ಬಿಸಿ ಬಿಸಿ ಸುದ್ದಿ

ಬುಡಕಟ್ಟು ಜನರಿಗೆ ಸಹಕಾರ ನೀಡುವುದು ಎಲ್ಲರ ಜವಬ್ದಾರಿಯಾಗಲಿ: ಕೆಂಭಾವಿ ಶ್ರೀ

ಸುರಪುರ: ಭಾರತ ದೇಶಕ್ಕೆ ಅದರದ್ದೆ ಆದ ಇತಿಹಾಸ ಮತ್ತು ಸಂಸ್ಕೃತಿ ಇದೆ.ಇಂತಹ ದೇಶದಲ್ಲಿ ಈಗಲೂ ಬುಡಕಟ್ಟು ಜನರು ಸೌಲಭ್ಯ ವಂಚಿತರಾಗಿರುವುದು ಬೇಸರದ ಸಂಗತಿಯಾಗಿದೆ.ಆದ್ದರಿಂದ ಬುಡಕಟ್ಟು ಜನರಿಗೆ ಸಹಕಾರ ನೀಡುವುದು ಎಲ್ಲರ ಜವಬ್ದಾರಿಯಾಗಲಿ ಎಂದು ಕೆಂಭಾವಿ ಹಿರೇಮಠದ ಚೆನ್ನಬಸವ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.

ತಾಲ್ಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಶ್ರೀಗುರು ಸೇವಾ ಸಂಸ್ತೆಯಿಂದ ಹಮ್ಮಿಕೊಂಡಿದ್ದ ವಿಶ್ವ ಬುಡಕಟ್ಟು ದಿನಾಚರಣೆ ಸರಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಬುಡಕಟ್ಟು ದಿನಕ್ಕೆ ತನ್ನದೆ ಆದ ಇತಿಹಾಸವಿದೆ.ಇಂಗ್ಲೆಂಡಿನ ಚಿಂತಕ ವೆರಿಯರ್ ಎಲ್ವಿನ್ ಎಂಬುವವರು ಭಾರತದಲ್ಲಿ ವಾಸಿಸುವಾಗ,ಇಲ್ಲಿನ ಬುಡಕಟ್ಟು ಸಮುದಾಯಗಳ ಬಗ್ಗೆ ಅಭ್ಯಾಸ ನಡೆಸಿ, ಅವರ ಅಭೀವೃಧ್ಧಿಗೆ ಮೊದಲು ಆದ್ಯತೆ ನೀಡಿದವರು.ಇವರ ನೆನಹಿನಲ್ಲಿ ಆದಿವಾಸಿಗಳನ್ನು ಮುಖ್ಯವಾಹಿನಿಗೆ ತರುವ ಸಲುವಾಗಿ ೧೯೦೪ರ ಆಗಸ್ಟ್ ೦೯ ರಂದು ವಿಶ್ವ ಬುಡಕಟ್ಟು ದಿನವನ್ನು ಆಚರಿಸಲಾಯಿತು. ಅಂದಿನಿಂದ ನಿರಂತರವಾಗಿ ಆದಿವಾಸಿಗಳು ಮತ್ತು ಅಡವಿಗಳಲ್ಲಿ ವಾಸಿಸುವ ಅಲೆಮಾರಿ ಬುಡಕಟ್ಟು ಜನರ ಅಭೀವೃಧ್ಧಿಗಾಗಿ ಯೋಜನೆಗಳನ್ನು ರೂಪಿಸುತ್ತಾ ಸಮಾಜದ ಮುಖ್ಯವಾಹಿನಿಗೆ ತರಲಾಗುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಮಲ್ಲು ಬಾದ್ಯಾಪುರ ಮಾತನಾಡಿ,ಸ್ವಾತಂತ್ರ್ಯ ಸಿಕ್ಕು ಏಳು ದಶಕಗಳಾದರೂ ಇಂದಿಗೂ ನಮ್ಮ ರಾಜ್ಯ ಸೇರಿದಂತೆ ಅನೇಕ ಕಡೆಗಳಲ್ಲಿ ಆದಿವಾಸಿಗಳು ಸೌಲಭ್ಯ ವಂಚಿತರಾಗಿ ಜೀವನ ಸಾಗಿಸುತ್ತಿದ್ದಾರೆ.ಅವರ ಅಭೀವೃಧ್ಧಿಗೆ ಸರಕಾರಗಳು ಗಂಭೀರವಾಗಿ ಚಿಂತನೆ ನಡೆಸಿ ಅವರ ಸಮಸ್ಯೆಗಳ ಪರಿಹರಿಸಬೇಕೆಂದು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ತಾಲ್ಲೂಕು ಪಂಚಾಯತಿ ಸದಸ್ಯ ದೊಡ್ಡ ಕೊತಲೆಪ್ಪ ಹಾವಿನ್,ದಂಡಪ್ಪ,ಮಡಿವಾಳ,ದೇವಿಂದ್ರಪ್ಪಗೌಡ ಪೊಲೀಸ್ ಪಾಟೀಲ ವೇದಿಕೆ ಮೇಲಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

5 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

8 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

12 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

13 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

15 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420