ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೇತೃತ್ವದಲ್ಲಿ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಸಿದ್ದಂಗಂಗಾದ ಲಿಂ: ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 4ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಅನ್ನ ದಾಸೋಹ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಲಿಂ:ಡಾ:ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಭಾವಚಿತ್ರಕ್ಕೆ ನಗರದ ಕಬಾಡಗೇರಾದ ನಿಷ್ಠಿ ಕಡ್ಲೆಪ್ಪನವರ ವಿರಕ್ತ ಮಠದ ಶ್ರೀ ಪ್ರಭುಲಿಂಗ ಮಹಾಸ್ವಾಮೀಜಿಯವರು ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ನಂತರ ಪುಷ್ಪಾರ್ಚನೆ ಮಾಡಿ ವಂದಿಸಿದರು.
ನಂತರ ನಡೆದ ಅನ್ನ ದಾಸೋಹ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಜಾತಾ ವೇಣುಗೋಪಾಲ ನಾಯಕ ಜೇವರ್ಗಿ,ಉಪಾಧ್ಯಕ್ಷ ಮಹೇಶ ಪಾಟೀಲ್,ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಭಾಗವಹಿಸಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮುಖಂಡರಾದ ರಾಜಾ ಮುಕುಂದ ನಾಯಕ,ಬಸವರಾಜ ಜಮದ್ರಖಾನಿ,ವಿರೇಶ ನಿಷ್ಠಿ ದೇಶಮುಖ,ಪ್ರಕಾಶ ಸಜ್ಜನ್,ಮಹಾಸಭೆ ತಾಲೂಕು ಅಧ್ಯಕ್ಷ ಮಂಜುನಾಥ ಜಾಲಹಳ್ಳಿ,ವಿರೇಶ ಪಂಚಾಂಗಮಠ,ಪ್ರಕಾಶ ಅಂಗಡಿ ಕನ್ನೆಳ್ಳಿ,ಜಯಲಲಿತಾ ಪಾಟೀಲ್,ಪ್ರದೀಪ ಕದರಾಪುರ,ರವಿಗೌಡ ಹೆಮನೂರ,ಜಗದೀಶ ಪಾಟೀಲ್,ಸೂಗುರೇಶ ಮಡ್ಡಿ,ಮಲ್ಲಿಕಾರ್ಜುನರೆಡ್ಡಿ ಅಮ್ಮಾಪುರ, ಮಲ್ಲು ಬಾದ್ಯಾಪುರ,ಪ್ರಕಾಸ ಅಂಗಡಿ ಹೆಮ್ಮಡಗಿ,ಭೀಮು ಹಳ್ಳದ, ಮಲ್ಲು ಹೂಗಾರ,ಶರಣು ಬಳಿ ಜಾಲಿಬೆಂಚಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…