ಕಲಬುರಗಿ; ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಭಾರತ ದೇಶದ ಮಾನವೀಯ ಮೌಲ್ಯಗಳನ್ನು ಪ್ರಸಾರ ಮಾಡಿರುವ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ವಾಣಿಗಳು ಸತ್ಯದ ಪ್ರತಿಬಿಂಬ ಆಗಿವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಸುರೇಶ ಬಡಿಗೇರ ಹೇಳಿದರು.
ನಗರದ ಶ್ರೀಮತಿ ಪಿಲ್ಲು ಹೋಮಿ ಇರಾನಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಭಾಗವಹಿಸಿ ಮಾತನಾಡಿದರು.
ಸ್ವಾರ್ಥ ಎಂಬುದು ಅಧರ್ಮ, ನಿಸ್ವಾರ್ಥ ಎಂಬುದು ಧರ್ಮ ಎಂದು ಹೇಳಿದ ಸ್ವಾಮಿ ವಿವೇಕಾನಂದರಿಗೆ ಕರ್ನಾಟಕದ ಮೈಸೂರು ಮಹಾರಾಜರು ಧನ ಸಹಾಯ ಮಾಡಿ ಚಿಕಾಗೋ ನಗರಕ್ಕೆ ಹೋಗಲು ನೆರವಾಗಿದ್ದು ಇತಿಹಾಸ ಇದೆ ಎಂದು ಉದಾಹಣೆ ಸಮೇತ ವಿವರಿದರು.
ಕಾರ್ಯಕ್ರಮ ಉದ್ಘಾಟಿಸಿದ ಸಣ್ಣ ನೀರಾವರಿ ಇಲಾಖೆಯ ಅಧಿಕ್ಷಿಕ್ ಅಭಿಯಂತರರಾದ ಡಾ. ಸುರೇಶ ಶರ್ಮಾ ಅವರು ಮಾತನಾಡಿ, ಇಂದಿನ ಯುವಕರು ಸಿನೆಮಾ ತಾರೆಯರನ್ನು ಮಾದರಿಯನ್ನಾಗಿ ಇಟ್ಟಿಕ್ಕೊಳ್ಳದೆ, ಸ್ವಾಮಿ ವಿವೇಕಾನಂದ ಹಾಗೂ ಬಾಬಾಸಾಹೇಬ್ ಅಂಬೇಡ್ಕರ್ ಅವರಂತಹ ಶ್ರೇಷ್ಟ ನಾಯಕರನ್ನು ಮಾಡಿ ಮಾದರಿಯನ್ನಾಗಿ ಇಟ್ಟುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಇನ್ನೋರ್ವ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಾತೆ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ದಕ್ಷಿಣ ಘಟಕದ ಪ್ರಧಾನ ಕಾರ್ಯದರ್ಶಿಗಳದ ನಂದಿನಿ ಸನಬಾಲ ಅವರು ಮಾತನಾಡಿ ಪ್ರಯತ್ನಕ್ಕೆ ಪರ್ಯಾಯ ಮಾರ್ಗ ಇನ್ನೊಂದಿಲ್ಲ, ವಿದ್ಯಾರ್ಥಿಗಳು ಕಷ್ಟ ಪಟ್ಟು ಓದುವುದಕ್ಕಿಂತ ಇಸ್ಟ ಪಟ್ಟು ಓದಬೇಕು ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ಡಾ. ಜ್ಯೋತಿ ಸ್ವಾಮಿ ಅವರು, ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಆದರ್ಶಗಳು ವಿಶೇಷವಾಗಿ ಯುವಕರಿಗೆ ಮಾದರಿ ಆಗಿವೆ. ಸ್ವಾಮಿ ವಿವೇಕಾನಂದರ ಅವರು ಮಹಿಳೆಯರ ಬಗ್ಗೆ ಅನೇಕ ಅಭಿವೃದ್ಧಿ ಪರ ಹಿತವಚನಗಳು ಹೇಳಿದ್ದಾರೆ ಎಂದು ಹೇಳಿದರು.
ಉಪನ್ಯಾಸಕರಾದ ಸವಿತಾ ಅವರು ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರಗಳು ವಿತರಿಸಲಾಯಿತು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…