ಬೋಸ್125ನೇ ಜನ್ಮದಿನಾರಣೆ ಸಮಾರೋಪ; ಬೃಹತ್ ಮೆರವಣಿಗೆ

ಕಲಬುರಗಿ; ಇಂದು ಎಐಡಿಎಸ್‍ಓ ಜಿಲ್ಲಾ ಸಮಿತಿಯಿಂದ ನೇತಾಜಿ ಅವರ 125ನೇ ಜನ್ಮ ವμರ್Áಚರಣೆಯ ಸಮಾರೋಪ ಕಾರ್ಯಕ್ರಮ ಕನಡ ಭವನದಲ್ಲಿ ನಡೆಯಿತು.

ನಗರದ ರೈಲ್ವೆ ನಿಲ್ದಾಣ ದಿಂದ ಮೆರವಣಿಗೆ ಪ್ರಾರಂಭವಾಗಿ ಕನ್ನಡ ಭವನದ ಮೈದಾನದಲ್ಲಿ ಮುಕ್ತಾಯಗೊಂಡಿತು. ಮೆರವಣಿಗೆ ಉದ್ದಕ್ಕೂ ನೂರಾರು ವಿದ್ಯಾರ್ಥಿಗಳು ‘ನೇತಾಜಿ ಜಿಂದಾಬಾದ್’, ‘ನೇತಾಜಿ ನಮ್ಮ ಆದರ್ಶ’, ‘ನೇತಾಜಿ ವಿಚಾರ ಎಲ್ಲಾ ಕಡೆ ಹರಡಲಿ’, ‘ವಿದ್ಯಾರ್ಥಿಗಳ ಒಗ್ಗಟ್ಟು ಚಿರಾಯುವಾಗಲಿ’, ಎಂಬ ಘೋಷಣೆ ಕೂಗುವ ಮೂಲಕ ನೇತಾಜಿ ಸುಭಾμï ಚಂದ್ರ ಬೋಸ್ ರವರಿಗೆ ಗೌರವ ನಮನ ಸಲ್ಲಿಸಿದರು.

ಈ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ ಎಐಕೆಕೆಎಮ್‍ಎಸ್ ನ ರಾಜ್ಯ ಅಧ್ಯಕ್ಷರಾದ ಶ್ರೀ ಹೆಚ್.ವಿ ದಿವಾಕರ್ ಅವರು ನೇತಾಜಿ ಸುಭಾμï ಚಂದ್ರ ಬೋಸ್ ಅಂದರೆ ಇಡೀ ದೇಶದ ವಿದ್ಯಾರ್ಥಿ-ಯುವಜನರ ಸ್ಪೂರ್ತಿ. ವಿದ್ಯಾರ್ಥಿಗಳು ನೇತಾಜಿ ಅವರು ನಡೆಸಿದ ಜೀವನ ಸಂಘರ್ಷ ಕುರಿತು ತಿಳಿದರೆ ಸಾಕಾಗುವುದಿಲ್ಲ, ಆ ವಿಚಾರವನ್ನು ಮೈಗೂಡಿಸಿಕೊಂಡರೆ ಆದುವೇ ನೇತಾಜಿ ಅವರಿಗೆ ನೀಡುವ ಸರಿಯಾದ ಗೌರವ ಎಂದು ನುಡಿದರು.

ಈ ಕಾರ್ಯಕ್ರವನ್ನು ಉದ್ದೇಶಿಸಿ ಎಐಡಿಎಸ್‍ಓ ಕಲಬುರಗಿ ಜಿಲ್ಲಾ ಅಧ್ಯಕ್ಷರಾದ ಹಣಮಂತ ಎಸ್ ಹೆಚ್ ಅವರು ಮಾತನಾಡಿ ನೇತಾಜಿ ಸುಭಾμï ಚಂದ್ರ ಬೋಸ್ ರವರಂತಹ ವಿಚಾರ ಇಂದಿಗೂ ಪ್ರಸ್ತುತವಾಗಿವೆ. ಎಲ್ಲಾರಿಗೂ ವೈಜ್ಞಾನಿಕ – ಧರ್ಮನೀರಪೇಕ್ಷ – ಪ್ರಜಾತಾಂತ್ರಿಕ ಶಿಕ್ಷಣ ಸಿಗಬೇಕು ಎಂಬುದು ಅವರ ಕನಸು.

