ಟಿಕೊಡುವ ಎಲ್ಲಾ ಪ್ರಯತ್ನವನ್ನು ಸರಕಾರ ಮಾಡಲಿದೆ.ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರಿಗೆ ನಿಮ್ಮೆಲ್ಲರ ಸಂಕಷ್ಟದ ಕುರಿತು ಮನವರಿಕೆ ಮಾಡಿದ್ದು,ಬೆಳೆ ಪರಿಹಾರ ಸೇರಿದಂತೆ ಎಲ್ಲಾ ನೆರವು ದೊರಕಿಸುವುದಾಗಿ ಜನತೆಯಲ್ಲಿ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ ಸುರೇಶ ಅಂಕಲಗಿ,ಜಿಲ್ಲಾ ಪಂಚಾಯತಿ ಸದಸ್ಯ ಮರಿಲಿಂಗಪ್ಪ ಕರ್ನಾಳ,ಎಪಿಎಂಸಿ ಸದಸ್ಯ ದುರಗಪ್ಪ ಗೋಗಿಕೇರಾ,ಭೀಮಣ್ಣ ಬೇವಿನಾಳ,ದೇವರಾಜ ಮಕಾಶಿ ,ವಿರುಪಾಕ್ಷಿ ಕೋನಾಳ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…