ಆದರೆ ಅವರ ಕನಸು ಕನಸಾಗಿಯೇ ಉಳಿದಿದೆ.! ನನಸು ಮಾಡುವ ಜವಾಬ್ದಾರಿ ದೇಶದ ವಿದ್ಯಾರ್ಥಿ-ಯುವಜನರ ಮೇಲಿದೆ. ಅವರ ವಿಚಾರಗಳ ಆಧಾರದ ಮೇಲೆ ಎಐಡಿಎಸ್‍ಓ ನಿರಂತರವಾಗಿ ಹಲವಾರು ವಿದ್ಯಾರ್ಥಿ ಚಳುವಳಿಗಳನ್ನು ಸಂಘಟಿಸುತ್ತಿದೆ. ಅವರ 125ನೇ ವμರ್Áಚರಣೆಯ ಭಾಗವಾಗಿ ಹಲವು ಚಟುವಟಿಕೆಗಳು, ವಿದ್ಯಾರ್ಥಿಗಳ ಶಿಬಿರಗಳು, ವಿಚಾರ ಸಂಕಿರಣ ಮತ್ತು ಜಿಲ್ಲಾ ಹಾಗೂ ರಾಜ್ಯ ಮಟ್ಟದ ಸಾಂಸ್ಕøತಿಕ ಸ್ಪರ್ಧೆಗಳು ಮತ್ತು ಇನ್ನಿತರೆ ಕಾರ್ಯಚಟುವಟಿಕೆಗಳು ಸಂಘಟಿಸುವ ಮೂಲಕ ಜಿಲ್ಲೆಯ ಸಾವಿರಾರು ವಿದ್ಯಾರ್ಥಿಗಳಿಗೆ ನೇತಾಜಿಯ ವಿಚಾರಗಳನ್ನು ಎಐಡಿಎಸ್‍ಓ ಪರಿಚಯ ಮಾಡಿದೆ ಎಂದು ಹೇಳಿದರು.

ಗುಲ್ಬರ್ಗಾ ವಿಶ್ವವಿದ್ಯಾಲಯದ ಚಿತ್ರಕಲಾ ವಿಭಾಗದ ಊ.ಔ.ಆ ಡಾ. ಮಲ್ಲಿಕಾರ್ಜುನ ಬಾಗೊಡಿ ಸರ್ ಅವರು ಹಾಗೂ ಎಐಡಿಎಸ್‍ಓ ಜಿಲ್ಲಾ ಉಪಾಧ್ಯಕ್ಷರಾದ ಸ್ನೇಹಾ ಕಟ್ಟಿಮನಿ ರವರು ವೇದಿಕೆ ಮೇಲೆ ಉಪಸ್ಥಿತರಿದ್ದರು, ಜಿಲ್ಲಾ ಕಾರ್ಯದರ್ಶಿ ತುಳಜರಾಮ ಎನ್ ಕೆ ರವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಅಲ್ಲದೇ ಇತ್ತೀಚೆಗೆ ನಡೆದ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು ಅತ್ಯಂತ ಸ್ಪೂರ್ತಿಯಿಂದ ನಡೆಯಿತು. ಇದರಲ್ಲಿ 450ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಎಐಡಿಎಸ್‍ಓ ಜಿಲ್ಲಾ ಸಮಿತಿ ಸದಸ್ಯರಾದ ಶಿಲ್ಪಾ ಬಿ ಕೆ, ವೆಂಕಟೇಶ್ ದೇವದುರ್ಗಾ, ಅರುಣ್ ಹಿರೆಬಾನರ್, ಪ್ರೀತಿ ದೊಡ್ಡಮನಿ, ಗೊವಿಂದ ಯಳವಾರ, ನಾಗರಾಜ್ ರಾವೂರ, ಕಿರಣ್ ಮಾನೆ, ಸಿದ್ದಾರ್ಥ, ಬಾಬೂ ಪವರ್, ಯುವರಾಜ್ ರಾಠೋಡ, ಅಮಿತ್, ಸಾಬಣ್ಣ, ಜೈ ಭೀಮ್ ದಾಸ್, ಸೇರಿ ನೂರಾರೂ ವಿದ್ಯಾರ್ಥಿಗಳು ಭಾಗವಹಿಸದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

11 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

14 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

18 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

19 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

21 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420